AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MLC ತೇಜಸ್ವಿನಿ ಗೌಡ ವಿರುದ್ಧ ಹಲ್ಲೆ ಆರೋಪ, ದೂರು ದಾಖಲಿಸಿದ ಗ್ರಾಮಸ್ಥರು

ದೇವನಹಳ್ಳಿ: ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದೆ. MLC ತೇಜಸ್ವಿನಿ ಗೌಡ ಗ್ರಾಮಸ್ಥರ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡರಾಯಪ್ಪನಹಳ್ಳಿಯಲ್ಲಿ ನಡೆದಿದೆ. ಶಾಲಾ ಕಟ್ಟಡ ಕಾಮಗಾರಿ ವಿಚಾರವಾಗಿ ಗ್ರಾಮಸ್ಥರ ಮೇಲೆ ದೌರ್ಜನ್ಯ ನಡೆದಿದ್ದು, ತೇಜಸ್ವಿನಿ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಗ್ರಾಮಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ದೃಶ್ಯ ಮೊಬೈಲ್​ನಲ್ಲಿ ಸೆರೆ ಹಿಡಿಯಲಾಗಿದೆ. ಸರ್ಕಾರದಿಂದ ಅನುಮೋದನೆ ಸಿಗದಿದ್ರೂ ಶಾಲೆ […]

MLC ತೇಜಸ್ವಿನಿ ಗೌಡ ವಿರುದ್ಧ ಹಲ್ಲೆ ಆರೋಪ, ದೂರು ದಾಖಲಿಸಿದ ಗ್ರಾಮಸ್ಥರು
ಸಾಧು ಶ್ರೀನಾಥ್​
|

Updated on:Feb 07, 2020 | 11:55 AM

Share

ದೇವನಹಳ್ಳಿ: ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದೆ. MLC ತೇಜಸ್ವಿನಿ ಗೌಡ ಗ್ರಾಮಸ್ಥರ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡರಾಯಪ್ಪನಹಳ್ಳಿಯಲ್ಲಿ ನಡೆದಿದೆ.

ಶಾಲಾ ಕಟ್ಟಡ ಕಾಮಗಾರಿ ವಿಚಾರವಾಗಿ ಗ್ರಾಮಸ್ಥರ ಮೇಲೆ ದೌರ್ಜನ್ಯ ನಡೆದಿದ್ದು, ತೇಜಸ್ವಿನಿ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಗ್ರಾಮಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ದೃಶ್ಯ ಮೊಬೈಲ್​ನಲ್ಲಿ ಸೆರೆ ಹಿಡಿಯಲಾಗಿದೆ.

ಸರ್ಕಾರದಿಂದ ಅನುಮೋದನೆ ಸಿಗದಿದ್ರೂ ಶಾಲೆ ಕಟ್ಟಡ ನಿರ್ಮಾಣಕ್ಕೆ ತೇಜಸ್ವಿನಿ ಗೌಡ ಮುಂದಾಗಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷನ ಮನೆಗೆ ದಾರಿ ಬಿಡದೆ ಕಾಮಗಾರಿ ನಡೆಸಲು ಸಿದ್ದತೆ ಮಾಡಿಕೊಂಡಿದ್ದಾರೆ. ಈ ವಿಚಾರವಾಗಿ ಕೇಳಲು ಹೋದ ಗ್ರಾಮಸ್ಥರ ಮೇಲೆ ತೇಜಸ್ವಿನಿ ಗೌಡ ದರ್ಪ ತೋರಿಸಿದ್ದಾರೆ. ನಿಂದಿಸಿ ಹಲ್ಲೆ ನಡೆಸಿದ್ದಾರೆ. ದೊಡ್ಡರಾಯಪ್ಪನಹಳ್ಳಿ ಗ್ರಾಮಸ್ಥರು MLC ತೇಜಸ್ವಿನಿ ಗೌಡ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನನ್ನ ವಿರುದ್ಧದ ಹಲ್ಲೆ ಆರೋಪ ಜೆಡಿಎಸ್ ಕುಮ್ಮಕ್ಕು: ಗ್ರಾಮಸ್ಥರು ಮಾಡಿರುವ ಆರೋಪಕ್ಕೆ ಎಂಎಲ್​ಸಿ ತೇಜಸ್ವಿನಿ ಗೌಡ ಪ್ರತಿಕ್ರಿಯೆ ನೀಡಿದ್ದಾರೆ. ದೊಡ್ಡರಾಯಪನಹಳ್ಳಿಯಲ್ಲಿ ಮಾತನಾಡಿದ ಅವರು ನಾವು ಗ್ರಾಮಕ್ಕೆ ಅನುಕೂಲವಾಗಲಿ ಅಂತಾ ಎಲ್ಲರ ಸಹಕಾರದಿಂದ ಶಾಲಾ ಕಟ್ಟಡ ಕಟ್ಟುತ್ತಿದ್ದೇವೆ. ಆದ್ರೆ ಗ್ರಾಮ ಪಂಚಾಯ್ತಿ ಅಧ್ಯಕ್ಷರ ಮನೆಗೆ ರಸ್ತೆಗೆ ಅನುಕೂಲವಾಗಲೆಂದು ಇದೀಗ ಜೆಡಿಎಸ್ ನವರು ರಾಜಕೀಯ ಮಾಡ್ತಿದ್ದಾರೆ ಎಂದು ತೇಜಸ್ವಿನಿ ಗೌಡ ಆರೋಪಿಸಿದ್ದಾರೆ.

ಸರ್ಕಾರಿ ಜಾಗದಲ್ಲಿ ಅತಿ ಕ್ರಮಣ ಮಾಡಿರೋ ಗ್ರಾಮ ಪಂಚಾಯ್ತಿ ಅಧ್ಯಕ್ಷರು ಶಾಲೆ ಕಟ್ಟಡ ಕಟ್ಟಲು ಬಿಡದೇ ರಾಜಕೀಯ ಮಾಡ್ತಿದ್ದಾರೆ. ನಾನು ಯಾರ ಮೇಲೆಯೂ ದೌರ್ಜನ್ಯ ಮಾಡಿಲ್ಲ, ಕಾನೂನಾತ್ಮಕವಾಗಿ ಕೆಲಸವನ್ನು ಮಾಡುತ್ತಿದ್ದೇನೆ. ಶಾಲೆಗೆ ಹತ್ತು ರೂಂಗಳಾಗಬೇಕಿದ್ದು, ಆರು ರೂಂಗಳನ್ನು ಮಾತ್ರ ಇದೀಗ ಮಾಡಲಾಗುತ್ತಿದೆ. ಕಾಮಗಾರಿ ನಡೆಯುವ ವೇಳೆ ನನ್ನ ಮೇಲೆಯೆ ಹಲ್ಲೆಗೆ ಮುಂದಾಗಿದ್ದಾರೆ.

ಇದೆಲ್ಲಾ ಜೆಡಿಎಸ್ ಪಕ್ಷದ ಮುಖಂಡರ ಕಿತಾಪತಿ. ಹತ್ತಿರದಲ್ಲೇ ಗ್ರಾಮ ಪಂಚಾಯ್ತಿ ಚುನಾವಣೆಗಳು ಬರುತ್ತಿದ್ದು, ನಮ್ಮೂರಿನಲ್ಲಿ ಕೆಲಸ ಮಾಡುತ್ತಿದ್ರೆ ರಾಜಕೀಯ ಮಾಡಲು ಹೊರಟಿದ್ದಾರೆ ಎಂದು ಗ್ರಾಮಸ್ಥರ ಮೇಲೆ ದಬ್ಬಾಳಿಕೆ ಮಾಡಿ ಹಲ್ಲೆ ಮಾಡುತ್ತಿದ್ದ ದೃಶ್ಯಗಳ ಬಗ್ಗೆ ತೇಜಸ್ವಿನಿ ಸ್ಪಷ್ಟನೆ ನೀಡಿದ್ದಾರೆ.

Published On - 7:53 am, Fri, 7 February 20

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು