AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಈದ್ ಮಿಲಾದ್ ಮೆರವಣಿಗೆಯಲ್ಲಿ ಗುಂಪು ಘರ್ಷಣೆ: ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಕೋಲಾರದಲ್ಲಿ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಲಾಗಿದೆ. ಅಷ್ಟೇ ಅಲ್ಲದೆ ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ ಉಂಟಾಗಿದ್ದು, ನಾಲ್ವರು ವ್ಯಕ್ತಿಗಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವಂತಹ ಘಟನೆ ನಗರದ ಕ್ಲಾಕ್ ಟವರ್ ಬಳಿ ನಡೆದಿದೆ. ಸದ್ಯ ಹಲ್ಲೆ ನಡೆಸಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಕೋಲಾರದಲ್ಲಿ ಈದ್ ಮಿಲಾದ್ ಮೆರವಣಿಗೆಯಲ್ಲಿ ಗುಂಪು ಘರ್ಷಣೆ: ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
ಕೋಲಾರದಲ್ಲಿ ಈದ್ ಮಿಲಾದ್ ಮೆರವಣಿಗೆಯಲ್ಲಿ ಗುಂಪು ಘರ್ಷಣೆ: ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Sep 16, 2024 | 9:30 PM

Share

ಕೋಲಾರ, ಸೆಪ್ಟೆಂಬರ್​​ 16: ಈದ್ ಮಿಲಾದ್ (Eid Milad) ಮೆರವಣಿಗೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ ಉಂಟಾಗಿದ್ದು, ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವಂತಹ ಘಟನೆ ನಗರದ ಕ್ಲಾಕ್ ಟವರ್ ಬಳಿ ನಡೆದಿದೆ. ಸೈಯದ್ ಸಲ್ಮಾನ್, ಸೈಯದ್ ಸೈಫ್, ಹುಸೇನ್ ಕಾಷಿಪ್, ಖಲೀಲ್ ಅಹ್ಮದ್​ ಮೇಲೆ ಸೈಯದ್ ವಸೀಂ ಪಾಷಾ, ತಾಹೀರ್ ಗುಂಪಿನಿಂದ ಹಲ್ಲೆ ಮಾಡಲಾಗಿದೆ. ನಾಲ್ವರು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಘಟನೆ ನಂತರ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದರು. ಸ್ಥಳಕ್ಕೆ ಕೋಲಾರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಸದ್ಯ ಹಲ್ಲೆ ನಡೆಸಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದ್ದು, ಕ್ಲಾಕ್ ಟವರ್​ ಬಳಿ ಎಸ್​ಪಿ ನಿಖಿಲ್ ಮೊಕ್ಕಾಂ ಹೂಡಿದ್ದಾರೆ.

ಚಿಕ್ಕಮಗಳೂರು, ಚಿತ್ರದುರ್ಗ ನಂತರ ಕೋಲಾರದಲ್ಲೂ ಪ್ಯಾಲೆಸ್ತೀನ್ ಪರ ಘೋಷಣೆ

ಗುಂಪು ಘರ್ಷಣೆ ಒಂದು ಕಡೆ ಆದರೆ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಲಾಗಿದೆ. ಕೋಲಾರದ ಅಂಜುಮನ್ ಸಂಸ್ಥೆ ಬಳಿ ಪ್ಯಾಲೆಸ್ತೀನ್ ಧ್ವಜ ಹಾರಾಟ ಮಾಡಿದ್ದು, ‘ಫ್ರೀ ಪ್ಯಾಲೆಸ್ತೀನ್’ ಬರಹವುಳ್ಳ ಬಾವುಟ ಪ್ರದರ್ಶಿಸಿ ಘೋಷಣೆ ಕೂಗಲಾಗಿದೆ. ಕೂಡಲೇ ಪೊಲೀಸರು ಆ ಬಾವುಟವನ್ನು ತೆಗೆಸಿದ್ದಾರೆ. ಈ ಮೂಲಕ ಕೋಲಾರದ ಯುವಕರ ಪ್ಯಾಲೆಸ್ತೀನ್​ ಪ್ರೇಮಕ್ಕೆ ಪೊಲೀಸರು ತಿಳಿಹೇಳಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ

ಕೋಲಾರದ ಎಂಜಿ ರಸ್ತೆಯಿಂದ ಆರಂಭವಾದ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚಾರ ಮಾಡಿತು. ಬೃಹತ್ ಬಾವುಟಗಳನ್ನು ಹಿಡಿದು ರಸ್ತೆಯಲ್ಲಿ ಯುವಕರ ಗುಂಪು ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ.

ಇದನ್ನೂ ಓದಿ: ಪಾಂಡವಪುರದಲ್ಲಿ ಆರ್​​ಎಸ್​​ಎಸ್ ಕಚೇರಿಗೆ ಪೊಲೀಸ್ ದಾಳಿ: ಖಾಕಿ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಇನ್ನು ಈ ವೇಳೆ ಅಲ್ಲದೇ ಬೇರೆ ದೇಶದ ಬಾವುಟಗಳನ್ನು ಹಾರಿಸದಂತೆ ವಿವಾದ ಸೃಷ್ಟಿಸದಂತೆ ತಿಳಿಹೇಳಿದ್ದಾರೆ. ಕೋಲಾರ ನಗರ ಠಾಣೆ ಸಿಪಿಐ ಸದಾನಂದ ಅವರ ಸಮಯ ಪ್ರಜ್ಞೆಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬಾವುಟ ಹಾರಾಟ ಮಾಡದಂತೆ ಪೊಲೀಸರು ಯುವಕರಿಗೆ ತಿಳಿ ಹೇಳಿದ್ದಾರೆ. ಬಳಿಕ ಫ್ರೀ ಪ್ಯಾಲೆಸ್ತೀನ್ ತೆಗೆದು ಕಪ್ಪು ಬಾವುಟ ಹಾರಾಟ ಮಾಡಿದ ಯುವಕರ ಗುಂಪಿಗೆ ಪೊಲೀಸರು ದೇಶ ಪ್ರೇಮದ ಪಾಠ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ