Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಿದ್ದ ಮೊಬೈಲ್​ ಸೇವೆ ಸ್ಥಗಿತ, ಕಾರಣ ಏನು ಗೊತ್ತಾ?

ಮಕ್ಕಳು, ಬಾಣಂತಿ, ಗರ್ಭಿಣಿಯರ ಬಗ್ಗೆ ಮಾಹಿತಿ ಒದಗಿಸುವದು ಸೇರಿದಂತೆ ಅನೇಕ ಕೆಲಸಗಳಿಗಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ನೀಡಲಾಗಿತ್ತು. ಸದ್ಯ ಕೊಪ್ಪಳ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಲಾದ ಮೊಬೈಲ್​ಗಳು ಕಾರ್ಯನಿರ್ವಹಿಸುತ್ತಿಲ್ಲ. ಈ ಬಗ್ಗೆ ಅವರು ಆಕ್ರೋಶ ಹೊರಹಾಕುತ್ತಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಿದ್ದ ಮೊಬೈಲ್​ ಸೇವೆ ಸ್ಥಗಿತ, ಕಾರಣ ಏನು ಗೊತ್ತಾ?
ಮೊಬೈಲ್ ರೀಚಾರ್ಜ್ ಮಾಡದ ಹಿನ್ನೆಲೆ ಕಾರ್ಯನಿರ್ವಹಿಸದ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಿದ ಮೊಬೈಲ್​ಗಳು
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ರಮೇಶ್ ಬಿ. ಜವಳಗೇರಾ

Updated on:Nov 23, 2023 | 8:27 AM

ಕೊಪ್ಪಳ, ನ.23: ಮಕ್ಕಳು, ಬಾಣಂತಿ, ಗರ್ಭಿಣಿಯರ ಬಗ್ಗೆ ಮಾಹಿತಿ ಒದಗಿಸುವದು ಸೇರಿದಂತೆ ಅನೇಕ ಕೆಲಸಗಳಿಗಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ (Anganavadi Workers) ಮೊಬೈಲ್ ನೀಡಲಾಗಿತ್ತು. ಸದ್ಯ ಕೊಪ್ಪಳ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಲಾದ ಮೊಬೈಲ್​ಗಳು ಕಾರ್ಯನಿರ್ವಹಿಸುತ್ತಿಲ್ಲ. ಈ ಬಗ್ಗೆ ಅವರು ಆಕ್ರೋಶ ಹೊರಹಾಕುತ್ತಿದ್ದಾರೆ.

ಕೊಪ್ಪಳ ಜಿಲ್ಲೆಯ 1,850 ಕಾರ್ಯಕರ್ತೆಯರು ಸೇರಿ ರಾಜ್ಯದ 65 ಸಾವಿರ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರದ ಪೋಷಣ್ ಅಭಿಯಾನ ಯೋಜನೆಯಡಿ 2018-19 ರಲ್ಲಿ ಮೊಬೈಲ್ ನೀಡಲಾಗಿತ್ತು. ಆದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಕಳೆದ ಮೂರು ತಿಂಗಳಿಂದ ರಿಚಾರ್ಜ್ ಮಾಡದ ಹಿನ್ನೆಲೆಯಲ್ಲಿ ಅವುಗಳು ಕಾರ್ಯನಿರ್ವಹಿಸುತ್ತಿಲ್ಲ.

ಇಲಾಖೆಯ ನಿರ್ಲಕ್ಷ್ಯದಿಂದಾಗಿ ಅಂಗನವಾಡಿ ಕಾರ್ಯಕರ್ತೆಯರು ಮೊಬೈಲ್ ಮೂಲಕ ಸರ್ಕಾರಕ್ಕೆ ಮಾಹಿತಿ ರವಾನಿಸಲು ಪರದಾಡುವಂತಾಗಿದೆ. ಅನೇಕರು ಅವರಿವರಿಂದ ವೈಪ್ ಪಡೆದು ಕೆಲಸ ಮಾಡುತ್ತಿದ್ದಾರೆ. ಇನ್ನು ಕೆಲವರು ತಮ್ಮದೇ ಇನ್ನೋಂದು ಸಿಮ್​ಗೆ ಡೇಟಾ ಹಾಕಿಸಿಕೊಂಡು ವೈಪೈ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಸಿಡಿದೆದ್ದ ಬಿಸಿಯೂಟ, ಅಂಗನವಾಡಿ ಕಾರ್ಯಕರ್ತೆಯರು, ರಾಜ್ಯ ಸರ್ಕಾರಕ್ಕೆ ಡಬಲ್ ಟ್ರಬಲ್…!

ಮೊದಲೇ ‌ಕಡಿಮೆ ಸಂಬಳಕ್ಕೆ ದುಡಿಯುತ್ತಿದ್ದೇವೆ, ಇದೀಗ ಡೇಟಾ ರಿಚಾರ್ಜ್ ಹೊರೆ ಕೂಡಾ ಬೀಳುತ್ತಿದೆ ಎಂದು ಕಾರ್ಯಕರ್ತೆಯರು ಅಳಲುತೋಡಿಕೊಳ್ಳುತ್ತಿದ್ದಾರೆ. ಮಕ್ಕಳು, ಬಾಣಂತಿ, ಗರ್ಭಿಣಿಯರ ಬಗ್ಗೆ ಮಾಹಿತಿ ಒದಗಿಸುವದು ಸೇರಿದಂತೆ ಅನೇಕ ಕೆಲಸಗಳಿಗಾಗಿ ಮೊಬೈಲ್ ನೀಡಲಾಗಿತ್ತು. ಪ್ರತಿನಿತ್ಯ ಇದೇ ಮೊಬೈಲ್ ಮೂಲಕ ಕಾರ್ಯಕರ್ತೆಯರು ಇಲಾಖೆಗೆ ಮಾಹಿತಿ ರವಾನಿಸುತ್ತಿದ್ದರು.

ಇಲಾಖೆ ಅಧಿಕಾರಿಗಳು ರಿಚಾರ್ಜ್ ಮಾಡಿಸದೇ ಇದ್ದರೂ ಮಾಹಿತಿ ಕೇಳುವುದನ್ನು ಮಾತ್ರ ಬಿಟ್ಟಿಲ್ಲ. ಹೀಗಾಗಿ ಪ್ರತಿನಿತ್ಯ ಮಾಹಿತಿ ಅಪಲೋಡ್ ಮಾಡಲು ಅಂಗನವಾಡಿ ಕಾರ್ಯಕರ್ತೆಯರು ಹರಸಾಹಸ ಮಾಡುತ್ತಿದ್ದಾರೆ. ರೀಚಾರ್ಜ್ ಬಗ್ಗೆ ಕೇಳಿದರೆ ಕೇಂದ್ರ ಸರ್ಕಾರದ ಯೋಜನೆ, ಕೇಂದ್ರದಿಂದ ಹಣ ಬಂದಿಲ್ಲಾ ಅಂತ ರಾಜ್ಯ ಸರ್ಕಾರ ಹೇಳುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:45 am, Thu, 23 November 23

‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ