AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ನಲ್ಲಿ ಆನ್​ಲೈನ್​ ವ್ಯವಹಾರ ಸ್ಥಗಿತಗೊಳಿಸಲು ಮೊಬೈಲ್ ಅಂಗಡಿ ಮಾಲೀಕರ ಸಂಘದಿಂದ ಸರ್ಕಾರಕ್ಕೆ ಆಗ್ರಹ

ಈಗ ಏನಿದ್ದರೂ ಸ್ಮಾರ್ಟ್ ಫೋನ್​ಗಳ ಜಮಾನ. ಒಂದು ಸ್ಮಾರ್ಟ್ ಫೋನ್ ಕಿಸೆಯಲ್ಲಿ ಇದ್ದರೆ ಸಾಕು ನಮ್ಮ ಬಹುತೇಕ ಕೆಲಸಗಳು ಆಗಿ ಬಿಡುತ್ತವೆ. ಈ ಸ್ಮಾರ್ಟ್ ಫೋನ್​ಗಳ ವ್ಯವಹಾರ ನಡೆಸುವ ಮೂರುವರೆ ಸಾವಿರಕ್ಕೂ ಅಧಿಕ ಶೋ ರೂಮ್​ಗಳು ರಾಜ್ಯದಲ್ಲಿವೆ. ಕೇವಲ ಉಡುಪಿ ಜಿಲ್ಲೆಯಲ್ಲಿ 400ಕ್ಕೂ ಅಧಿಕ ಮೊಬೈಲ್ ಮಳಿಗೆಗಳು ಇವೆ.

ಲಾಕ್​ಡೌನ್​ನಲ್ಲಿ ಆನ್​ಲೈನ್​ ವ್ಯವಹಾರ ಸ್ಥಗಿತಗೊಳಿಸಲು ಮೊಬೈಲ್ ಅಂಗಡಿ ಮಾಲೀಕರ ಸಂಘದಿಂದ ಸರ್ಕಾರಕ್ಕೆ ಆಗ್ರಹ
ಮುಚ್ಚಿರುವ ಅಂಗಡಿಗಳು
sandhya thejappa
|

Updated on:Apr 29, 2021 | 2:56 PM

Share

ಉಡುಪಿ: ಕೊರೊನಾ ಸೋಂಕಿನ ಅರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊವಿಡ್ ವಿರುದ್ಧ ಹೋರಾಡಲು ಸರ್ಕಾರ 14 ದಿನಗಳ ಕಾಲ ಕೊರೊನಾ ಕರ್ಫ್ಯೂನ ಜಾರಿಗೊಳಿಸಿದೆ. ಕಟ್ಟು ನಿಟ್ಟಿನ ನಿಯಮದಿಂದ ಬಹುತೇಕ ಎಲ್ಲವೂ ಬಂದ್ ಆಗಿವೆ. ಈ ಸಾಲಿಗೆ ಮೊಬೈಲ್ ಅಂಗಡಿಗಳು ಸೇರಿವೆ. ಲಾಕ್​ಡೌನ್​ ಕಾರಣಕ್ಕಾಗಿ ಮೊಬೈಲ್ ಅಂಗಡಿಗಳು ಮುಚ್ಚಿದರು ಕೂಡ ಆನ್​ಲೈನ್​ ಸಂಸ್ಥೆಗಳು ವ್ಯವಹಾರ ಮುಂದುವರಿಸಿರುವುದು ಮೊಬೈಲ್ ವ್ಯಾಪಾರಸ್ಥರ ಸಿಟ್ಟಿಗೆ ಕಾರಣವಾಗಿದೆ.

ಈಗ ಏನಿದ್ದರೂ ಸ್ಮಾರ್ಟ್ ಫೋನ್​ಗಳ ಜಮಾನ. ಒಂದು ಸ್ಮಾರ್ಟ್ ಫೋನ್ ಕಿಸೆಯಲ್ಲಿ ಇದ್ದರೆ ಸಾಕು ನಮ್ಮ ಬಹುತೇಕ ಕೆಲಸಗಳು ಆಗಿ ಬಿಡುತ್ತವೆ. ಈ ಸ್ಮಾರ್ಟ್ ಫೋನ್​ಗಳ ವ್ಯವಹಾರ ನಡೆಸುವ ಮೂರುವರೆ ಸಾವಿರಕ್ಕೂ ಅಧಿಕ ಶೋ ರೂಮ್​ಗಳು ರಾಜ್ಯದಲ್ಲಿವೆ. ಕೇವಲ ಉಡುಪಿ ಜಿಲ್ಲೆಯಲ್ಲಿ 400ಕ್ಕೂ ಅಧಿಕ ಮೊಬೈಲ್ ಮಳಿಗೆಗಳು ಇವೆ. ಮೊಬೈಲ್ ಮಾರಾಟ ಮೊಬೈಲ್ ಆಕ್ಸೆಸರಿಸ್​ಗಳು ಮೊಬೈಲ್ ರಿಚಾರ್ಜ್ ಹೀಗೆ ಅನೇಕ ವಿಭಾಗಗಳಲ್ಲಿ ಜನರು ದುಡಿಯುತ್ತಿದ್ದಾರೆ. ಜಿಲ್ಲೆಯಲ್ಲಿ ಸುಮಾರು ಐದರಿಂದ ಆರು ಸಾವಿರ ಜನರು ಮೊಬೈಲ್ ಉದ್ಯಮವನ್ನೇ ನಂಬಿಕೊಂಡಿದ್ದು, ಇದೀಗ ಲಾಕ್​ಡೌನ್ ಪರಿಣಾಮವಾಗಿ ಉದ್ಯಮ ಕುಸಿದು ಹೋಗಿದೆ. ಆದರೆ ಆನ್​ಲೈನ್​ ಮೂಲಕ ಮೊಬೈಲ್ ವ್ಯಾಪಾರ ಬಾರಿ ಭರಾಟೆಯಿಂದ ಮುಂದುವರೆದಿದೆ.

ರಾಜ್ಯಾದ್ಯಂತ ಮೊಬೈಲ್ ಅಂಗಡಿಗಳನ್ನು ಮುಚ್ಚಿದ್ದರೂ ಕೂಡ ಆನ್​ಲೈನ್​ ಮೂಲಕ ಜನ ಮೊಬೈಲ್ ಖರೀದಿ ಮಾಡುತ್ತಿದ್ದಾರೆ. ಜನರು ಆರ್ಡರ್ ಮಾಡಿದ ಮೊಬೈಲ್​ಗಳನ್ನು ವಿತರಿಸಲು ಡೆಲಿವರಿ ಬಾಯ್ಗ​ಳು ಮನೆ ಮನೆಗೆ ಸಂಚರಿಸುತ್ತಾರೆ. ಹೀಗೆ ಸಂಚರಿಸುವ ಯುವಕರಿಂದ ಸೋಂಕು ಹರಡುವುದಿಲ್ವಾ ಎಂದು ಮೊಬೈಲ್ ಅಂಗಡಿ ಮಾಲೀಕರು ಪ್ರಶ್ನಿಸುತ್ತಿದ್ದಾರೆ. ಕಳೆದ ಬಾರಿ ಲಾಕ್​ಡೌನ್​ ಆದ ಸಮಯದಲ್ಲಿ ಆನ್​ಲೈನ್​ ವ್ಯವಹಾರಗಳಿಗೂ ಕಡಿವಾಣ ಹಾಕಲಾಗಿತ್ತು. ಕೊರೊನಾ ಸೋಂಕು ಮಿತಿಮೀರಿ ಹರಡುತ್ತಿರುವ ಮಹಾರಾಷ್ಟ್ರ, ಗುಜರಾತ್, ದೆಹಲಿ ಮೊದಲಾದ ಕಡೆಗಳಲ್ಲಿ ಆನ್​ಲೈನ್​ ವ್ಯವಹಾರವನ್ನು ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿಯೂ ಆನ್​ಲೈನ್​ ಉದ್ಯಮವನ್ನು ಸ್ಥಗಿತಗೊಳಿಸಬೇಕೆಂದು ಮೊಬೈಲ್ ಅಂಗಡಿ ಮಾಲೀಕರ ಸಂಘ ಸರಕಾರಕ್ಕೆ ಆಗ್ರಹಿಸಿದೆ.

ಕೊರೊನಾ ಸೋಂಕನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಲಾಕ್​ಡೌನ್​ ವಿಧಿಸಿದೆ. ಆದರೆ ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಹಾಕುವ ಕೆಲಸ ಮಾಡಿದೆ. ಸ್ಥಳೀಯ ಅಂಗಡಿಗಳನ್ನು ಮುಚ್ಚಿ ಆನ್​ಲೈನ್​ನಲ್ಲಿ ವ್ಯವಹಾರಕ್ಕೆ ಅವಕಾಶ ನೀಡಿದೆ. ಇದರಿಂದ ಸಣ್ಣ ವ್ಯಾಪಾರಿಗಳು ತೀರಾ ನಷ್ಟವನ್ನು ಅನುಭವಿಸುತ್ತಿವೆ. ಅಂಗಡಿಗಳನ್ನು ಮುಚ್ಚಿಸುವ ಜೊತೆಗೆ ಆನ್​ಲೈನ್​ ವ್ಯವಹಾರಕ್ಕೆ ಅವಕಾಶ ನೀಡುವ ಮೂಲಕ ವಿದೇಶಿ ಕಂಪನಿಗಳಿಗೆ ಪರೋಕ್ಷವಾಗಿ ಸಹಾಯಮಾಡುತ್ತಿದೆ. ಕಳೆದ ಬಾರಿ ಎಲ್ಲವೂ ಬಂದ್ ಆಗಿತ್ತು. ಆದರೆ ಈ ಬಾರಿ ಸಣ್ಣ ವ್ಯಾಪಾರಿಗಳಿಗೆ ನಷ್ಟವಾಗುವ ರೀತಿಯಲ್ಲಿ ಲಾಕ್​ಡೌನ್​ ಜಾರಿಯಾಗಿದೆ. ಇದರಿಂದ ಈ ಬಗ್ಗೆ ಸರ್ಕಾರ ಗಮನ ಹರಿಸಬೇಕೆಂದು ಅಂಗಡಿ ಮಾಲೀಕರು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ

ಅಗತ್ಯಕ್ಕೆ ತಕ್ಕಂತೆ ವೈದ್ಯಕೀಯ ಸೌಲಭ್ಯ ಹೆಚ್ಚಳ, ಖಾಸಗಿ ಆಸ್ಪತ್ರೆಗಳಿಂದ ರೆಮ್​ಡೆಸಿವರ್​ಗೆ ಅನಗತ್ಯ ಬೇಡಿಕೆ: ಹೈಕೋರ್ಟ್​ಗೆ ರಾಜ್ಯ ಸರ್ಕಾರ ಮಾಹಿತಿ

ಜೀವನದಲ್ಲಿ ಜಿಗುಪ್ಸೆ ಬಂದಿದೆ; ವೈಷ್ಣವಿ ಮುಂದೆ ಅಳಲು ತೋಡಿಕೊಂಡ ಮಂಜು

(Mobile Store Owners Association is urging the government to shut down online business at Lockdown)

Published On - 2:38 pm, Thu, 29 April 21

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ