AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲ್ಟಿ ಟ್ರ್ಯಾಕಿಂಗ್ ರೈಲ್ವೆ ಯೋಜನೆಗೆ ಕೇಂದ್ರ ಒಪ್ಪಿಗೆ: ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಬಂಪರ್ ಕೊಡುಗೆ

ಕೇಂದ್ರ ಸಚಿವ ಸಂಪುಟವು ಕರ್ನಾಟಕ ಸೇರಿದಂತೆ 6 ರಾಜ್ಯಗಳಲ್ಲಿ ಮೂರು ಮಲ್ಟಿ-ಟ್ರ್ಯಾಕಿಂಗ್ ರೈಲ್ವೆ ಯೋಜನೆಗಳಿಗೆ ಅನುಮೋದನೆ ನೀಡಿದೆ. ಪ್ರಮುಖವಾಗಿ ಗುಂತಕಲ್-ವಾಡಿ ಮಾರ್ಗವು ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸುತ್ತದೆ. ಈ ಯೋಜನೆಯು 4,161 ಗ್ರಾಮಗಳಿಗೆ ರೈಲ್ವೆ ಸಂಪರ್ಕ ಒದಗಿಸುವ ಮೂಲಕ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಉತ್ತೇಜನ ನೀಡಲಿದೆ.

ಮಲ್ಟಿ ಟ್ರ್ಯಾಕಿಂಗ್ ರೈಲ್ವೆ ಯೋಜನೆಗೆ ಕೇಂದ್ರ ಒಪ್ಪಿಗೆ: ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಬಂಪರ್ ಕೊಡುಗೆ
ಭಾರತೀಯ ರೈಲ್ವೆImage Credit source: www.irctc.co.in
ಗಂಗಾಧರ​ ಬ. ಸಾಬೋಜಿ
|

Updated on: May 09, 2026 | 4:05 PM

Share

ಬೆಂಗಳೂರು, ಮೇ 09: ಕರ್ನಾಟಕ ಸೇರಿದಂತೆ ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ 19 ಜಿಲ್ಲೆಗಳನ್ನು ಒಳಗೊಂಡ ಮೂರು ಮಲ್ಟಿ ಟ್ರ್ಯಾಕಿಂಗ್ ರೈಲ್ವೆ ಯೋಜನೆಗೆ ಕೇಂದ್ರ ಸಚಿವ ಸಂಪುಟ (Cabinet) ಅನುಮೋದನೆ ನೀಡಿದೆ. ಆ ಮೂಲಕ ಪ್ರಸ್ತುತವಿರುವ ಭಾರತೀಯ ರೈಲ್ವೆ (Indian Railways) ಜಾಲಕ್ಕೆ ಸುಮಾರು 901 ಕಿ.ಮೀ ಸೇರ್ಪಡೆಗೊಳ್ಳಲಿದೆ. ಯೋಜನೆಯ ಒಟ್ಟು ಅಂದಾಜು ವೆಚ್ಚ 23,437 ಕೋಟಿ ರೂ.ಗಳಾಗಿದ್ದು, 2030-31ನೇ ಸಾಲಿನ ವೇಳೆಗೆ ಪೂರ್ಣಗೊಳ್ಳುವ ಗುರಿ ಹೊಂದಲಾಗಿದೆ.

ಮುಖ್ಯಾಂಶಗಳು

  • ಮಲ್ಟಿ ಟ್ರ್ಯಾಕಿಂಗ್ ರೈಲ್ವೆ ಯೋಜನೆಗಳಿಗೆ ಕೇಂದ್ರ ಅನುಮೋದನೆ
  • ಗುಂತಕಲ್ ಟು ವಾಡಿ ಮಾರ್ಗ ಕರ್ನಾಟಕಕ್ಕೆ ಸಂಪರ್ಕ ಸೇತುವೆ
  • ಗ್ರಾಮೀಣ ಅಭಿವೃದ್ಧಿ ಮತ್ತು ಆರ್ಥಿಕತೆಗೆ ಉತ್ತೇಜನ

ಮೇ 5ರಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ, ರೈಲ್ವೆ ಸಚಿವಾಲಯದ ಮೂರು ಪ್ರಮುಖ ರೈಲ್ವೆ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಅವುಗಳೆಂದರೆ ನಾಗ್ಡಾ – ಮಥುರಾ 3ನೇ ಮತ್ತು 4ನೇ ಮಾರ್ಗ, ಗುಂತಕಲ್ – ವಾಡಿ 3ನೇ ಮತ್ತು 4ನೇ ಮಾರ್ಗ ಮತ್ತು ಬುರ್ಹ್ವಾಲ್ – ಸೀತಾಪುರ 3ನೇ ಮತ್ತು 4ನೇ ಮಾರ್ಗ. ಈ ಮೂರು ಮಾರ್ಗಗಳ ಯೋಜನೆಯಿಂದ ರೈಲು ಸಂಚಾರ ದಟ್ಟಣೆ ಕಡಿಮೆಯಾಗಿ ಸರಕು ಮತ್ತು ಪ್ರಯಾಣಿಕ ರೈಲುಗಳ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ.

ಗುಂತಕಲ್–ವಾಡಿ ಮಾರ್ಗ: ಕರ್ನಾಟಕಕ್ಕೆ ಸಂಪರ್ಕ

ಗುಂತಕಲ್–ವಾಡಿ ಮಾರ್ಗವು ದಕ್ಷಿಣ ಭಾರತವನ್ನು ಮಧ್ಯ ಹಾಗೂ ಪಶ್ಚಿಮ ಭಾರತಕ್ಕೆ ಸಂಪರ್ಕಿಸುವ ಸುಮಾರು 230 ಕಿ.ಮೀ. ಉದ್ದದ ಪ್ರಮುಖ ವಿದ್ಯುದ್ದೀಕೃತ ದ್ವಿಪಥ ಮಾರ್ಗವಾಗಿದೆ. ಗುಂತಕಲ್, ಗೂಟಿ, ಡೋನ್ ಮತ್ತು ವಾಡಿ ಈ ಮಾರ್ಗಕ್ಕೆ ನೇರವಾಗಿ ಸಂಪರ್ಕಿಸುವ ಪ್ರಮುಖ ಜಂಕ್ಷನ್​ಗಳಾಗಿವೆ. ಈ ಮಾರ್ಗವು ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ ರಾಜ್ಯಗಳ ವ್ಯಾಪ್ತಿಯಲ್ಲಿ ಹಾದುಹೋಗುತ್ತದೆ.

ಪ್ರಮುಖ ನಿಲ್ದಾಣ

ಗುಂತಕಲ್ ಟು ವಾಡಿ ಮಾರ್ಗವು ಬೆಂಗಳೂರು ಕಡೆಗಿನ ಸಂಚಾರಕ್ಕೆ ಪ್ರಮುಖ ಜಂಕ್ಷನ್ ಆಗಿದೆ. ಈ ಮಾರ್ಗ ಡೋನ್, ಗುಂತಕಲ್​​ ಮತ್ತು ನಂದ್ಯಾಲ ಜಂಕ್ಷನ್​​​ನನ್ನು ಸಂಪರ್ಕಿಸುತ್ತದೆ. ವಾಡಿ ಜಂಕ್ಷನ್ ಈ ಮಾರ್ಗದ ಅಂತಿಮ ನಿಲ್ದಾಣವಾಗಿದ್ದು, ಹೈದರಾಬಾದ್, ಬೆಂಗಳೂರು ಮತ್ತು ಪುಣೆಗೆ ಸಂಪರ್ಕ ಕಲ್ಪಿಸುತ್ತದೆ. ಆದೋನಿ, ರಾಯಚೂರು, ಮಂತ್ರಾಲಯಂ ರಸ್ತೆ ಮತ್ತು ಯಾದಗಿರಿ ಈ ಮಾರ್ಗದ ಪ್ರಮುಖ ನಿಲ್ದಾಣಗಳಾಗಿವೆ.

ಇದನ್ನೂ ಓದಿ: ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡ ಕಡೆಗಣನೆ: ರಾಜ್ಯಾದ್ಯಂತ ರೈಲು ಸಂಚಾರ ಬಂದ್ ಮಾಡುವ ಎಚ್ಚರಿಕೆ ನೀಡಿದ ಕರವೇ

ಗಣಿಗಾರಿಕೆ ವಲಯದಿಂದ ಬರುವ ಭಾರಿ ಸರಕು ಸಾಗಣೆ ಮತ್ತು ಹೆಚ್ಚುತ್ತಿರುವ ಪ್ರಯಾಣಿಕರ ಒತ್ತಡವನ್ನು ನಿಭಾಯಿಸಲು, ಈ ಮಾರ್ಗದಲ್ಲಿ 3ನೇ ಮತ್ತು 4ನೇ ರೈಲ್ವೆ ಹಳಿ ನಿರ್ಮಿಸುವ ಪ್ರಸ್ತಾವಿತ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಯೋಜನೆಯು ಪೂರ್ಣಗೊಂಡಲ್ಲಿ ರೈಲು ಸಂಚಾರದ ವೇಗ ಮತ್ತು ಸಾಮರ್ಥ್ಯ ಮತ್ತಷ್ಟು ಹೆಚ್ಚಾಗಲಿದೆ.

ಮಲ್ಟಿ-ಟ್ರ್ಯಾಕಿಂಗ್ ಯೋಜನೆಯಿಂದ 4,161 ಹಳ್ಳಿಗಳಿಗೆ ಸಂಪರ್ಕ ಭಾಗ್ಯ

ಪ್ರಸ್ತಾವಿತ ಮಲ್ಟಿ-ಟ್ರ್ಯಾಕಿಂಗ್ ಯೋಜನೆಯು ಸುಮಾರು 83 ಲಕ್ಷ ಜನಸಂಖ್ಯೆ ಹೊಂದಿರುವ 4,161 ಹಳ್ಳಿಗಳಿಗೆ ರೈಲ್ವೆ ಸಂಪರ್ಕವನ್ನು ಕಲ್ಪಿಸಲಿದೆ. ಈ ಯೋಜನೆಯಿಂದ ಗ್ರಾಮೀಣ ಭಾಗದ ಜನರಿಗೆ ಉತ್ತಮ ಸಾರಿಗೆ ಸೌಲಭ್ಯ ದೊರೆಯಲಿದ್ದು, ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಉತ್ತೇಜನ ಸಿಗುವ ನಿರೀಕ್ಷೆಯಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More