AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಡ್​ನ್ಯೂಸ್: ಬೆಂಬಲ ಬೆಲೆ ಯೋಜನೆ ಅಡಿ ಹೆಸರು, ಸೂರ್ಯಕಾಂತಿ ಖರೀದಿಗೆ ಕೇಂದ್ರ ಅನುಮತಿ

ಕರ್ನಾಟಕ ರೈತರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದ್ದು, ಬೆಂಬಲ ಬೆಲೆಯಲ್ಲಿ ಹೆಸರು ಕಾಳು ಹಾಗೂ ಸೂರ್ಯಕಾಂತಿ ಬೆಳೆ ಖರೀದಿಗೆ ಅನುಮತಿ ನೀಡಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಮಾಹಿತಿ ನೀಡಿದ್ದಾರೆ. ಕೊಬ್ಬರಿ ಬೆನ್ನಲ್ಲೇ ಹೆಸರು ಕಾಳು ಹಾಗೂ ಸೂರ್ಯಕಾಂತಿಗೆ ಬೆಂಬಲ ಬೆಲೆ ಸಿಗುತ್ತಿದೆ. ಬೆಲೆ ಎಷ್ಟು?

ಗುಡ್​ನ್ಯೂಸ್: ಬೆಂಬಲ ಬೆಲೆ ಯೋಜನೆ ಅಡಿ ಹೆಸರು, ಸೂರ್ಯಕಾಂತಿ ಖರೀದಿಗೆ ಕೇಂದ್ರ ಅನುಮತಿ
ರಮೇಶ್ ಬಿ. ಜವಳಗೇರಾ
|

Updated on:Aug 25, 2024 | 5:34 PM

Share

ಬೆಂಗಳೂರು, (ಆಗಸ್ಟ್ 25): ಹೆಸರು ಕಾಳು ಹಾಗೂ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಹೆಸರುಕಾಳು ಪ್ರತಿ ಕ್ವಿಂಟಾಲ್ ಗೆ 8682 ( MSP) ಅಂತೆ ಖರೀದಿಗೆ ಅನುಮತಿ ನೀಡಿದೆ. ಅದೇ ರೀತಿ 13,210 ಮೆಟ್ರಿಕ್ ಟನ್ ಸೂರ್ಯಕಾಂತಿ ಬೆಳೆಯನ್ನು ಕೇಂದ್ರ ಸರ್ಕಾರ ಈ ಯೋಜನೆ ಅಡಿ ಖರೀದಿಸಲಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಮಾಹಿತಿ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಜೋಶಿ, ರಾಜ್ಯದಲ್ಲಿ ಹೆಸರು ಕಾಳು ಬೆಲೆ ಕುಸಿತದಿಂದ ಕಂಗೆಟ್ಟಿರುವ ರೈತರ ನೆರವಿಗೆ ಮುಂದಾಗಿರುವ ಕೇಂದ್ರ ಸರ್ಕಾರ, ಬೆಂಬಲ ಬೆಲೆ ಯೋಜನೆ ಅಡಿ ಪ್ರತಿ ಕ್ವಿಂಟಾಲ್‌ಗೆ 8,682 ರೂ. (MSP) ದರದಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ಬರೆದುಕೊಂಡಿದ್ದಾರೆ.

ರಾಜ್ಯದ ಮಾರುಕಟ್ಟೆಗಳಲ್ಲಿ ಹೆಸರಿನ ಬೆಲೆ ಕುಸಿದು ರೈತರು ಬೆಳೆದ ಬೆಳೆಗೆ ಸರಿಯಾದ ಮೌಲ್ಯ ದೊರೆಯದೇ ತೊಂದರೆ ಸಿಲುಕಿದ್ದು, ಸಂಕಷ್ಟದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರೈತರ ಸಹಾಯಕ್ಕೆ ನಿಂತಿದೆ. ಕೇಂದ್ರ ಸರ್ಕಾರ, ಎಂಎಸ್‌ಪಿ ಅಡಿ ಹೆಸರು ಕಾಳು ಖರೀದಿಸಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದು, ರಾಜ್ಯದ ರೈತರ ಹೆಸರುಕಾಳು ಬೆಳೆಯನ್ನು ಬೆಲೆ ಬೆಂಬಲ ಯೋಜನೆ (Price Support Scheme (PSS) ಅಡಿ ಖರೀದಿಗೆ ಅನುಮತಿ ನೀಡಿದೆ. 2215 ಮೆಟ್ರಿಕ್‌ ಟನ್ ಹೆಸರುಕಾಳನ್ನು ಪ್ರತಿ ಕ್ವಿಂಟಾಲ್‌ಗೆ 8,682‌ ರೂ.ನಂತೆ ಖರೀದಿ ಮಾಡಲಾಗುವುದು ಎಂದು ಸಚಿವ ಜೋಶಿ ಮಾಹಿತಿ ನೀಡಿದ್ದಾರೆ.

ಸೂರ್ಯಕಾಂತಿ ಖರೀದಿಗೂ ಅನುಮೋದನೆ

ಸೂರ್ಯಕಾಂತಿ ಬೆಳೆಯನ್ನು ಕೂಡ ಬೆಲೆ ಬೆಂಬಲ ಯೋಜನೆ ಅಡಿಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. 13210 ಎಂ.ಟಿ. ಸೂರ್ಯಕಾಂತಿಯನ್ನು ಕೇಂದ್ರ ಸರ್ಕಾರ ಬೆಂಬಲ ಬೆಲೆ ಯೋಜನೆ ಅಡಿ ಖರೀದಿಸಲಿದೆ ಎಂದು ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರ, ಕೇಂದ್ರಕ್ಕೆ ಆಗಸ್ಟ್ 21ರಂದು ಪತ್ರ ಬರೆದು ವಿನಂತಿಸಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜಸಿಂಗ್ ಚವ್ಹಾಣವರನ್ನು ಭೇಟಿ ಮಾಡಿ ಚರ್ಚಿಸಿ, ರಾಜ್ಯದ ಹೆಸರಕಾಳು ಮತ್ತು ಸೂರ್ಯಕಾಂತಿ ಬೆಳೆಗಾರರ ಬೆಂಬಲಕ್ಕೆ ನಿಲ್ಲುವಂತೆ ಮನವಿ ಮಾಡಿದ್ದೆ. ಇದಕ್ಕೆ ತಕ್ಷಣವೇ ಸ್ಪಂದಿಸಿದ ಸಚಿವರು ಅಧಿಕಾರಿಗಳೊಂದಿಗೆ ಚರ್ಚಿಸಿ ತಕ್ಷಣವೇ ಬೆಂಬಲ ಬೆಲೆಯಲ್ಲಿ ಹೆಸರು ಮತ್ತು ಸೂರ್ಯಕಾಂತಿ ಖರೀದಿಗೆ ಅನುಮತಿ ನೀಡುವಂತೆ ಸೂಚಿಸಿದರು. ಕೇಂದ್ರ ಸರ್ಕಾರ ಆಗಸ್ಟ್ 22ರಂದೇ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ ಎಂದಿದ್ದಾರೆ.

Published On - 5:33 pm, Sun, 25 August 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ