AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಸರ್ಕಾರದಿಂದ 15 ರಾಜ್ಯಗಳಿಗೆ ವಿಪತ್ತು ಪರಿಹಾರ ನಿಧಿ, ಕರ್ನಾಟಕಕ್ಕೆ ಕೊಟ್ಟಿದ್ದೆಷ್ಟು?

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಕರ್ನಾಟಕದ ಸೇರಿದಂತೆ ಒಟ್ಟು 15 ರಾಜ್ಯಗಳಿಗೆ ವಿಪತ್ತು ಪರಿಹಾರ ನಿಧಿಯನ್ನು ಹಂಚಿಕೆ ಮಾಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಉನ್ನತ ಮಟ್ಟದ ಸಮಿತಿಯು 15 ರಾಜ್ಯಗಳಲ್ಲಿ ವಿವಿಧ ವಿಪತ್ತು ಪರಿಹಾರ ಮತ್ತು ಸಾಮರ್ಥ್ಯ ವೃದ್ಧಿ ಯೋಜನೆಗಳಿಗೆ 1,000 ಕೋಟಿ ರೂಪಾಯಿ ಮೊತ್ತವನ್ನು ಬಿಡುಗಡೆ ಮಾಡಿದೆ. ಹಾಗಾದ್ರೆ, ಕರ್ನಾಟಕಕ್ಕೆ ಸಿಕ್ಕಿದ್ದೆಷ್ಟು? ಇತರೆ ರಾಜ್ಯಗಳಿಗೆ ಎಷ್ಟೆಷ್ಟು? ಎನ್ನುವ ವಿವರ ಇಲ್ಲಿದೆ.

ಮೋದಿ ಸರ್ಕಾರದಿಂದ 15 ರಾಜ್ಯಗಳಿಗೆ ವಿಪತ್ತು ಪರಿಹಾರ ನಿಧಿ, ಕರ್ನಾಟಕಕ್ಕೆ ಕೊಟ್ಟಿದ್ದೆಷ್ಟು?
ಮೋದಿ-ಸಿದ್ದರಾಮಯ್ಯ
ರಮೇಶ್ ಬಿ. ಜವಳಗೇರಾ
|

Updated on: Nov 26, 2024 | 7:52 PM

Share

ಬೆಂಗಳೂರು, (ನವೆಂಬರ್ 26): ಕರ್ನಾಟಕ ಸೇರಿದಂತೆ ಒಟ್ಟು 15 ರಾಜ್ಯಗಳಲ್ಲಿ ವಿವಿಧ ವಿಪತ್ತು ಪರಿಹಾರ ಮತ್ತು  ನಾಗರಿಕ ರಕ್ಷಣಾ ಸ್ವಯಂಸೇವಕರ ತರಬೇತಿ ಮತ್ತು ಸಾಮರ್ಥ್ಯ ವೃದ್ಧಿ ಯೋಜನೆಗೆ ಒಟ್ಟು  1115 ಕೋಟಿ ರೂಪಾಯಿ ಹಣವನ್ನು ಮೋದಿ ಸರ್ಕಾರ ಬಿಡುಗಡೆ ಮಾಡಿದೆ. ಇದರಲ್ಲಿ 1,000 ರೂ. ವಿವಿಧ ವಿಪತ್ತು ಪರಿಹಾರದ ಹಣವಾಗಿದ್ದರೆ, ಇನ್ನುಳಿದ ಹಣ ಸಾಮರ್ಥ್ಯ ವೃದ್ಧಿ ಯೋಜನೆಗೆ ನೀಡಲಾಗಿದೆ. ಇಂದು(ನವೆಂಬರ್ 26) ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆದ್ದು, ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಹೆಚ್ಚಿನ ಹಣ ಬಿಡುಗಡೆ ಮಾಡಲಾಗಿದ್ದು, ವಿಪಕ್ಷಗಳ ಸರ್ಕಾರ ಇರುವ ರಾಜ್ಯಗಳಿಗೆ ಕಡಿಮೆ ಹಣ ನೀಡಲಾಗಿದೆ. ಅದರಂತೆ ಕರ್ನಾಟಕಕ್ಕೆ ಕೇವಲ 72 ಕೋಟಿ ರೂಪಾಯಿ ನೀಡಲಾಗಿದೆ.

ಎನ್​ಡಿಎ ಸರ್ಕಾರವಿರುವ ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶಕ್ಕೆ ತಲಾ 139 ಕೋಟಿ ರೂ. ಹಾಗೂ ಮಹಾರಾಷ್ಟ್ರಕ್ಕೆ ಬರೋಬ್ಬರಿ 100 ಕೋಟಿ ರೂಪಾಯಿ ನೀಡಲಾಗಿದೆ. ಇನ್ನು ವಿರೋಧ ಪಕ್ಷಗಳು ಇರುವ ಕರ್ನಾಟಕ ಮತ್ತು ಕೇರಳಕ್ಕೆ ತಲಾ 72 ಕೋಟಿ ರೂ. ನೀಡಿದ್ದರೆ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳಕ್ಕೆ ತಲಾ 50 ಕೋಟಿ ರೂ. ಹಂಚಿಕೆ ಮಾಡಿದೆ.

ಇನ್ನು ಎಂಟು ಈಶಾನ್ಯ ರಾಜ್ಯಗಳಾದ ಅಸ್ಸಾಂ, ಅರುಣಾಚಲ ಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ ಮತ್ತು ತ್ರಿಪುರಕ್ಕೆ 378 ಕೋಟಿ ಪರಿಹಾರ ಹಣವನ್ನು ಬಿಡುಗಡೆ ಮಾಡಲಾಗಿದೆ.

ಕಳೆದ ತಿಂಗಳು ಅಷ್ಟೇ ಕೇಂದ್ರ ಸರಕಾರವು 28 ರಾಜ್ಯಗಳಿಗೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ ಸುಮಾರು 1,78,173 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿತ್ತು. ಆದರೆ, ದೇಶದಲ್ಲೇ ಎರಡನೇ ಅತಿ ಹೆಚ್ಚಿನ ತೆರಿಗೆ ಸಂಗ್ರಹವಾಗುವ ಕರ್ನಾಟಕಕ್ಕೆ ಕೇವಲ 6,498 ಕೋಟಿ ರೂ. ಹಂಚಿಕೆ ಮಾಡಲಾಗಿತ್ತು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದರು. ಇದೀಗ ವಿಪತ್ತು ಪರಿಹಾರ ಹಣದಲ್ಲೂ ಕರ್ನಾಟಕಕ್ಕೆ ಕಡಿಮೆ ಹಣ ನೀಡಲಾಗಿದೆ.

ಮೋದಿ ಸರ್ಕಾರ ಈ ವರ್ಷದಲ್ಲಿ ರಾಜ್ಯಗಳಿಗೆ ಈಗಾಗಲೇ 21,476 ಕೋಟಿ ರೂಪಾಯಿ ಹಣ ನೀಡಿದೆ. ಇದರಲ್ಲಿ ರಾಜ್ಯ ವಿಪತ್ತು ನಿಧಿಯಿಂದ (SDRF) 26 ರಾಜ್ಯಗಳಿಗೆ 14,878.40 ಕೋಟಿ ರೂಪಾಯಿ ನೀಡಿದ್ದರೆ, ಎನ್‌ಡಿಆರ್‌ಎಫ್‌ನಿಂದ 15 ರಾಜ್ಯಗಳಿಗೆ 4,637.66 ಕೋಟಿ ರೂಪಾಯಿ ನೀಡಲಾಗಿದೆ. ರಾಜ್ಯ ವಿಪತ್ತು ಮಿಟಿಗೇಷನ್‌ ನಿಧಿಯಿಂದ (SDMF) 1,385.45 ಕೋಟಿ ರೂಪಾಯಿ ಹಣವನ್ನು 11 ರಾಜ್ಯಗಳಿಗೆ ಹಾಗೂ ರಾಷ್ಟ್ರೀಯ ವಿಪತ್ತು ಮಿಟಿಗೇಷನ್‌ ನಿಧಿಯಿಂದ 6 ರಾಜ್ಯಗಳಿಗೆ 574.93 ಕೋಟಿ ಹಣ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!