AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂಪಾಂತರಿತ ವೈರಸ್​ಗೆ ಹೆಚ್ಚು ಶಕ್ತಿಯಿಲ್ಲ: ಉಪಮುಖ್ಯಮಂತ್ರಿ ಅಶ್ವತ್ಥ್​​ ನಾರಾಯಣ್​

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನಲ್ಲಿ ಮಾತನಾಡಿದ ಅಶ್ವತ್ಥ್​​ ನಾರಾಯಣ, ರೂಪಾಂತರ ವೈರಸ್ ಬಹಳ ಬೇಗನೇ ಹರಡುತ್ತದೆ. ಆದರೆ, ಈ ವೈರಸ್ ಅಷ್ಟೇನೂ ಪರಿಣಾಮಕಾರಿ ಅಲ್ಲ ಎಂದರು.

ರೂಪಾಂತರಿತ ವೈರಸ್​ಗೆ ಹೆಚ್ಚು ಶಕ್ತಿಯಿಲ್ಲ: ಉಪಮುಖ್ಯಮಂತ್ರಿ ಅಶ್ವತ್ಥ್​​ ನಾರಾಯಣ್​
ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ
ರಾಜೇಶ್ ದುಗ್ಗುಮನೆ
| Edited By: |

Updated on:Dec 28, 2020 | 8:54 PM

Share

ಬೆಂಗಳೂರು: ಇಂಗ್ಲೆಂಡ್​ನಲ್ಲಿ ರೂಪಾಂತರಿತ ಕೊರೊನಾ ವೈರಸ್​ ಕಾಣಿಸಿಕೊಂಡ ನಂತರ ವಿಶ್ವದೆಲ್ಲೆಡೆ ಕಟ್ಟೆಚ್ಚರ ವಹಿಸಲಾಗುತ್ತಿದೆ. ಕೆಲವರು ಈ ವೈರಸ್​ ಹೆಚ್ಚು ಹಾನಿ ಮಾಡಲಿದೆ ಎನ್ನುವ ವಾದವನ್ನು ಮುಂದಿಟ್ಟಿದ್ದರು. ಇದರಿಂದ ನಮ್ಮ ರಾಜ್ಯದ ಜನತೆಯಲ್ಲಿ ಭಾರೀ ಆತಂಕ ಸೃಷ್ಟಿಯಾಗಿತ್ತು. ಈ ಆತಂಕವನ್ನು ಉಪಮುಖ್ಯಮಂತ್ರಿ ಅಶ್ವತ್ಥ್​​ ನಾರಾಯಣ್ ದೂರ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿರುವ ಇತಿಹಾಸ ಪ್ರಸಿದ್ಧ ಚನ್ನಕೇಶವಸ್ವಾಮಿ ದೇವಾಲಯಕ್ಕೆ ಡಿಸಿಎಂ ಅಶ್ವತ್ಥ್ ನಾರಾಯಣ್ ಕುಟುಂಬ ಸಮೇತ ಭೇಟಿ ನೀಡಿದರು. ದೇವಾಲಯದ ಪಕ್ಕದಲ್ಲಿ ಬ್ರಾಹ್ಮಣ ಟ್ರಸ್ಟ್ ನಿರ್ಮಿಸಿರುವ ಕೇಶವ ಭವನದ ಲಿಫ್ಟ್​​ ಉದ್ಘಾಟನೆ ಕೂಡ ಮಾಡಿದರು. ನಂತರ ಮಾಧ್ಯಮದ ಜೊತೆ ಮಾತನಾಡಿದ ಅವರು, ರೂಪಾಂತರಿತ ವೈರಸ್ ಬಹಳ ಬೇಗನೇ ಹರಡುತ್ತದೆ. ಆದರೆ, ಈ ವೈರಸ್ ಅಷ್ಟೇನೂ ಪರಿಣಾಮಕಾರಿ ಅಲ್ಲ. ಮುಂಬರುವ ದಿನಗಳಲ್ಲಿ ವೈರಸ್​ ಶಕ್ತಿ ಮತ್ತಷ್ಟು ಕುಗ್ಗಲಿದೆ ಎಂದರು.

ಬ್ರಿಟನ್​ನಲ್ಲಿ ಕೊರೊನಾ ವೈರಾಣು ಹೊಸ ಅವತಾರ ತಾಳಿತ್ತು. ಈ ಮೂಲಕ 2ನೇ ಅಲೆಯ ಭೀತಿಯಿಂದ ಬ್ರಿಟನ್​ ಮತ್ತೆ ಲಾಕ್​ಡೌನ್​ ಮೊರೆ ಹೋಗುವ ಅನಿವಾರ್ಯತೆ ಸೃಷ್ಟಿಯಾಗಿದೆ. ಕೊರೊನಾ ಮೊದಲ ಅಲೆಗಿಂತಲೂ 2ನೇ ಅಲೆ ಭೀಕರ ಮತ್ತು ಅಪಾಯಕಾರಿ ಎಂಬ ವಾದಗಳು ಕೇಳಿ ಬಂದಿದ್ದವು. ಹೀಗಾಗಿ, ಇತರೆ ದೇಶಗಳಿಂದ ಬ್ರಿಟನ್ನಿಗೆ ಹೋಗುವ ಮತ್ತು ಅಲ್ಲಿಂದ ಬರುವ ವಿಮಾನಯಾನ ಸ್ಥಗಿತಗೊಳಿಸಲಾಗಿದೆ.

ಕೊರೊನಾ ವೈರಸ್​ 19 ಬಗೆಯ ರೂಪಾಂತರ ಪತ್ತೆ

Published On - 8:53 pm, Mon, 28 December 20

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ