AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂಪಾಂತರಿತ ವೈರಸ್​ಗೆ ಹೆಚ್ಚು ಶಕ್ತಿಯಿಲ್ಲ: ಉಪಮುಖ್ಯಮಂತ್ರಿ ಅಶ್ವತ್ಥ್​​ ನಾರಾಯಣ್​

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನಲ್ಲಿ ಮಾತನಾಡಿದ ಅಶ್ವತ್ಥ್​​ ನಾರಾಯಣ, ರೂಪಾಂತರ ವೈರಸ್ ಬಹಳ ಬೇಗನೇ ಹರಡುತ್ತದೆ. ಆದರೆ, ಈ ವೈರಸ್ ಅಷ್ಟೇನೂ ಪರಿಣಾಮಕಾರಿ ಅಲ್ಲ ಎಂದರು.

ರೂಪಾಂತರಿತ ವೈರಸ್​ಗೆ ಹೆಚ್ಚು ಶಕ್ತಿಯಿಲ್ಲ: ಉಪಮುಖ್ಯಮಂತ್ರಿ ಅಶ್ವತ್ಥ್​​ ನಾರಾಯಣ್​
ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ
ರಾಜೇಶ್ ದುಗ್ಗುಮನೆ
| Edited By: |

Updated on:Dec 28, 2020 | 8:54 PM

Share

ಬೆಂಗಳೂರು: ಇಂಗ್ಲೆಂಡ್​ನಲ್ಲಿ ರೂಪಾಂತರಿತ ಕೊರೊನಾ ವೈರಸ್​ ಕಾಣಿಸಿಕೊಂಡ ನಂತರ ವಿಶ್ವದೆಲ್ಲೆಡೆ ಕಟ್ಟೆಚ್ಚರ ವಹಿಸಲಾಗುತ್ತಿದೆ. ಕೆಲವರು ಈ ವೈರಸ್​ ಹೆಚ್ಚು ಹಾನಿ ಮಾಡಲಿದೆ ಎನ್ನುವ ವಾದವನ್ನು ಮುಂದಿಟ್ಟಿದ್ದರು. ಇದರಿಂದ ನಮ್ಮ ರಾಜ್ಯದ ಜನತೆಯಲ್ಲಿ ಭಾರೀ ಆತಂಕ ಸೃಷ್ಟಿಯಾಗಿತ್ತು. ಈ ಆತಂಕವನ್ನು ಉಪಮುಖ್ಯಮಂತ್ರಿ ಅಶ್ವತ್ಥ್​​ ನಾರಾಯಣ್ ದೂರ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿರುವ ಇತಿಹಾಸ ಪ್ರಸಿದ್ಧ ಚನ್ನಕೇಶವಸ್ವಾಮಿ ದೇವಾಲಯಕ್ಕೆ ಡಿಸಿಎಂ ಅಶ್ವತ್ಥ್ ನಾರಾಯಣ್ ಕುಟುಂಬ ಸಮೇತ ಭೇಟಿ ನೀಡಿದರು. ದೇವಾಲಯದ ಪಕ್ಕದಲ್ಲಿ ಬ್ರಾಹ್ಮಣ ಟ್ರಸ್ಟ್ ನಿರ್ಮಿಸಿರುವ ಕೇಶವ ಭವನದ ಲಿಫ್ಟ್​​ ಉದ್ಘಾಟನೆ ಕೂಡ ಮಾಡಿದರು. ನಂತರ ಮಾಧ್ಯಮದ ಜೊತೆ ಮಾತನಾಡಿದ ಅವರು, ರೂಪಾಂತರಿತ ವೈರಸ್ ಬಹಳ ಬೇಗನೇ ಹರಡುತ್ತದೆ. ಆದರೆ, ಈ ವೈರಸ್ ಅಷ್ಟೇನೂ ಪರಿಣಾಮಕಾರಿ ಅಲ್ಲ. ಮುಂಬರುವ ದಿನಗಳಲ್ಲಿ ವೈರಸ್​ ಶಕ್ತಿ ಮತ್ತಷ್ಟು ಕುಗ್ಗಲಿದೆ ಎಂದರು.

ಬ್ರಿಟನ್​ನಲ್ಲಿ ಕೊರೊನಾ ವೈರಾಣು ಹೊಸ ಅವತಾರ ತಾಳಿತ್ತು. ಈ ಮೂಲಕ 2ನೇ ಅಲೆಯ ಭೀತಿಯಿಂದ ಬ್ರಿಟನ್​ ಮತ್ತೆ ಲಾಕ್​ಡೌನ್​ ಮೊರೆ ಹೋಗುವ ಅನಿವಾರ್ಯತೆ ಸೃಷ್ಟಿಯಾಗಿದೆ. ಕೊರೊನಾ ಮೊದಲ ಅಲೆಗಿಂತಲೂ 2ನೇ ಅಲೆ ಭೀಕರ ಮತ್ತು ಅಪಾಯಕಾರಿ ಎಂಬ ವಾದಗಳು ಕೇಳಿ ಬಂದಿದ್ದವು. ಹೀಗಾಗಿ, ಇತರೆ ದೇಶಗಳಿಂದ ಬ್ರಿಟನ್ನಿಗೆ ಹೋಗುವ ಮತ್ತು ಅಲ್ಲಿಂದ ಬರುವ ವಿಮಾನಯಾನ ಸ್ಥಗಿತಗೊಳಿಸಲಾಗಿದೆ.

ಕೊರೊನಾ ವೈರಸ್​ 19 ಬಗೆಯ ರೂಪಾಂತರ ಪತ್ತೆ

Published On - 8:53 pm, Mon, 28 December 20

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ