AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂಪಾಂತರಿತ ವೈರಸ್​ಗೆ ಹೆಚ್ಚು ಶಕ್ತಿಯಿಲ್ಲ: ಉಪಮುಖ್ಯಮಂತ್ರಿ ಅಶ್ವತ್ಥ್​​ ನಾರಾಯಣ್​

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನಲ್ಲಿ ಮಾತನಾಡಿದ ಅಶ್ವತ್ಥ್​​ ನಾರಾಯಣ, ರೂಪಾಂತರ ವೈರಸ್ ಬಹಳ ಬೇಗನೇ ಹರಡುತ್ತದೆ. ಆದರೆ, ಈ ವೈರಸ್ ಅಷ್ಟೇನೂ ಪರಿಣಾಮಕಾರಿ ಅಲ್ಲ ಎಂದರು.

ರೂಪಾಂತರಿತ ವೈರಸ್​ಗೆ ಹೆಚ್ಚು ಶಕ್ತಿಯಿಲ್ಲ: ಉಪಮುಖ್ಯಮಂತ್ರಿ ಅಶ್ವತ್ಥ್​​ ನಾರಾಯಣ್​
ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ
ರಾಜೇಶ್ ದುಗ್ಗುಮನೆ
| Edited By: |

Updated on:Dec 28, 2020 | 8:54 PM

Share

ಬೆಂಗಳೂರು: ಇಂಗ್ಲೆಂಡ್​ನಲ್ಲಿ ರೂಪಾಂತರಿತ ಕೊರೊನಾ ವೈರಸ್​ ಕಾಣಿಸಿಕೊಂಡ ನಂತರ ವಿಶ್ವದೆಲ್ಲೆಡೆ ಕಟ್ಟೆಚ್ಚರ ವಹಿಸಲಾಗುತ್ತಿದೆ. ಕೆಲವರು ಈ ವೈರಸ್​ ಹೆಚ್ಚು ಹಾನಿ ಮಾಡಲಿದೆ ಎನ್ನುವ ವಾದವನ್ನು ಮುಂದಿಟ್ಟಿದ್ದರು. ಇದರಿಂದ ನಮ್ಮ ರಾಜ್ಯದ ಜನತೆಯಲ್ಲಿ ಭಾರೀ ಆತಂಕ ಸೃಷ್ಟಿಯಾಗಿತ್ತು. ಈ ಆತಂಕವನ್ನು ಉಪಮುಖ್ಯಮಂತ್ರಿ ಅಶ್ವತ್ಥ್​​ ನಾರಾಯಣ್ ದೂರ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿರುವ ಇತಿಹಾಸ ಪ್ರಸಿದ್ಧ ಚನ್ನಕೇಶವಸ್ವಾಮಿ ದೇವಾಲಯಕ್ಕೆ ಡಿಸಿಎಂ ಅಶ್ವತ್ಥ್ ನಾರಾಯಣ್ ಕುಟುಂಬ ಸಮೇತ ಭೇಟಿ ನೀಡಿದರು. ದೇವಾಲಯದ ಪಕ್ಕದಲ್ಲಿ ಬ್ರಾಹ್ಮಣ ಟ್ರಸ್ಟ್ ನಿರ್ಮಿಸಿರುವ ಕೇಶವ ಭವನದ ಲಿಫ್ಟ್​​ ಉದ್ಘಾಟನೆ ಕೂಡ ಮಾಡಿದರು. ನಂತರ ಮಾಧ್ಯಮದ ಜೊತೆ ಮಾತನಾಡಿದ ಅವರು, ರೂಪಾಂತರಿತ ವೈರಸ್ ಬಹಳ ಬೇಗನೇ ಹರಡುತ್ತದೆ. ಆದರೆ, ಈ ವೈರಸ್ ಅಷ್ಟೇನೂ ಪರಿಣಾಮಕಾರಿ ಅಲ್ಲ. ಮುಂಬರುವ ದಿನಗಳಲ್ಲಿ ವೈರಸ್​ ಶಕ್ತಿ ಮತ್ತಷ್ಟು ಕುಗ್ಗಲಿದೆ ಎಂದರು.

ಬ್ರಿಟನ್​ನಲ್ಲಿ ಕೊರೊನಾ ವೈರಾಣು ಹೊಸ ಅವತಾರ ತಾಳಿತ್ತು. ಈ ಮೂಲಕ 2ನೇ ಅಲೆಯ ಭೀತಿಯಿಂದ ಬ್ರಿಟನ್​ ಮತ್ತೆ ಲಾಕ್​ಡೌನ್​ ಮೊರೆ ಹೋಗುವ ಅನಿವಾರ್ಯತೆ ಸೃಷ್ಟಿಯಾಗಿದೆ. ಕೊರೊನಾ ಮೊದಲ ಅಲೆಗಿಂತಲೂ 2ನೇ ಅಲೆ ಭೀಕರ ಮತ್ತು ಅಪಾಯಕಾರಿ ಎಂಬ ವಾದಗಳು ಕೇಳಿ ಬಂದಿದ್ದವು. ಹೀಗಾಗಿ, ಇತರೆ ದೇಶಗಳಿಂದ ಬ್ರಿಟನ್ನಿಗೆ ಹೋಗುವ ಮತ್ತು ಅಲ್ಲಿಂದ ಬರುವ ವಿಮಾನಯಾನ ಸ್ಥಗಿತಗೊಳಿಸಲಾಗಿದೆ.

ಕೊರೊನಾ ವೈರಸ್​ 19 ಬಗೆಯ ರೂಪಾಂತರ ಪತ್ತೆ

Published On - 8:53 pm, Mon, 28 December 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ