AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧುರಾಶ್ವತ್ಥ ದೇಗುಲದಲ್ಲಿ ಚೆಕ್​​​ಗಳನ್ನ ತಿದ್ದಿ ಲಕ್ಷ ಲಕ್ಷ ಹಣ ಗುಳುಂ!

ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲೂಕಿನಲ್ಲಿರುವ ವಿಧುರಾಶ್ವತ್ಥ ಅಮರ ನಾರಾಯಣಸ್ವಾಮಿ ದೇವಸ್ಥಾನದಲ್ಲಿ ನಾಗರಕಲ್ಲು ಪ್ರತಿಷ್ಠಾಪಿಸೋದು ಸಿಕ್ಕಾಪಟ್ಟೆ ಫೇಮಸ್. ಅಲ್ಲದೇ ಕಾಣಿಕೆ, ಸೇವೆ ಅಂತ ಕೋಟಿ ಕೋಟಿ ಹಣ ಭಕ್ತರು ದಾನವಾಗಿ ನೀಡ್ತಾರೆ. ಆದ್ರೆ, ಈ ಹಣದ ಆಡಳಿತಾಧಿಕಾರಿ ಗುರುಪ್ರಸಾದ್, ಲೇಡಿ ಕಂಪ್ಯೂಟರ್ ಆಪರೇಟರ್ ಶೃತಿ ಹಾಗೂ ಸುರೇಶ್ ಕೆಂಗಣ್ಣು ಬೀರಿದೆ. ಈ ಮೂವರು ಸೇರ್ಕೊಂಡು ದೇಗುಲದ ಹೆಸರಲ್ಲಿದ್ದ ಬರೋಬ್ಬರಿ 68 ಲಕ್ಷ ರೂಪಾಯಿ ಲಪಟಾಯಿಸಿದ್ದಾರೆ. ದೇವರ ಹೆಸರಲ್ಲಿ ಲಕ್ಷ ಲಕ್ಷ ಹಣ ಲೂಟು ಹೊಡೆದಿದ್ದು ತಹಶೀಲ್ದಾರ್ ತನಿಖೆಯಲ್ಲಿ ಬಯಲಾಗಿದೆ. ಇನ್ನು, […]

ವಿಧುರಾಶ್ವತ್ಥ ದೇಗುಲದಲ್ಲಿ ಚೆಕ್​​​ಗಳನ್ನ ತಿದ್ದಿ ಲಕ್ಷ ಲಕ್ಷ ಹಣ ಗುಳುಂ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 19, 2019 | 8:19 PM

Share

ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲೂಕಿನಲ್ಲಿರುವ ವಿಧುರಾಶ್ವತ್ಥ ಅಮರ ನಾರಾಯಣಸ್ವಾಮಿ ದೇವಸ್ಥಾನದಲ್ಲಿ ನಾಗರಕಲ್ಲು ಪ್ರತಿಷ್ಠಾಪಿಸೋದು ಸಿಕ್ಕಾಪಟ್ಟೆ ಫೇಮಸ್. ಅಲ್ಲದೇ ಕಾಣಿಕೆ, ಸೇವೆ ಅಂತ ಕೋಟಿ ಕೋಟಿ ಹಣ ಭಕ್ತರು ದಾನವಾಗಿ ನೀಡ್ತಾರೆ. ಆದ್ರೆ, ಈ ಹಣದ ಆಡಳಿತಾಧಿಕಾರಿ ಗುರುಪ್ರಸಾದ್, ಲೇಡಿ ಕಂಪ್ಯೂಟರ್ ಆಪರೇಟರ್ ಶೃತಿ ಹಾಗೂ ಸುರೇಶ್ ಕೆಂಗಣ್ಣು ಬೀರಿದೆ. ಈ ಮೂವರು ಸೇರ್ಕೊಂಡು ದೇಗುಲದ ಹೆಸರಲ್ಲಿದ್ದ ಬರೋಬ್ಬರಿ 68 ಲಕ್ಷ ರೂಪಾಯಿ ಲಪಟಾಯಿಸಿದ್ದಾರೆ. ದೇವರ ಹೆಸರಲ್ಲಿ ಲಕ್ಷ ಲಕ್ಷ ಹಣ ಲೂಟು ಹೊಡೆದಿದ್ದು ತಹಶೀಲ್ದಾರ್ ತನಿಖೆಯಲ್ಲಿ ಬಯಲಾಗಿದೆ.

ಇನ್ನು, ಮುಜರಾಯಿ ಇಲಾಖೆಗೆ ಸೇರಿರೋ ವಿಧುರಾಶ್ವತ್ಥ ದೇವಸ್ಥಾನದ ಹಣವನ್ನೆಲ್ಲಾ ಕರ್ನಾಟಕ ಗ್ರಾಮೀಣ ಬ್ಯಾಂಕ್​​ನಲ್ಲಿರೋ​ ಖಾತೆಗೆ ಜಮೆ ಮಾಡ್ತಾರೆ. ಅಲ್ದೆ, ನಾಗರಕಲ್ಲು ಪ್ರತಿಷ್ಠಾಪಿಸೋಕೆ ಬರೋ ಭಕ್ತರ ಅನುಕೂಲಕ್ಕೆ ತಲಾ 800 ರೂಪಾಯಿ ಖರ್ಚು ಮಾಡ್ಬೋದು. ಹೀಗೆ ಏಪ್ರಿಲ್ 1, 2019ರಿಂದ ಆಗಸ್ಟ್ 31ರವರೆಗೆ 363 ನಾಗರಕಲ್ಲು ಪ್ರತಿಷ್ಠಾಪಿಸಲಾಗಿದೆ. ಈ ಖರ್ಚು ವೆಚ್ಚ ಅಂತ 2 ಲಕ್ಷದ 90 ಸಾವಿರದ 400 ರೂಪಾಯಿ ಆಗಿದೆ.

ಹಗಲು ದರೋಡೆ ಮಾಡಿದ ಆಡಳಿತ ಸಿಬ್ಬಂದಿ: ಆದ್ರೆ, ಈ ಮೂವರು ಸೇರ್ಕೊಂಡು 500 ರೂಪಾಯಿ ಚೆಕ್​​ಗಳನ್ನ 500 ಸಾವಿರ, 5 ಸಾವಿರ ರೂಪಾಯಿ ಚೆಕ್​​ನ್ನ 50 ಸಾವಿರ, 50 ಸಾವಿರ ರೂಪಾಯಿ ಚೆಕ್​​ನ್ನ 5 ಲಕ್ಷ ಎಂದು ತಿದ್ದಿ ಹಗಲು ದರೋಡೆ ಮಾಡಿದ್ದಾರೆ. ಇಷ್ಟೆಲ್ಲಾ ಆಗ್ತಿದ್ರೂ ದೇಗುಲದ ಆಡಳಿತ ಮಂಡಳಿಯವ್ರಿಗೆ ಗೊತ್ತೇ ಇಲ್ವಂತೆ. ಇದೀಗ ತಹಶೀಲ್ದಾರ್ ಸಾಹೇಬ್ರು ಅಕ್ರಮವನ್ನ ಬಯಲಿಗೆಳೆದಿದ್ದು ದಾಖಲೆಗಳನ್ನ ಮುಜರಾಯಿ ಇಲಾಖೆ ಆಯುಕ್ತರಿಗೆ ನೀಡಿದ್ದಾರೆ. ಅದೇನೆ ಇರ್ಲಿ, ದೇವರ ಹೆಸರಲ್ಲಿ ದೇವರಿಗೆ ಮಕ್ಮಲ್ ಟೋಪಿ ಹಾಕಿದ್ರೆ, ಬೇಲಿಯೆ ಎದ್ದು ಹೊಲ ಮೆಯ್ದಿರೋದು ದುರಂತ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್