AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking ಕೆ‌ಪಿಸಿಸಿ ಅಧ್ಯಕ್ಷ ಡಿಕೆ‌ ಶಿವಕುಮಾರ್​​ಗೆ ಜಾಮೀನು ವಿಸ್ತರಣೆ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಇಡಿ ವಿಶೇಷ ನ್ಯಾಯಾಲಯ ಡಿಕೆಶಿ ಅವರಿಗೆ ಜಾಮೀನು ವಿಸ್ತರಣೆ ಮಾಡಿದೆ

Breaking ಕೆ‌ಪಿಸಿಸಿ ಅಧ್ಯಕ್ಷ ಡಿಕೆ‌ ಶಿವಕುಮಾರ್​​ಗೆ ಜಾಮೀನು ವಿಸ್ತರಣೆ
ಡಿಕೆ ಶಿವಕುಮಾರ
TV9 Web
| Edited By: |

Updated on:Aug 02, 2022 | 3:50 PM

Share

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ (Money Laundering case) ದೆಹಲಿಯ ಪಿಎಂಎಲ್ಎ(PMLA) ವಿಶೇಷ ನ್ಯಾಯಾಲಯ ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DKShivakumar) ಅವರ ಜಾಮೀನು ವಿಸ್ತರಣೆ ಮಾಡಿದೆ. ಇತ್ತೀಚೆಗೆ ಜಾರಿ ನಿರ್ದೇಶನಾಲಯ  ಡಿಕೆಶಿ ಮತ್ತು ಇತರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿತ್ತು. ಸಾಕ್ಷ್ಯಗಳನ್ನು ತಿರುಚುವಂತಿಲ್ಲ, ದೇಶದಿಂದ ಹೊರಗೆ ಹೋಗುವಂತೆ ಇಲ್ಲ, 1 ಲಕ್ಷ ಶ್ಯೂರಿಟಿ ಈ ಮೂರು ಷರತ್ತುಗಳೊಂದಿಗೆ ಜಾಮೀನು ವಿಸ್ತರಣೆ ಮಾಡಲಾಗಿದೆ. ನ್ಯಾ ವಿಕಾಸ್ ಧುಲ್ ನ್ಯಾಯಪೀಠ ಈ ಆದೇಶ ನೀಡಿದ್ದು , ಇತರ ಆರೋಪಿಗಳಾದ ಆಂಜನೇಯ ಹನುಮಂತಯ್ಯ, ಸಚಿನ್ ನಾರಾಯಣ, ಸುನಿಲ್ ಶರ್ಮ ಮತ್ತು ರಾಜೇಂದ್ರ ಅವರಿಗೂ ಷರತ್ತುಬದ್ಧ ಜಾಮೀನು ನೀಡಲಾಗಿದೆ.

ಪ್ರಕರಣದ ತನಿಖೆ ನಡೆಸಿದ್ದ ಇಡಿ ನ್ಯಾಯಾಲಯಕ್ಕೆ ಜಾರ್ಜ್‌ಶೀಟ್ ಸಲ್ಲಿಸಿತ್ತು. ಈ ಹಿನ್ನಲೆ ಡಿ.ಕೆ ಶಿವಕುಮಾರ್ ತಮ್ಮ ಮಧ್ಯಂತರ ಜಾಮೀನನ್ನು ಸಾಮಾನ್ಯ ಜಾಮೀನಿಗೆ ಪರಿಗಣಿಸಲು ಮನವಿ ಮಾಡಿದ್ದರು. ಅದೇ ವೇಳೆ ಪ್ರಕರಣದ ಇತರೆ ಆರೋಪಿಗೆ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಲಾಗಿತ್ತು. ಕಳೆದ ಶನಿವಾರ ಈ ಎಲ್ಲ ಅರ್ಜಿಗಳನ್ನು ನ್ಯಾ ವಿಕಾಸ್ ದುಲ್ ವಿಚಾರಣೆ ನಡೆಸಿದ್ದು, ಇತರ ಆರೋಪಿಗಳಿಗೆ ಜಾಮೀನು ನೀಡದಂತೆ ಇಡಿ ಪರ ವಕೀಲರು ಮನವಿ ಮಾಡಿದ್ದರು. ಇತರೆ ನಾಲ್ಕು ಆರೋಪಿಗಳ ಪರ ವಾದ ಮಂಡಿಸಿದ ವಕೀಲರು ಇಡಿ ಜಾಮೀನು ನೀಡಲು ವಿರೋಧಿಸುವುದಕ್ಕೆ ಅರ್ಥವಿಲ್ಲ.

ಯಾವ ಆಧಾರದಲ್ಲಿ ಇಡಿ ಜಾಮೀನು ವಿರೋಧಿಸುತ್ತಿದೆಯೋ ಗೊತ್ತಿಲ್ಲ. ಎಲ್ಲ ಅಂಶಗಳು ಮೇಲ್ಮಟ್ಟದ ನ್ಯಾಯಾಲಯಗಳಲ್ಲಿ ಚರ್ಚೆಯಾಗಿದೆ. ಹಲವು ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ಸಿಕ್ಕಿದ ಹಲವು ಉದಾಹರಣೆಗಳು ಇವೆ. ಇಡಿಚಾರ್ಜ್ ಶೀಟ್ ಸಲ್ಲಿಕೆಯಾಗಿದೆ ಇನ್ನು ಆರೋಪಿಗಳನ್ನ ಬಂಧಿಸುವ ಅಗತ್ಯವೇ ಬರುವುದಿಲ್ಲ. ಇಡಿ ತನಿಖೆಯ ವೇಳೆ ಆರೋಪಿಗಳನ್ನು ಬಂಧಿಸಿಲ್ಲ. ಹೀಗಾಗಿ ಜಾರ್ಜ್ ಶೀಟ್ ಸಲ್ಲಿಕೆ ಬಳಿಕ ಜಾಮೀನು ಪಡೆಯಲು ವಿರೋಧಿಸುವಂತಿಲ್ಲ ಎಂದು ವಾದಿಸಿತ್ತು.

Published On - 3:28 pm, Tue, 2 August 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್