AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾನರ ಸೇನೆಗೆ ಕೊರೊನಾ ಕಂಟಕ; ನಗರ ಪ್ರದೇಶಕ್ಕೆ ಲಗ್ಗೆ ಇಡುವ ಮಂಗಗಳ ಬಗ್ಗೆ ಗಮನಹರಿಸಲು ಚಿತ್ರದುರ್ಗ ಜನರ ಆಗ್ರಹ

ಚಿತ್ರದುರ್ಗ ನಗರ ಬಳಿಯ ಚಂದ್ರವಳ್ಳಿ ಅರಣ್ಯ ಪ್ರದೇಶದಲ್ಲಿ ವಾನರ ಗುಂಪು ತಿನ್ನಲು ಆಹಾರ ಇಲ್ಲದೆ ಹಸಿವಿನಿಂದ ಗೋಳಾಡುತ್ತಿದೆ. ಬೇಸಿಗೆಯ ಸಂದರ್ಭದಲ್ಲಿ ಕಾಡಿನಲ್ಲಿ ನೀರು, ಆಹಾರ ಸಿಗದ ಕಾರಣ ವಾನರ ಸೇನೆ ಈ ಪ್ರವಾಸಿ ತಾಣದಲ್ಲೇ‌ ಬೀಡು ಬಿಡುತ್ತವೆ. ನಿತ್ಯ ನೂರಾರು ಸಂಖ್ಯೆಯಲ್ಲಿ ಬರುವ ಪ್ರವಾಸಿಗರು, ಪ್ರಾಣಿ ಪ್ರಿಯರು ನೀರು, ಆಹಾರ ನೀಡಿ ಪ್ರಾಣಿ ಪಕ್ಷಿಗಳಿಗೆ ಹೊಟ್ಟೆ ತುಂಬಿಸುತ್ತಿದ್ದರು.

ವಾನರ ಸೇನೆಗೆ ಕೊರೊನಾ ಕಂಟಕ; ನಗರ ಪ್ರದೇಶಕ್ಕೆ ಲಗ್ಗೆ ಇಡುವ ಮಂಗಗಳ ಬಗ್ಗೆ ಗಮನಹರಿಸಲು ಚಿತ್ರದುರ್ಗ ಜನರ ಆಗ್ರಹ
ಮಲಗಿರುವ ಮಂಗ
sandhya thejappa
|

Updated on: Apr 26, 2021 | 10:25 AM

Share

ಚಿತ್ರದುರ್ಗ: ಮಹಾಮಾರಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ಇನ್ನೇನು ಎಲ್ಲಾ ಕೆಲಸಗಳನ್ನು ಮೊದಲಿನಂತೆ ಶುರು ಮಾಡಬಹುದೆಂದು ಯೋಚಿಸುವಾಗಲೇ ಇದರ ಎರಡನೇ ಅಲೆ ಅಪ್ಪಳಿಸಿದೆ. ಬಾಳಿ ಬದುಕಬೇಕಾದ ಅದೆಷ್ಟೋ ಜೀವಗಳನ್ನು ಬಲಿ ತೆಗೆದುಕೊಳ್ಳುತ್ತಿರುವ ಕೊರೊನಾ ಹಲವರ ಬದುಕನ್ನು ಕಿತ್ತುಕೊಂಡಿದೆ. ಈ ಮಹಾಮಾರಿ ಕೇವಲ ಮನುಷ್ಯನ ಪಾಲಿಗೆ ಕಂಟಕವಾಗಿಲ್ಲ. ಮೂಕ ಪ್ರಾಣಿಗಳ ಪಾಲಿಗೂ ಕಂಟಕಪ್ರಾಯವಾಗಿದೆ.

ಚಿತ್ರದುರ್ಗ ನಗರ ಬಳಿಯ ಚಂದ್ರವಳ್ಳಿ ಅರಣ್ಯ ಪ್ರದೇಶದಲ್ಲಿ ವಾನರ ಗುಂಪು ತಿನ್ನಲು ಆಹಾರ ಇಲ್ಲದೆ ಹಸಿವಿನಿಂದ ಗೋಳಾಡುತ್ತಿದೆ. ಬೇಸಿಗೆಯ ಸಂದರ್ಭದಲ್ಲಿ ಕಾಡಿನಲ್ಲಿ ನೀರು, ಆಹಾರ ಸಿಗದ ಕಾರಣ ವಾನರ ಸೇನೆ ಈ ಪ್ರವಾಸಿ ತಾಣದಲ್ಲೇ‌ ಬೀಡು ಬಿಡುತ್ತವೆ. ನಿತ್ಯ ನೂರಾರು ಸಂಖ್ಯೆಯಲ್ಲಿ ಬರುವ ಪ್ರವಾಸಿಗರು, ಪ್ರಾಣಿ ಪ್ರಿಯರು ನೀರು, ಆಹಾರ ನೀಡಿ ಪ್ರಾಣಿ ಪಕ್ಷಿಗಳಿಗೆ ಹೊಟ್ಟೆ ತುಂಬಿಸುತ್ತಿದ್ದರು. ಆದರೆ ಇದೀಗ ಕೊರೊನಾ ನಿಯಂತ್ರಣಕ್ಕಾಗಿ ಪ್ರವಾಸಿ ತಾಣಗಳನ್ನು ಬಂದ್ ಮಾಡಲಾಗಿದೆ. ಪರಿಣಾಮ ಕೋಟೆನಾಡಿನ ಚಂದ್ರವಳ್ಳಿ ಹಾಗೂ ಏಳು ಸುತ್ತಿನ ಕೋಟೆ ಖಾಲಿ ಖಾಲಿಯಾಗಿದ್ದು, ವಾನರಸೇನೆ ಆಹಾರವಿಲ್ಲದೆ ಕಂಗಾಲಾಗಿದೆ.

ಚಂದ್ರವಳ್ಳಿ ಪ್ರದೇಶದಲ್ಲಿ ಸುಮಾರು 300ಕ್ಕೂ ಹೆಚ್ಚು ಮಂಗಗಳ ಹಿಂಡು ಬೀಡು ಬಿಟ್ಟಿತ್ತು. ಒಂದು ಕಡೆ ಪ್ರವಾಸಿಗರು ಮಂಗಗಳ‌ ಚೆಲ್ಲಾಟ ಕಂಡು ಮನರಂಜನೆ ಪಡೆಯುತ್ತಿದ್ದರು. ಮತ್ತೊಂದು ಕಡೆ ಪ್ರವಾಸಿಗರು ನೀಡಿದ ಆಹಾರದಿಂದ ಮಂಗಗಳ‌ ಹೊಟ್ಟೆ ತುಂಬುತ್ತಿತ್ತು. ಆದರೆ ಈಗ ಪ್ರವಾಸಿ ತಾಣ ಬಂದ್ ಆದ ಬಳಿಕ ಮಂಗಗಳು ಆಹಾರ ಇಲ್ಲದೆ ನಿತ್ರಾಣಗೊಳ್ಳುತ್ತಿವೆ. ಪ್ರವಾಸಿಗರೂ ಇಲ್ಲ, ಪ್ರಾಣಿ ಪ್ರಿಯರಿಗೆ ಆಹಾರ ನೀಡಲೂ ಅವಕಾಶ ನೀಡುತ್ತಿಲ್ಲ. ಹೀಗಾಗಿ ಕೆಲ ಮಂಗಗಳು ನಗರ ಪ್ರದೇಶಕ್ಕೆ ಲಗ್ಗೆ ಇಡುವ ಸಾಧ್ಯತೆ ಇದೆ. ಜಿಲ್ಲಾಡಳಿತ ಈ ಬಗ್ಗೆ ಗಮನಹರಿಸಿ ಪ್ರಾಣಿಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

Monkeys

ಆಹಾರವಿಲ್ಲದೆ ಆತಂಕಗೊಂಡಿರುವ ಮಂಗ

ಇದನ್ನೂ ಓದಿ

ಕೋಲಾರ: ಗೃಹಪ್ರವೇಶಕ್ಕೆ ಕೊರೊನಾ ಉಡುಗೊರೆ; ಗ್ರಾಮಸ್ಥರಲ್ಲಿ ಹೆಚ್ಚಾದ ಆತಂಕ

Oxygen Shortage| ಆಕ್ಸಿಜನ್ ಕೊರತೆಯಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ನಾಲ್ವರು ಸೋಂಕಿತರು ಬಲಿ

(Monkeys are struggling without food from corona pandemic in Chitradurga)

ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್