AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶಾದ್ಯಂತ ಮುಂಗಾರು ಜೋರು: ಮುಂಗಾರು ತವರು ಕೇರಳದಲ್ಲಿ ಮಳೆ ಮಳೆ, ಮುಂಬೈನಲ್ಲಿ ಹೈಅಲರ್ಟ್​, ಈಶಾನ್ಯದಲ್ಲಿ ಚಂಡಮಾರುತ

Weather 2021 update: ಮುಂಗಾರು ತವರು ಕೇರಳದಲ್ಲಿ ಜೂನ್​ 11- 15 ರ ಮಧ್ಯೆ ಭಾರೀ ಮಳೆಯಾಗಲಿದೆ. ಕೊಂಕಣ ಭಾಗದಲ್ಲಿ ಮತ್ತು ಗೋವಾದಲ್ಲಿಯೂ ಮಳೆಯಾಗಲಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ಕರಾವಳಿ ಭಾಗದಲ್ಲಿ ತುಂಬಾ ಜೋರು ಮಳೆಯಾಗಲಿದೆ.

ದೇಶಾದ್ಯಂತ ಮುಂಗಾರು ಜೋರು: ಮುಂಗಾರು ತವರು ಕೇರಳದಲ್ಲಿ ಮಳೆ ಮಳೆ, ಮುಂಬೈನಲ್ಲಿ ಹೈಅಲರ್ಟ್​, ಈಶಾನ್ಯದಲ್ಲಿ ಚಂಡಮಾರುತ
Monsoon update: ದೇಶಾದ್ಯಂತ ಮುಂಗಾರು ಜೋರು; ಮುಂಗಾರು ತವರು ಕೇರಳದಲ್ಲಿ ಭಾರೀ ಮಳೆ, ಮುಂಬೈನಲ್ಲಿ ಹೈ ಅಲರ್ಟ್​, ಈಶಾನ್ಯದಲ್ಲಿ ಚಂಡಮಾರುತ
ಸಾಧು ಶ್ರೀನಾಥ್​
|

Updated on:Jun 12, 2021 | 10:37 AM

Share

ಮುಂಬೈ: ದೇಶಾದ್ಯಂತ ಮುಂಗಾರು ಮಳೆ ಜೋರಾಗಿದೆ. ಅದರಲ್ಲೂ ವಾಣಿಜ್ಯ ನಗರಿ ಮುಂಬೈ ಥಂಡಾ ಹೊಡೆಯುತ್ತಿದೆ. ಪ್ರಸಕ್ತ ಸಾಲಿನ ನೈಋತ್ಯ ಮುಂಗಾರು ಮಳೆ ಉತ್ತಮವಾಗಿದ್ದು, ದಕ್ಷಿಣದಲ್ಲಿ ಆರಂಭವಾಗಿ ಪೂರ್ವ ಭಾರತ ಮತ್ತು ಮಧ್ಯ ಭಾರತದ ಸುತ್ತಮುತ್ತ ಬಿರುಬೀಸುತ್ತಿದೆ. ಭಾರತೀಯ ಹವಾಮಾನ ಇಲಾಖೆ (India Meteorological Department -IMD) ವರದಿಗಳ ಪ್ರಕಾರ ಭಾರತದ ಪೂರ್ವ-ಮಧ್ಯ ಭಾಗದಲ್ಲಿ ಮತ್ತು ಬಂಗಾಳ ಕೊಲ್ಲಿಯ ಈಶಾನ್ಯ ಭಾಗದಲ್ಲಿ ಚಂಡಮಾರುತಗಳ ಸುಳಿ ಎದ್ದಿದ್ದು, ವಾಯುಭಾರ ಕುಸಿತ ಉಂಟಾಗಿದೆ. ಇದರಿಂದ ಪಶ್ಚಿಮ ಬಂಗಾಳ, ಒಡಿಶಾ, ಛತ್ತೀಸ್​ಗಢ ರಾಜ್ಯಗಳಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಲಿದೆ.

ಇನ್ನು ಮುಂಗಾರು ತವರು ಕೇರಳದಲ್ಲಿ ಜೂನ್​ 11- 15 ರ ಮಧ್ಯೆ ಭಾರೀ ಮಳೆಯಾಗಲಿದೆ. ಕೊಂಕಣ ಭಾಗದಲ್ಲಿ ಮತ್ತು ಗೋವಾದಲ್ಲಿಯೂ ಮಳೆಯಾಗಲಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ಕರಾವಳಿ ಭಾಗದಲ್ಲಿ ತುಂಬಾ ಜೋರು ಮಳೆಯಾಗಲಿದೆ.

ಥಂಡಾ ಹೊಡೆಯುತ್ತಿದೆ ವಾಣಿಜ್ಯ ನಗರಿ ಮುಂಬೈ: ಮುಂಗಾರು ಪ್ರಭಾವ ಮುಂಬೈನಲ್ಲಿ ಹೈ ಅಲರ್ಟ್​​​ನಲ್ಲಿದೆ. ನಾಳೆ ಭಾನುವಾರ ಮತ್ತು ಸೋಮವಾರ ಮುಂಬೈ ಮತ್ತು ಸುತ್ತಮುತ್ತ ಭಾಗಗಳಲ್ಲಿ ವಿಪರೀತ ಮಳೆಯಾಗಲಿದೆ. ಹಾಗಾಗಿ ನೌಕಾ ಪಡೆ, ಕೋಸ್ಟ್​ ಗಾರ್ಡ್​ ಮತ್ತು ಎನ್​ಡಿಆರ್​​ಎಫ್ ತಂಡಗಳಿಗೆ ಸನ್ನದ್ಧ ಸ್ಥಿತಿಯಲ್ಲಿರುವಂತೆ ಬೃಹನ್ಮುಂಬೈ ಮುನ್ಸಿಪಲ್​ ಕಾರ್ಪೊರೇಶನ್​ ​​(Brihanmumbai Municipal Corporation -BMC) ಸೂಚನೆ ನೀಡಿದೆ.

BMC ಯ ಎಲ್ಲಾ ಸಿಬ್ಬಂದಿ ಕೆಲಸಕ್ಕೆ ಹಾಜರಿರಬೇಕು. ಅಗ್ನಿಶಾಮಕ ದಳಕ್ಕೂ ಎಚ್ಚರ ಸ್ಥಿತಿಯಲ್ಲಿರುವಂತೆ ಹೇಳಲಾಗಿದೆ. ಇನ್ನು ಸಂಚಾರಕ್ಕಾಗಿ ಬೆಸ್ಟ್​ ಮತ್ತು ವಿದ್ಯುತ್​ ಸಂಚಾರಕ್ಕಾಗಿ ಅದಾನಿ ವಿದ್ಯುತ್​ ಸಬ್​ಸ್ಟೇಷನ್​​ಗಳಿಗೂ ಎಚ್ಚರಿಕೆಯ ಸಂದೇಶ ನೀಡಲಾಗಿದೆ. ಮಹಾರಾಷ್ಟ್ರದ ರಾಯಘಡ ಮತ್ತು ರತ್ನಗಿರಿ ಕರಾವಳಿ ಜಿಲ್ಲೆಗಳಲ್ಲೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂಬೈ, ಥಾಣೆ, ರಾಯಘಡ ಮತ್ತು ರತ್ನಗಿರಿಯಲ್ಲಿ ಮುಂದಿನ 24 ಗಂಟೆಯಲ್ಲಿ 21 ಸೆಂ.ಮೀ. ಅತೀವ ಮಳೆ ಬೀಳಲಿದೆ.

ಜೊತೆಗೆ ಉತ್ತರ ಪ್ರದೇಶ ಅನೇಕ ಜಿಲ್ಲೆಗಳಲ್ಲಿ ಇನ್ನೇನು ಮಳೆ ಶುರುವಾಗಲಿದೆ. ಸಿಕ್ಕಿಂ, ಜಾರ್ಖಂಡ್, ಮಧ್ಯಪ್ರದೇಶ ಮತ್ತು ತೆಲಂಗಾಣದವರೆಗೂ ವಾಯುಭಾರ ಕುಸಿತದ ಪ್ರಭಾವ ಬೀರಲಿದೆ. ಇದರಿಂದ ಈಗಾಗಲೇ ಮಳೆ ಬೀಳುತ್ತಿದ್ದು, ಮುಂದೆ ಹೆಚ್ಚಾಗಲಿದೆ.

ಬಿಹಾರ, ಉತ್ತರಾಖಂಡ ಮತ್ತು ರಾಜಸ್ಥಾನದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮುಂಗಾರು ಮಳೆ ಬೀಳಲಿದೆ. ನಾಳೆ, ನಾಳಿದ್ದು ಈ ಮೂರೂ ರಾಜ್ಯಗಳಲ್ಲಿ ಮುಂಗಾರು ಅರ್ಭಟ ಜೋರಾಗಿರಲಿದೆ.

Monsoon 2021: ಈ ಬಾರಿ ಮುಂಗಾರು ಸೂಪರು; ಕೊರೊನಾದಿಂದ ನೆಲಕಚ್ಚಿರುವ ಆರ್ಥಿಕತೆಗೆ ಮುಂಗಾರು ಆಸರೆಯಾಗಬಲ್ಲದಾ?

(Monsoon 2021 advances in India very heavy rainfall likely in many states IMD Issued High Alert Issued for Mumbai)

Published On - 10:34 am, Sat, 12 June 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!