AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dams: ಮುಂಗಾರು ಜೋರು, ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​, ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ

Karnataka Reservoirs: ಕರ್ನಾಟಕದಲ್ಲಿ ಕಳೆದ ವಾರದಿಂದ ವ್ಯಾಪಕ ಮಳೆಯಾಗುತ್ತಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ವಿಪರೀತವಾಗಿದ್ದು, 15 ಜಿಲ್ಲೆಗಳಲ್ಲಿ ರೆಡ್​ ಅಲರ್ಟ್ ಘೋಸಷಿಸಲಾಗಿದೆ. ​ಬಹುತೇಕ ಎಲ್ಲ ಜಲಾಶಗಳಲ್ಲೂ ಒಂದೊಂದೇ ಅಡಿ ನೀರಿನ ಮಟ್ಟ ಏರುತ್ತಿದೆ. ಕೆಆರ್​ಎಸ್ ಕಳೆದೊಂದು ವಾರದಲ್ಲಿ 8 ಅಡಿ ನೀರು ತುಂಬಿಕೊಡಿದೆ.

Karnataka Dams: ಮುಂಗಾರು ಜೋರು, ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​, ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ
Karnataka Dams: ಮುಂಗಾರು ಜೋರು, ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​, 12 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ
TV9 Web
| Updated By: ಸಾಧು ಶ್ರೀನಾಥ್​|

Updated on:Jul 23, 2021 | 9:03 AM

Share

ಬೆಂಗಳೂರು: ಕರ್ನಾಟಕದಲ್ಲಿ ಕಳೆದ ವಾರದಿಂದ ವ್ಯಾಪಕ ಮಳೆಯಾಗುತ್ತಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ (Monsoon 2021) ವಿಪರೀತವಾಗಿದ್ದು, 15 ಜಿಲ್ಲೆಗಳಲ್ಲಿ ರೆಡ್​ ಅಲರ್ಟ್ ಘೋಸಷಿಸಲಾಗಿದೆ. ​ಬಹುತೇಕ ಎಲ್ಲ ಜಲಾಶಗಳಲ್ಲೂ ಒಂದೊಂದೇ ಅಡಿ ನೀರಿನ ಮಟ್ಟ ಏರುತ್ತಿದೆ.

ಕಾವೇರಿ ನದಿಯ ಹರಿವು ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ನದಿ ತೀರದ ಜನರಿಗೆ ಪ್ರವಾಹ ಭೀತಿ ಎದುರಾಗಿದೆ. ಭಾರೀ ಮಳೆಯ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವು ಕೂಡಾ ಹೆಚ್ಚಾಗಿದೆ. ಕೆಆರ್​ಎಸ್ ಕಳೆದೊಂದು ವಾರದಲ್ಲಿ 8 ಅಡಿ ನೀರು ತುಂಬಿಕೊಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ (Weather Report). ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​ ಘೋಷಿಸಲಾಗಿದ್ದು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ.

ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಾದ ಕಾವೇರಿ ಕಣಿವೆ ಭಾಗದ ಕೆಆರ್​ಎಸ್​, ಕಬಿನಿ, ಹೇಮಾವತಿ, ಹಾರಂಗಿ ಮತ್ತು ಜಲ ವಿದ್ಯುತ್​ ಅಣೆಕಟ್ಟೆಗಳಾದ ಲಿಂಗನಮಕ್ಕಿ, ಸೂಪಾ ಮತ್ತು ಕೃಷ್ಣಾ ನದಿ ಭಾಗದ ಜಲಾಶಯಗಳಾದ ತುಂಗಭದ್ರಾ, ಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ, ಆಲಮಟ್ಟಿ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?

ಕಾವೇರಿ ಕಣಿವೆ ಭಾಗದ ಜಲಾಶಯಗಳು:

1) ಕೆಆರ್​ಎಸ್​ ಜಲಾಶಯ | KRS Dam ಇಂದಿನ ನೀರಿನ ಮಟ್ಟ: 98.00 ಅಡಿ ಗರಿಷ್ಠ ಸಾಮರ್ಥ್ಯ: 124.80 ಅಡಿ

2) ಹಾರಂಗಿ ಜಲಾಶಯ | Harangi Dam ಇಂದಿನ ನೀರಿನ ಮಟ್ಟ: 2857 ಅಡಿ ಗರಿಷ್ಠ ಸಾಮರ್ಥ್ಯ: 2859 ಅಡಿ

3) ಹೇಮಾವತಿ ಜಲಾಶಯ | Hemavathi Dam ಇಂದಿನ ನೀರಿನ ಮಟ್ಟ: 2904 ಅಡಿ ಗರಿಷ್ಠ ಸಾಮರ್ಥ್ಯ: 2922 ಅಡಿ

4) ಕಬಿನಿ ಜಲಾಶಯ | Kabini Dam ಇಂದಿನ ನೀರಿನ ಮಟ್ಟ: 2281 ಅಡಿ ಗರಿಷ್ಠ ಸಾಮರ್ಥ್ಯ: 2284 ಅಡಿ

ಜಲ ವಿದ್ಯುತ್​ ಅಣೆಕಟ್ಟೆಗಳು:

5) ಲಿಂಗನಮಕ್ಕಿ ಜಲಾಶಯ | Linganamakki Dam ಇಂದಿನ ನೀರಿನ ಮಟ್ಟ: 1792 ಅಡಿ ಗರಿಷ್ಠ ಸಾಮರ್ಥ್ಯ: 1819 ಅಡಿ

6) ಸೂಪಾ ಜಲಾಶಯ | Supa Dam ಇಂದಿನ ನೀರಿನ ಮಟ್ಟ: 542 ಅಡಿ ಗರಿಷ್ಠ ಸಾಮರ್ಥ್ಯ: 564 ಅಡಿ

ಕೃಷ್ಣಾ ನದಿ ಭಾಗದ ಜಲಾಶಯಗಳು:

7) ತುಂಗಾಭದ್ರಾ ಜಲಾಶಯ | Tungabhadra Dam ಇಂದಿನ ನೀರಿನ ಮಟ್ಟ: 1616 ಅಡಿ ಗರಿಷ್ಠ ಸಾಮರ್ಥ್ಯ: 1633 ಅಡಿ

8) ಭದ್ರಾ ಜಲಾಶಯ | Bhadra Dam ಇಂದಿನ ನೀರಿನ ಮಟ್ಟ: 163 ಅಡಿ ಗರಿಷ್ಠ ಸಾಮರ್ಥ್ಯ: 186 ಅಡಿ

9) ಮಲಪ್ರಭಾ ಜಲಾಶಯ | Malaprabha Dam ಇಂದಿನ ನೀರಿನ ಮಟ್ಟ: 2066.00 ಅಡಿ ಗರಿಷ್ಠ ಸಾಮರ್ಥ್ಯ: 2079.05 ಅಡಿ

10) ಘಟಪ್ರಭಾ ಜಲಾಶಯ | Ghataprabha Dam ಇಂದಿನ ನೀರಿನ ಮಟ್ಟ: 2145 ಅಡಿ ಗರಿಷ್ಠ ಸಾಮರ್ಥ್ಯ: 2175 ಅಡಿ

11) ನಾರಾಯಣಪುರ ಜಲಾಶಯ | Narayanpur Dam ಇಂದಿನ ನೀರಿನ ಮಟ್ಟ: 492 ಮೀಟರ್ ಗರಿಷ್ಠ ಸಾಮರ್ಥ್ಯ: 492.25 ಮೀಟರ್

12) ಆಲಮಟ್ಟಿ ಜಲಾಶಯ | Almatti Dam ಇಂದಿನ ನೀರಿನ ಮಟ್ಟ: 518 ಮೀಟರ್ ಗರಿಷ್ಠ ಸಾಮರ್ಥ್ಯ: 519.69 ಮೀಟರ್

(Monsoon 2021 Karnataka 12 reservoirs and dams water level as on 19th July 2021)

Published On - 8:41 am, Mon, 19 July 21

ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್