AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon 2022: ಕೇರಳಕ್ಕೆ ಮುಂಗಾರು ಪ್ರವೇಶ; ಜೂನ್ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ಮಾನ್ಸೂನ್ ಶುರು

Kerala Monsoon: ಸಾಮಾನ್ಯವಾಗಿ ಪ್ರತಿವರ್ಷ ಜೂನ್ 1ರಂದು ಕೇರಳದಲ್ಲಿ ಮುಂಗಾರು ಪ್ರವೇಶವಾಗುತ್ತದೆ. ಆದರೆ, ಈ ಬಾರಿ ಮೂರು ದಿನ ಮೊದಲೇ ಮಾನ್ಸೂನ್ ಪ್ರವೇಶವಾಗಿದೆ.

Monsoon 2022: ಕೇರಳಕ್ಕೆ ಮುಂಗಾರು ಪ್ರವೇಶ; ಜೂನ್ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ಮಾನ್ಸೂನ್ ಶುರು
ರಾಜ್ಯದಲ್ಲಿ ವರುಣನ ಆರ್ಭಟ
TV9 Web
| Updated By: ಸುಷ್ಮಾ ಚಕ್ರೆ|

Updated on: May 29, 2022 | 6:16 PM

Share

ಬೆಂಗಳೂರು: ಕೇರಳಕ್ಕೆ ಮುಂಗಾರು ಮಳೆ (Monsoon) ಎಂಟ್ರಿಯಾಗಿದೆ. ಕೇರಳದಲ್ಲಿ ಈ ವರ್ಷದ ನೈಋತ್ಯ ಮಾನ್ಸೂನ್ ಶುರುವಾಗಿದ್ದು, ವಾಡಿಕೆಗಿಂತ 3 ದಿನ‌ ಮುಂಚಿತವಾಗಿ ಮುಂಗಾರು ಪ್ರವೇಶವಾಗಿದೆ. ಜೂನ್​ ಮೊದಲ ವಾರದಲ್ಲಿ ಕರ್ನಾಟಕಕ್ಕೂ ಮುಂಗಾರು ಪ್ರವೇಶವಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. ಕೇರಳದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಸಾಮಾನ್ಯವಾಗಿ ಪ್ರತಿವರ್ಷ ಜೂನ್ 1ರಂದು ಕೇರಳದಲ್ಲಿ ಮುಂಗಾರು ಪ್ರವೇಶವಾಗುತ್ತದೆ. ಆದರೆ, ಈ ಬಾರಿ ಮೂರು ದಿನ ಮೊದಲೇ ಮಾನ್ಸೂನ್ ಪ್ರವೇಶವಾಗಿದೆ. ಅಂತಿಮವಾಗಿ ಜೂನ್ 1ರ ಸಾಮಾನ್ಯ ದಿನಾಂಕಕ್ಕಿಂತ ಮೂರು ದಿನಗಳ ಮುಂಚಿತವಾಗಿ ಕೇರಳದಲ್ಲಿ ನೈಋತ್ಯ ಮಾನ್ಸೂನ್ ಪ್ರಾರಂಭವಾಗಿದೆ. ಕೇರಳದಾದ್ಯಂತ ವ್ಯಾಪಕವಾದ ಮಳೆಯ ಹೊರತಾಗಿಯೂ ಮಾನ್ಸೂನ್‌ನ ಆರಂಭವು ತೀವ್ರತೆಯ ದೃಷ್ಟಿಯಿಂದ ಕಡಿಮೆಯಾಗಿದೆ.

ಇದನ್ನೂ ಓದಿ:Monsoon 2022: ಕರ್ನಾಟಕದ ಕರಾವಳಿಯಲ್ಲಿ ಇಂದು ಮಳೆ; ಇನ್ನೆರಡು ದಿನಗಳಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ಮುಂದಿನ ಐದು ದಿನಗಳಲ್ಲಿ ಕೇರಳದಾದ್ಯಂತ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕವಾದ ಮಳೆಯ ಮುನ್ಸೂಚನೆ ಇದೆ, ಗುರುವಾರದವರೆಗೆ ಕೇರಳದ ಕರಾವಳಿಯಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಮುಂದಿನ 3-4 ದಿನಗಳಲ್ಲಿ ಕೇರಳದ ಕೆಲವು ಭಾಗಗಳು, ತಮಿಳುನಾಡು, ಕರ್ನಾಟಕ ಮತ್ತು ಈಶಾನ್ಯ ರಾಜ್ಯಗಳ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ.

ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪರಿಸ್ಥಿತಿಯ ಲಾಭ ಪಡೆಯಲು ಸುಲಿಗೆಗಿಳಿದ ಖಾಸಗಿ ಸಾರಿಗೆ ಸಂಸ್ಥೆಗಳು
ಪರಿಸ್ಥಿತಿಯ ಲಾಭ ಪಡೆಯಲು ಸುಲಿಗೆಗಿಳಿದ ಖಾಸಗಿ ಸಾರಿಗೆ ಸಂಸ್ಥೆಗಳು
ಅಪ್ಪು ಹೋದಮೇಲೆ ಏರಿಯಾನಲ್ಲಿ ಗಣೇಶ ಇಡುತ್ತಿಲ್ಲ: ವಿನಯ್ ರಾಜ್​ಕುಮಾರ್
ಅಪ್ಪು ಹೋದಮೇಲೆ ಏರಿಯಾನಲ್ಲಿ ಗಣೇಶ ಇಡುತ್ತಿಲ್ಲ: ವಿನಯ್ ರಾಜ್​ಕುಮಾರ್
ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು
ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು
ಚಾಮುಂಡೇಶ್ವರಿ ತಾಯಿಯೇ ಕರೆಸಿಕೊಳ್ಳುತ್ತಿದ್ದಾಳೆ: ಟೀಕೆಗಳಿಗೆ ಬಾನು ಟಾಂಗ್
ಚಾಮುಂಡೇಶ್ವರಿ ತಾಯಿಯೇ ಕರೆಸಿಕೊಳ್ಳುತ್ತಿದ್ದಾಳೆ: ಟೀಕೆಗಳಿಗೆ ಬಾನು ಟಾಂಗ್
ಪ್ರವಾಹದಿಂದ ಕೊಚ್ಚಿ ಹೋದ ಮನಾಲಿ ರಸ್ತೆ; ನದಿಯಲ್ಲಿ ಉರುಳಿ ಬಿದ್ದ ಕಾರು
ಪ್ರವಾಹದಿಂದ ಕೊಚ್ಚಿ ಹೋದ ಮನಾಲಿ ರಸ್ತೆ; ನದಿಯಲ್ಲಿ ಉರುಳಿ ಬಿದ್ದ ಕಾರು
ಮಟ್ಟಣ್ಣನವರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ದೂರುದಾರ
ಮಟ್ಟಣ್ಣನವರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ದೂರುದಾರ
ಕಳ್ಳರ ಕೈಯಲ್ಲಿ ಪಿಸ್ಟಲ್ ಕಂಡ ಮಾಲೀಕ ಪ್ಯಾನಿಕ್ ಆಗದೆ ಕಿರುಚಿದರು
ಕಳ್ಳರ ಕೈಯಲ್ಲಿ ಪಿಸ್ಟಲ್ ಕಂಡ ಮಾಲೀಕ ಪ್ಯಾನಿಕ್ ಆಗದೆ ಕಿರುಚಿದರು
ಬಾನು ಮುಷ್ತಾಕ್ ಕನ್ನಡದ ಬಗ್ಗೆ ಯಾವತ್ತೂ ಕೆಟ್ಟದ್ದಾಗಿ ಮಾತಾಡಿಲ್ಲ: ಸಚಿವ
ಬಾನು ಮುಷ್ತಾಕ್ ಕನ್ನಡದ ಬಗ್ಗೆ ಯಾವತ್ತೂ ಕೆಟ್ಟದ್ದಾಗಿ ಮಾತಾಡಿಲ್ಲ: ಸಚಿವ
ನಸುಕಿನ ಜಾವ 5 ಗಂಟೆಗೆ SIT ಕಚೇರಿಗೆ ಬಂದು ಕುಳಿತ ಸುಜಾತಾ ಭಟ್
ನಸುಕಿನ ಜಾವ 5 ಗಂಟೆಗೆ SIT ಕಚೇರಿಗೆ ಬಂದು ಕುಳಿತ ಸುಜಾತಾ ಭಟ್
ದಶಕಗಳಿಂದ ಕಾಂಗ್ರೆಸ್​ನಲ್ಲಿರುವ ನನ್ನ ಮೇಲೆ ಜವಾಬ್ದಾರಿ ಹೆಚ್ಚು: ಪ್ರಸಾದ್
ದಶಕಗಳಿಂದ ಕಾಂಗ್ರೆಸ್​ನಲ್ಲಿರುವ ನನ್ನ ಮೇಲೆ ಜವಾಬ್ದಾರಿ ಹೆಚ್ಚು: ಪ್ರಸಾದ್