Karnataka Rains: ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಜುಲೈ 27ರವರೆಗೆ ಭಾರಿ ಮಳೆ

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಜುಲೈ 27ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಜುಲೈ 27ರವರೆಗೆ ಭಾರಿ ಮಳೆ
ಮಳೆ
Image Credit source: Mint

Updated on: Jul 23, 2023 | 8:10 AM

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಜುಲೈ 27ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೊಷಿಸಲಾಗಿದೆ. ಹಾಸನ, ಯಾದಗಿರಿ, ಕಲಬರಗಿ, ಧಾರವಾಡ, ಬೆಳಗಾವಿ, ಬೀದರ್​ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇನ್ನುಳಿದಂತೆ ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿತ್ತು, ಕರಾವಳಿಯಲ್ಲಿ ಮತ್ತು ದಕ್ಷಿಣ ಒಳನಾಡಿನಲ್ಲಿ ಚುರುಕಾಗಿತ್ತು.
ಕ್ಯಾಸಲ್​ರಾಕ್, ಯಲ್ಲಾಪುರ, ಕಾರ್ಕಳ, ಸಿದ್ದಾಪುರ,ಕದ್ರಾ, ಮಂಚಿಕೆರೆ, ಜೋಯಿಡಾ, ಲೋಂಡಾ, ಶೃಂಗೇರಿ, ಕೊಪ್ಪ, ಕೊಲ್ಲೂರು, ಜಯಪುರ, ಲಿಂಗನಮಕ್ಕಿ, ಗೇರುಸೊಪ್ಪ, ಸಿದ್ದಾಪುರ, ಬೆಳ್ತಂಗಡಿ, ತಾಳಗುಪ್ಪ, ಕಮ್ಮರಡಿ, ಕೊಟ್ಟಿಗೆಹಾರ, ಸೋಮವಾರಪೇಟೆ, ಪುತ್ತೂರು, ಧರ್ಮಸ್ಥಳದಲ್ಲಿ ಭಾರೀ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Weather: ಕಲಬುರಗಿ, ಯಾದಗಿರಿ ಜಿಲ್ಲೆಯಲ್ಲಿ ಎರಡು ದಿನ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬನವಾಸಿ, ಅಫಜಲಪುರ, ಹಾನಗಲ್, ಹಳಿಯಾಳ, ಕಿರವತ್ತಿ, ಶಿರಾಲಿ, ಕಾರವಾರ, ಅಂಕೋಲಾ, ಬೇಲಿಕೇರಿ, ಕಲಬುರಗಿ, ಕಲಘಟಗಿ, ಸಕಲೇಶಪುರ, ಹುಂಚದಕಟ್ಟೆ, ಭಾಗಮಂಡಲ, ಕಳಸ, ಅಕ್ಕಿಆಲೂರು, ಆನವಟ್ಟಿ, ಬಾಳೆಹೊನ್ನೂರು, ಶನಿವಾರಸಂತೆ, ಮುಂಡಗೋಡ, ಕುಮಟಾ, ಹೊನ್ನಾವರ, ಮಾಣಿ, ಸುಳ್ಯ, ಉಡುಪಿ, ಬೆಳಗಾವಿ, ಅಡಕ, ಮುಧೋಳ, ಕಮಲಾಪುರ, ಶಿವಮೊಗ್ಗ, ನಿಪ್ಪಾಣಿ, ಹಿರೆಕೆರೂರು, ಸಂಕೇಶ್ವರ, ಅಥಣಿ, ತರೀಕೆರೆ, ಪಣಂಬೂರು, ಸೈದಾಪುರ, ಪೊನ್ನಂಪೇಟೆ, ರಾಯಬಾಗ, ಚಿಕ್ಕೋಡಿ, ಹುಕ್ಕೇರಿ, ಬೈಲಹೊಂಗಲ, ಅಣ್ಣಿಗೆರೆ, ರಾಯಚೂರು, ಹುಮನಾಬಾದ್, ಸಿಂಧನೂರು, ಬಾಗಲಕೋಟೆ, ದಾವಣಗೆರೆ, ಅಜ್ಜಂಪುರ, ಚಿಕ್ಕಮಗಳೂರು, ಹರಪನಹಳ್ಳಿ, ಸರಗೂರಿನಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us