AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಮುಂದಿನ 48 ಗಂಟೆಗಳಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶ, ಜೂನ್​ 2ರಿಂದ ಮಳೆ ಜೋರು

ಕರ್ನಾಟಕಕ್ಕೆ ಶೀಘ್ರ ಮುಂಗಾರು ಶೀಘ್ರ ಪ್ರವೇಶವಾಗಲಿದ್ದು, ಜೂನ್​ 2ರಂದು ವಿವಿಧ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.

Karnataka Rains: ಮುಂದಿನ 48 ಗಂಟೆಗಳಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶ, ಜೂನ್​ 2ರಿಂದ ಮಳೆ ಜೋರು
ಮಳೆImage Credit source: The Economic Times
ನಯನಾ ರಾಜೀವ್
|

Updated on: May 31, 2024 | 7:33 AM

Share

ಕರ್ನಾಟಕಕ್ಕೆ ಮುಂದಿನ 48 ಗಂಟೆಗಳಲ್ಲಿ ಮುಂಗಾರು ಪ್ರವೇಶವಾಗಲಿದ್ದು ಜೂನ್​ 2ರಿಂದ ರಾಜ್ಯದೆಲ್ಲೆಡೆ ಮಳೆ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.

ಉತ್ತರ ಒಳನಾಡಿನಲ್ಲಿ ಎರಡು ದಿನ ಒಣಹವೆ ಇರಲಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದಲೇ ಮಳೆ ಶುರುವಾಗಲಿದೆ. ಮಂಗಳೂರು, ಧರ್ಮಸ್ಥಳ, ಪಣಂಬೂರು, ಮಾಣಿ, ಪುತ್ತೂರು, ಉಡುಪಿ, ಉಪ್ಪಿನಂಗಡಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನ ಮಳೆ

ಹೊನ್ನಾವರದಲ್ಲಿ 33.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 38.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 28.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 35.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 39.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 37.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹಾವೇರಿಯಲ್ಲಿ 33.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 37.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ,ರಾಯಚೂರಿನಲ್ಲಿ 39.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ 28.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 33.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು