AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್, ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳ ಸಜ್ಜು

Karnataka Monsoon Session 2024: ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಇದೇ ಜುಲೈ 15ರಿಂದ ಹತ್ತು ದಿನಗಳ ಕಾಲ ಮುಂಗಾರು ಅಧಿವೇಶನ ನಡೆಯಲಿದೆ. ಹೀಗಾಗಿ ಈ ಬಾರಿ ಅಧಿವೇಶನ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಯಾಕಂದ್ರೆ, ರಾಜ್ಯದಲ್ಲಿ ಕೆಲ ಹಗರಣಗಳು ಮತ್ತು ಬೆಲೆ ಏರಿಕೆ ಮಾಡಲಾಗಿದೆ. ಇವುಗಳ ವಿರುದ್ಧ ಹೋರಾಟಕ್ಕೆ ವಿಪಕ್ಷಗಳು ಸಜ್ಜಾಗಿವೆ.

ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್, ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳ ಸಜ್ಜು
ವಿಧಾನಸೌಧ
ಪ್ರಸನ್ನ ಗಾಂವ್ಕರ್​
| Edited By: |

Updated on: Jul 01, 2024 | 7:04 PM

Share

 ಬೆಂಗಳೂರು, (ಜುಲೈ 01): ಕರ್ನಾಟಕ ವಿಧಾನಸಭೆಯ ಮುಂಗಾರ ಅಧಿವೇಶಕ್ಕೆ ದಿನಾಂಕ ನಿಗದಿಯಾಗಿದೆ. ಜುಲೈ 15ರಿಂದ ಜುಲೈ 26ರವರೆಗೆ ಹತ್ತುದಿನಗಳ ಕಾಲ ಅಧಿವೇಶನ ನಡೆಯಲಿದೆ. ಅಧಿವೇಶನದ ದಿನಾಂಕ ನಿಗದಿಗೆ ಕಳೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರ ವಿವೇಚನೆಗೆ ಬಿಡಲಾಗಿತ್ತು. ಅದರಂತೆ ಸಿದ್ದರಾಮಯ್ಯ ಅವರು ಅಧಿವೇಶನದ ದಿನಾಂಕ ಅಂತಿಮಗೊಳಿಸಿದ್ದು, ಈ ಕುರಿತು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿದೆ. ಇನ್ನು ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​​ ಆಡಳಿತದಲ್ಲಿನ ಲೋಪ ಎತ್ತಿ ಸರ್ಕಾರ ಮೇಲೆ ಮುಗಿಬೀಳಲು ಸಜ್ಜಾಗಿವೆ. ಅದರಲ್ಲೂ ಮುಖ್ಯವಾಗಿ ಬೆಲೆ ಏರಿಕೆ ವಿರುದ್ಧ ಹೋರಾಟ ಮಾಡಲಿವೆ.

ಈ ಮುಂಗಾರು ಅಧಿವೇಶಷನದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ. ಇಂಧನ, ಹಾಲ ಬೆಲೆ ಏರಿಕೆ ವಿರೋಧಿಸಿ ಸರ್ಕಾರದ ವಿರುದ್ಧ ಮುಗಿಬೀಳಲಿವೆ. ಇನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಗರಣ, ಮೈಸೂರು ಮುಡಾದಲ್ಲಿನ ಹಗರಣಗಳನ್ನು ಇಟ್ಟುಕೊಂಡು ಅಧಿವೇಶನದಲ್ಲಿ ಸರ್ಕಾರವನ್ನ ಕಟ್ಟಿ ಹಾಕುವ ತಂತ್ರವನ್ನು ಬಿಜೆಪಿ-ಜೆಡಿಎಸ್ ಮಾಡಿವೆ.

ಇದನ್ನೂ ಓದಿ: ಕೇಂದ್ರ ಜಾರಿಗೆ ತಂದಿರುವ ಹೊಸ ಕಾನೂನುಗಳಿಗೆ ತಿದ್ದುಪಡಿ ತರಲು ಸಿದ್ದರಾಮಯ್ಯ ಸರ್ಕಾರ ಚಿಂತನೆ 

ಮತ್ತೊಂದೆಡೆ ಆಡಳಿತರೂಢ  ಕಾಂಗ್ರೆಸ್ ಸರ್ಕಾರ, ವಿಪಕ್ಷಗಳ ಆರೋಪ, ಪ್ರಶ್ನೆಗಳನ್ನು ಹೇಗೆ ಎದುರಿಸುತ್ತದೆ ಎನ್ನುವುದನ್ನು ಕಾದುನೋಡಬೇಕಿದೆ. ಒಟ್ಟಿನಲ್ಲಿ ಮುಂಗಾರು ಅಧಿವೇಶನ ಭಾರೀ ಕೋಲಾಹಲಕ್ಕೆ ಕಾರಣವಾಗುವುದಂತೂ ಸತ್ಯ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬೆಂಗಳೂರು ಲ್ಯಾಂಬೋರ್ಗಿನಿ ಕಾರಿನ ಕಳ್ಳಾಟದ ರಹಸ್ಯ ಬಿಚ್ಚಿಟ್ಟ RTO
ಬೆಂಗಳೂರು ಲ್ಯಾಂಬೋರ್ಗಿನಿ ಕಾರಿನ ಕಳ್ಳಾಟದ ರಹಸ್ಯ ಬಿಚ್ಚಿಟ್ಟ RTO
ಈಗ ನನಗೆ ಜ್ಞಾನೋದಯವಾಗಿದೆ, ಇನ್ಮೇಲೆ ನಾನು ಕೊಡೋದೆ ಬೇರೆ: ಆರ್ ಚಂದ್ರು
ಈಗ ನನಗೆ ಜ್ಞಾನೋದಯವಾಗಿದೆ, ಇನ್ಮೇಲೆ ನಾನು ಕೊಡೋದೆ ಬೇರೆ: ಆರ್ ಚಂದ್ರು
ಭಾರತಕ್ಕೆ ಬಂದ ಯುವ ಚಾಂಪಿಯನ್ಸ್​ಗೆ ಅದ್ಧೂರಿ ಸ್ವಾಗತ
ಭಾರತಕ್ಕೆ ಬಂದ ಯುವ ಚಾಂಪಿಯನ್ಸ್​ಗೆ ಅದ್ಧೂರಿ ಸ್ವಾಗತ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ