Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ನೈತಿಕ ಪೊಲೀಸ್​ಗಿರಿ: ಮುಸ್ಲಿಂ ಮಹಿಳೆಯನ್ನು ಬೈಕ್​ನಲ್ಲಿ ಕರೆದೊಯ್ಯುತ್ತಿದ್ದ ಯುವಕನಿಗೆ ಬೆದರಿಕೆ

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ಶಿವಾರಪಟ್ಟಣದ ವಿಷ್ಣು ಎಂಬ ಯುವಕ ಅದೇ ಗ್ರಾಮದ ಸಮೀನಾ ತಾಜ್ ಎಂಬ ಮಹಿಳೆಯನ್ನು ಬೈಕ್​ನಲ್ಲಿ ಕೆರದುಕೊಂಡು ಹೋಗುತ್ತಿದ್ದರು. ಈ ವೇಳೆ ಆತನನ್ನು ಹಿಂಬಾಲಿಸಿದ ಮುಸ್ಲಿಂ ಯುವಕರ ತಂಡ ವಿಷ್ಣು ಹಾಗೂ ಮಹಿಳೆ ಸಮೀನಾ ತಾಜ್​ರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿ ವಿಡಿಯೋ ಮಾಡಿದ್ದಾರೆ.

ಕೋಲಾರದಲ್ಲಿ ನೈತಿಕ ಪೊಲೀಸ್​ಗಿರಿ: ಮುಸ್ಲಿಂ ಮಹಿಳೆಯನ್ನು ಬೈಕ್​ನಲ್ಲಿ ಕರೆದೊಯ್ಯುತ್ತಿದ್ದ ಯುವಕನಿಗೆ ಬೆದರಿಕೆ
ಕೋಲಾರದಲ್ಲಿ ನೈತಿಕ ಪೊಲೀಸ್​ಗಿರಿ: ಮುಸ್ಲಿಂ ಮಹಿಳೆಯನ್ನು ಬೈಕ್​ನಲ್ಲಿ ಕರೆದೊಯ್ಯುತ್ತಿದ್ದ ಯುವಕನಿಗೆ ಬೆದರಿಕೆ
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಗಂಗಾಧರ​ ಬ. ಸಾಬೋಜಿ

Updated on: Aug 26, 2024 | 8:21 PM

ಕೋಲಾರ, ಆಗಸ್ಟ್​​ 26: ಮುಸ್ಲಿಂ ಮಹಿಳೆಯನ್ನು ಬೈಕ್​ನಲ್ಲಿ ಕೆರದುಕೊಂಡು ಹೋಗುತ್ತಿದ್ದ ಹಿಂದೂ ಯುವಕನನ್ನು ಅಡ್ಡಗಟ್ಟಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ (moral policing) ನಡೆಸಿದ್ದಾರೆ. ನಗರದ ಅಂತರಗಂಗೆ ರಸ್ತೆಯಲ್ಲಿ ನಿನ್ನೆ ಘಟನೆ ನಡೆದಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ.  ಮಹಿಳೆ ಹಾಗೂ ಆಕೆಯ ಮಗುವನ್ನು ಬೈಕ್‌ನಲ್ಲಿ ಕೆರದುಕೊಂಡು ಹೋಗುತ್ತಿದ್ದ ಯುವಕನ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಯುವಕನಿಂದ ಬೆದರಿಕೆ ಹಾಕಿರುವ ಕುರಿತು ದೂರು ಪಡೆದಿದ್ದಾರೆ.

ಜಿಲ್ಲೆಯ ಮಾಲೂರು ತಾಲ್ಲೂಕು ಶಿವಾರಪಟ್ಟಣದ ವಿಷ್ಣು ಎಂಬ ಯುವಕ ಅದೇ ಗ್ರಾಮದ ಸಮೀನಾ ತಾಜ್ ಎಂಬ ಮಹಿಳೆಯನ್ನು ಬೈಕ್​ನಲ್ಲಿ ಕೆರದುಕೊಂಡು ಹೋಗುತ್ತಿದ್ದರು. ಈ ವೇಳೆ ಆತನನ್ನು ಹಿಂಬಾಲಿಸಿದ ಮುಸ್ಲಿಂ ಯುವಕರ ತಂಡ ವಿಷ್ಣು ಹಾಗೂ ಮಹಿಳೆ ಸಮೀನಾ ತಾಜ್​ರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಮಾಡಿ ವೈರಲ್ ಮಾಡಿರುವ ಯುವಕರ ವಿರುದ್ದ ಕೋಲಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

ನೈತಿಕ ಪೊಲೀಸ್​ ಗಿರಿ: ಯುವಕನಿಗೆ ಮನ ಬಂದಂತೆ ಥಳಿತ

ದಾವಣಗೆರೆ: ಇತ್ತೀಚೆಗೆ ನಗರದಲ್ಲಿ ಏಳು ಜನ ಸೇರಿ ಯುವಕನ ಮೇಲೆ ಹಲ್ಲೆ ಮಾಡುವ ಮೂಲಕ ನೈತಿಕ ಪೊಲೀಸ್ ಗಿರಿ ಮೆರೆದಿದ್ದರು. ಮೇ 31 ರಂದು ಜಿಲ್ಲೆಯ ಹರಿಹರ ನಗರದ ಬೆಂಕಿನಗರದ ಮದರಸಾ ಬಳಿ ಖಾಲಿ‌ಕೊಠಡಿಯಲ್ಲಿ ಹಲ್ಲೆ ಮಾಡಲಾಗಿತ್ತು. ಹಲ್ಲೆಗೆ ಸಂಬಂಧಿಸಿ ನಾಲ್ವರನ್ನ ಹರಿಹರ ಪೊಲೀಸರು ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ: ಬೀದರ್​: ನೈತಿಕ ಪೊಲೀಸ್​ಗಿರಿ ಪ್ರಕರಣ; ಮೂವರು ಯುವಕರ ಬಂಧನ

ಹರಿಹರದ ಕಾಳಿದಾಸ ನಗರದ ನಿವಾಸಿ ಮೊಹಮ್ಮದ್ ಅಲಿ (26) ಹಲ್ಲೆಗೊಳಗಾದ ಯುವಕ. ಇಲ್ಲಿ ಹಲ್ಲೆ ಮಾಡಿದರು ಹಾಗೂ ಹಲ್ಲೆಗೆ ಒಳಗಾದವರು ಒಂದು ಧರ್ಮಕ್ಕೆ ಸೇರಿದ ಯುವಕ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಮಾಹಿತಿ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್
ಘಟನೆ ವಿವರಿಸಿದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು
ಘಟನೆ ವಿವರಿಸಿದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು