ಕೋಲಾರದಲ್ಲಿ ನೈತಿಕ ಪೊಲೀಸ್​ಗಿರಿ: ಮುಸ್ಲಿಂ ಮಹಿಳೆಯನ್ನು ಬೈಕ್​ನಲ್ಲಿ ಕರೆದೊಯ್ಯುತ್ತಿದ್ದ ಯುವಕನಿಗೆ ಬೆದರಿಕೆ

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ಶಿವಾರಪಟ್ಟಣದ ವಿಷ್ಣು ಎಂಬ ಯುವಕ ಅದೇ ಗ್ರಾಮದ ಸಮೀನಾ ತಾಜ್ ಎಂಬ ಮಹಿಳೆಯನ್ನು ಬೈಕ್​ನಲ್ಲಿ ಕೆರದುಕೊಂಡು ಹೋಗುತ್ತಿದ್ದರು. ಈ ವೇಳೆ ಆತನನ್ನು ಹಿಂಬಾಲಿಸಿದ ಮುಸ್ಲಿಂ ಯುವಕರ ತಂಡ ವಿಷ್ಣು ಹಾಗೂ ಮಹಿಳೆ ಸಮೀನಾ ತಾಜ್​ರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿ ವಿಡಿಯೋ ಮಾಡಿದ್ದಾರೆ.

ಕೋಲಾರದಲ್ಲಿ ನೈತಿಕ ಪೊಲೀಸ್​ಗಿರಿ: ಮುಸ್ಲಿಂ ಮಹಿಳೆಯನ್ನು ಬೈಕ್​ನಲ್ಲಿ ಕರೆದೊಯ್ಯುತ್ತಿದ್ದ ಯುವಕನಿಗೆ ಬೆದರಿಕೆ
ಕೋಲಾರದಲ್ಲಿ ನೈತಿಕ ಪೊಲೀಸ್​ಗಿರಿ: ಮುಸ್ಲಿಂ ಮಹಿಳೆಯನ್ನು ಬೈಕ್​ನಲ್ಲಿ ಕರೆದೊಯ್ಯುತ್ತಿದ್ದ ಯುವಕನಿಗೆ ಬೆದರಿಕೆ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Aug 26, 2024 | 8:21 PM

ಕೋಲಾರ, ಆಗಸ್ಟ್​​ 26: ಮುಸ್ಲಿಂ ಮಹಿಳೆಯನ್ನು ಬೈಕ್​ನಲ್ಲಿ ಕೆರದುಕೊಂಡು ಹೋಗುತ್ತಿದ್ದ ಹಿಂದೂ ಯುವಕನನ್ನು ಅಡ್ಡಗಟ್ಟಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ (moral policing) ನಡೆಸಿದ್ದಾರೆ. ನಗರದ ಅಂತರಗಂಗೆ ರಸ್ತೆಯಲ್ಲಿ ನಿನ್ನೆ ಘಟನೆ ನಡೆದಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ.  ಮಹಿಳೆ ಹಾಗೂ ಆಕೆಯ ಮಗುವನ್ನು ಬೈಕ್‌ನಲ್ಲಿ ಕೆರದುಕೊಂಡು ಹೋಗುತ್ತಿದ್ದ ಯುವಕನ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಯುವಕನಿಂದ ಬೆದರಿಕೆ ಹಾಕಿರುವ ಕುರಿತು ದೂರು ಪಡೆದಿದ್ದಾರೆ.

ಜಿಲ್ಲೆಯ ಮಾಲೂರು ತಾಲ್ಲೂಕು ಶಿವಾರಪಟ್ಟಣದ ವಿಷ್ಣು ಎಂಬ ಯುವಕ ಅದೇ ಗ್ರಾಮದ ಸಮೀನಾ ತಾಜ್ ಎಂಬ ಮಹಿಳೆಯನ್ನು ಬೈಕ್​ನಲ್ಲಿ ಕೆರದುಕೊಂಡು ಹೋಗುತ್ತಿದ್ದರು. ಈ ವೇಳೆ ಆತನನ್ನು ಹಿಂಬಾಲಿಸಿದ ಮುಸ್ಲಿಂ ಯುವಕರ ತಂಡ ವಿಷ್ಣು ಹಾಗೂ ಮಹಿಳೆ ಸಮೀನಾ ತಾಜ್​ರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಮಾಡಿ ವೈರಲ್ ಮಾಡಿರುವ ಯುವಕರ ವಿರುದ್ದ ಕೋಲಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

ನೈತಿಕ ಪೊಲೀಸ್​ ಗಿರಿ: ಯುವಕನಿಗೆ ಮನ ಬಂದಂತೆ ಥಳಿತ

ದಾವಣಗೆರೆ: ಇತ್ತೀಚೆಗೆ ನಗರದಲ್ಲಿ ಏಳು ಜನ ಸೇರಿ ಯುವಕನ ಮೇಲೆ ಹಲ್ಲೆ ಮಾಡುವ ಮೂಲಕ ನೈತಿಕ ಪೊಲೀಸ್ ಗಿರಿ ಮೆರೆದಿದ್ದರು. ಮೇ 31 ರಂದು ಜಿಲ್ಲೆಯ ಹರಿಹರ ನಗರದ ಬೆಂಕಿನಗರದ ಮದರಸಾ ಬಳಿ ಖಾಲಿ‌ಕೊಠಡಿಯಲ್ಲಿ ಹಲ್ಲೆ ಮಾಡಲಾಗಿತ್ತು. ಹಲ್ಲೆಗೆ ಸಂಬಂಧಿಸಿ ನಾಲ್ವರನ್ನ ಹರಿಹರ ಪೊಲೀಸರು ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ: ಬೀದರ್​: ನೈತಿಕ ಪೊಲೀಸ್​ಗಿರಿ ಪ್ರಕರಣ; ಮೂವರು ಯುವಕರ ಬಂಧನ

ಹರಿಹರದ ಕಾಳಿದಾಸ ನಗರದ ನಿವಾಸಿ ಮೊಹಮ್ಮದ್ ಅಲಿ (26) ಹಲ್ಲೆಗೊಳಗಾದ ಯುವಕ. ಇಲ್ಲಿ ಹಲ್ಲೆ ಮಾಡಿದರು ಹಾಗೂ ಹಲ್ಲೆಗೆ ಒಳಗಾದವರು ಒಂದು ಧರ್ಮಕ್ಕೆ ಸೇರಿದ ಯುವಕ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಮಾಹಿತಿ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!