Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿಗೆ ಕಾಲಿಟ್ಟ ನೈತಿಕ್​ ಪೊಲೀಸ್​​​ಗಿರಿ: ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಬಜರಂಗದಳ ಮುಖಂಡರು

ಅನ್ಯಕೋಮಿನ ಯುವತಿಯನ್ನು ಪ್ರೀತಿಸಿದ್ದಕ್ಕೆ ಬಜರಂಗದಳ ಮುಖಂಡರು ಯುವಕನಿಗೆ ಮನಬಂದಂತೆ ಹಿಗ್ಗಾಮುಗ್ಗಾ ಥಳಿಸಿರುವಂತಹ ಘಟನೆ ನಗರದಲ್ಲಿ ಕಳೆದ ಎರಡು ದಿನಗಳ ಹಿಂದೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆ ಮೂಲಕ ಕರಾವಳಿ ಬಳಿಕ ಇದೀಗ ಯಾದಗಿರಿಯಲ್ಲೂ ನೈತಿಕ್​ ಪೊಲೀಸ್​​​ಗಿರಿ ಶುರುವಾಗಿದೆ. ಸದ್ಯ ನಗರ ಠಾಣೆಯಲ್ಲಿ 9 ಜನರ ವಿರುದ್ಧ ದೂರು ದಾಖಲಾಗಿದೆ.

ಯಾದಗಿರಿಗೆ ಕಾಲಿಟ್ಟ ನೈತಿಕ್​ ಪೊಲೀಸ್​​​ಗಿರಿ: ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಬಜರಂಗದಳ ಮುಖಂಡರು
ಪ್ರಾತಿನಿಧಿಕ ಚಿತ್ರ
Follow us
ಅಮೀನ್​ ಸಾಬ್​
| Updated By: ಗಂಗಾಧರ​ ಬ. ಸಾಬೋಜಿ

Updated on: Mar 20, 2024 | 11:28 AM

ಯಾದಗಿರಿ, ಮಾರ್ಚ್​ 20: ಕರಾವಳಿ ಬಳಿಕ ಇದೀಗ ಯಾದಗಿರಿಯಲ್ಲೂ ನೈತಿಕ್​ ಪೊಲೀಸ್​​​ಗಿರಿ (Moral Policing)  ಶುರುವಾಗಿದೆ. ಅನ್ಯಕೋಮಿನ ಯುವತಿಯನ್ನು ಪ್ರೀತಿಸಿದ್ದಕ್ಕೆ ಬಜರಂಗದಳ ಮುಖಂಡರು ಯುವಕನಿಗೆ ಮನಬಂದಂತೆ ಹಿಗ್ಗಾಮುಗ್ಗಾ ಥಳಿಸಿರುವಂತಹ ಘಟನೆ ನಗರದಲ್ಲಿ ಕಳೆದ ಎರಡು ದಿನಗಳ ಹಿಂದೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶಿವಕುಮಾರ್, ತಾಯಪ್ಪ, ಮಲ್ಲು, ಅಂಬರೀಶ್ ಸೇರಿ 9 ಜನರಿಂದ ಹಲ್ಲೆ ಮಾಡಲಾಗಿದ್ದು, ನಗರ ಠಾಣೆಯಲ್ಲಿ 9 ಜನರ ವಿರುದ್ಧ ಐಪಿಸಿ ಸೆಕ್ಷನ್ 143, 147, 148, 307, 323, 341, 342, 363, 504 ಹಾಗೂ 506ರ ಅಡಿ ಪ್ರಕರಣ ದಾಖಲಾಗಿದೆ. ಇತ್ತ ಕೇಸ್ ದಾಖಲಾಗುತ್ತಿದ್ದಂತೆ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ನಡೆದಿದ್ದೇನು?

ಕಾಲೇಜಿನಿಂದ ಮನೆಗೆ ಬರುತ್ತಿದ್ದ ವೇಳೆ ನಗರದ ಗೋಗಿ ಮೊಹಲ್ಲಾ ನಿವಾಸಿ ವಾಹಿದ್​​ ಎಂಬಾತನನ್ನು ಅಪಹರಿಸಲಾಗಿದೆ. 5 ಗಂಟೆ ಕಾಲ ಕೋಣೆಯಲ್ಲಿ ಕೂಡಿ ಹಾಕಿ ವಾಹಿದ್ ಮೇಲೆ ಹಲ್ಲೆ ಮಾಡಿದ್ದಾರೆ. ಬೆನ್ನಿಗೆ ಬಾಸುಂಡೆ ಬರುವ ಹಾಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ.

ಇದನ್ನೂ ಓದಿ: ಹಾವೇರಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್; ಗ್ಯಾಂಗ್ ರೇಪ್ ಆರೋಪ

ಹೊಟ್ಟೆಗೆ ಚಾಕು ಹಾಕಿ ಕೊಲೆ ಮಾಡಲು ಗ್ಯಾಂಗ್​​ ಯತ್ನಿಸಿದ್ದು, ತಪ್ಪಾಗಿದೆ ಅಂತ ಕಾಲಿಗೆ ಬಿದ್ದು ಯುವಕ ಜೀವ ಉಳಿಸಿಕೊಂಡು ಬಂದಿದ್ದಾನೆ. ಯುವತಿಗೆ ಹಾಗೂ ಹಲ್ಲೆ ಮಾಡಿದ ಗ್ಯಾಂಗ್​​ಗೆ ಯಾವುದೇ ಸಂಬಂಧವಿಲ್ಲ.

ಚಿಕ್ಕಬಳ್ಳಾಪುರದಲ್ಲಿ ಎರಡನೇ ಬಾರಿ ನಡೆದ ನೈತಿಕ ಪೊಲೀಸ್ ಗಿರಿ

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದ ವಿವೇಕನಂದ ಕಾಲೇಜಿನಲ್ಲಿ ವ್ಯಾಸಂಗ ಮಾಡುತಿದ್ದ ಅನ್ಯಕೋಮಿನ ಯುವಕ ಹಾಗೂ ಯುವತಿ ಚಿಂತಾಮಣಿ ನಗರದ ಮೆಹಬೂಬ್ ನಗರದಲ್ಲಿ ತಿರುಗಾಡುತಿದ್ದ ವೇಳೆ ಅನ್ಯಕೋಮಿನ ಯುವಕರು, ಅವರಿಬ್ಬರನ್ನು ರಸ್ತೆಯಲ್ಲಿ ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ಪ್ರದರ್ಶನ ತೋರಿ ದೌರ್ಜನ್ಯ ಎಸಗಿದ್ದ ಘಟನೆ ಚಿಂತಾಮಣಿ ನಗರದ ಮೆಹಬೂಬ್ ನಗರದಲ್ಲಿ ಇತ್ತೀಚೆಗೆ ನಡೆದಿತ್ತು.

ಇದನ್ನೂ ಓದಿ: ಮಂಗಳೂರಿನಲ್ಲಿ ಮುಂದುವರೆದ ನೈತಿಕ ಪೊಲೀಸ್​ಗಿರಿ: ಅನ್ಯ ಕೋಮಿನ ಯುವತಿಯೊಂದಿಗೆ ತಿರುಗಾಡುತ್ತಿದ್ದ ಯುವಕನಿಗೆ ಥಳಿತ

ನಾವಿಬ್ಬರು ಸ್ನೇಹಿತರು ಎಂದು ಅಂಗಲಾಚಿ ಬೇಡಿಕೊಂಡರೂ ಬಿಡದೆ ಅನ್ಯಕೋಮಿನ ಯುವಕರ ಗುಂಪು, ಯುವಕ -ಯುವತಿ ಮೇಲೆ ದಾಂದಲೆ ನಡೆಸಿ ಹಲ್ಲೆಗೆ ಯತ್ನಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು