AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಲ್ಲಿ ಪ್ರೇಮಿಗಳ ಮೇಲೆ ನೈತಿಕ ಪೊಲೀಸ್​ಗಿರಿ: ಸ್ಥಳೀಯ ಯುವಕರಿಂದ ಹಲ್ಲೆ, ಅನುಚಿತ ವರ್ತನೆ ಆರೋಪ

ಪ್ರೇಮಿಗಳ ಮೇಲೆ ಸ್ಥಳೀಯ ನಾಲ್ವರು ಯುವಕರಿಂದ ಅನುಚಿತ ವರ್ತನೆ ಮತ್ತು ಇಬ್ಬರು ಯುವಕರ ಮೇಲೆ ಹಲ್ಲೆ ಮಾಡುವ ಮೂಲಕ ನೈತಿಕ ಪೊಲೀಸ್​ಗಿರಿ ಮೆರೆದಿರುವಂತಹ ಘಟನೆ ಶಿವಮೊಗ್ಗ ತಾಲೂಕಿನ ತುಂಗಾ ಜಲಾಶಯ ಬಳಿ ನಿನ್ನೆ ನಡೆದಿದೆ. ಯುವತಿ ಕಿಡ್ನ್ಯಾಪ್​ ಬಗ್ಗೆ ಪ್ರಿಯಕರ ಹಾಗೂ ಸ್ನೇಹಿತನಿಂದ ಪೊಲೀಸರಿಗೆ ದೂರು ನೀಡಲಾಗಿದೆ.

ಶಿವಮೊಗ್ಗದಲ್ಲಿ ಪ್ರೇಮಿಗಳ ಮೇಲೆ ನೈತಿಕ ಪೊಲೀಸ್​ಗಿರಿ: ಸ್ಥಳೀಯ ಯುವಕರಿಂದ ಹಲ್ಲೆ, ಅನುಚಿತ ವರ್ತನೆ ಆರೋಪ
ಶಿವಮೊಗ್ಗದಲ್ಲಿ ಪ್ರೇಮಿಗಳ ಮೇಲೆ ನೈತಿಕ ಪೊಲೀಸ್​ಗಿರಿ: ಸ್ಥಳೀಯ ಯುವಕರಿಂದ ಹಲ್ಲೆ, ಅನುಚಿತ ವರ್ತನೆ ಆರೋಪ
Basavaraj Yaraganavi
| Edited By: |

Updated on: Jul 03, 2024 | 3:06 PM

Share

ಶಿವಮೊಗ್ಗ, ಜೂನ್​​ 03: ತುಂಗಾ ಜಲಾಶಯ ವೀಕ್ಷಣೆಗೆ ತೆರಳಿದ್ದ ಪ್ರೇಮಿಗಳ (lovers) ಮೇಲೆ ನೈತಿಕ ಪೊಲೀಸ್​ಗಿರಿ (Moral Policing) ನಡೆದಿರುವಂತಹ ಘಟನೆ ಶಿವಮೊಗ್ಗ ತಾಲೂಕಿನ ತುಂಗಾ ಜಲಾಶಯ ಬಳಿ ನಡೆದಿದೆ. ನಿನ್ನೆ ತುಂಗಾ ಜಲಾಶಯದ ವೀಕ್ಷಣೆಗೆ ಪ್ರೇಮಿಗಳು ತೆರಳಿದ್ದರು. ಜೊತೆಗೆ ಅವರೊಟ್ಟಿಗೆ ಪ್ರಿಯಕರನ ಸ್ನೇಹಿತ ತೆರಳಿದ್ದ. ಈ ವೇಳೆ ಸ್ಥಳೀಯ ನಾಲ್ವರು ಯುವಕರಿಂದ ಅನುಚಿತ ವರ್ತನೆ ಮತ್ತು ಇಬ್ಬರು ಯುವಕರ ಮೇಲೆ ಹಲ್ಲೆ ಆರೋಪ ಮಾಡಿದ್ದಾರೆ.

ಹಲ್ಲೆ ಮಾಡುತ್ತಿದ್ದಂತೆ ಪ್ರಿಯಕರ ಹಾಗೂ ಆತನ ಸ್ನೇಹಿತ ಸ್ಥಳದಿಂದ ಓಡಿಹೋಗಿದ್ದಾರೆ. ಯುವತಿಯನ್ನು ಮಾತ್ರ ಸ್ಥಳೀಯ ಯುವಕರು ಸ್ಥಳದಲ್ಲೇ ಇರಿಸಿಕೊಂಡಿದ್ದಾರೆ. ಯುವತಿ ಕಿಡ್ನ್ಯಾಪ್​ ಬಗ್ಗೆ ಪ್ರಿಯಕರ ಹಾಗೂ ಸ್ನೇಹಿತನಿಂದ ದೂರು ನೀಡಲಾಗಿದೆ.

ಇದನ್ನೂ ಓದಿ: ಬೀದರ್​: ನೈತಿಕ ಪೊಲೀಸ್​ಗಿರಿ ಪ್ರಕರಣ; ಮೂವರು ಯುವಕರ ಬಂಧನ

ದೂರು ಮೇರೆಗೆ ಸ್ಥಳಕ್ಕೆ ತೆರಳಿದ್ದ ತುಂಗಾನಗರ ಠಾಣೆ ಪೊಲೀಸರು ಯುವತಿ, ಸ್ಥಳೀಯ ಯುವಕರನ್ನು ಠಾಣೆಗೆ ಕರೆತಂದಿದ್ದು, ಯುವತಿ ಹಾಗೂ ಯುವಕರ ವಿಚಾರಣೆ ಮಾಡಿದ್ದಾರೆ.

ದಾವಣಗೆರೆಯಲ್ಲಿ ನೈತಿಕ ಪೊಲೀಸ್ ಗಿರಿ: ಯುವಕನನ್ನು ರೂಮ್​ನಲ್ಲಿ ಕೂಡಿಹಾಕಿ ಹಲ್ಲೆ

ಇನ್ನು ಇತ್ತೀಚೆಗೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿತ್ತು. ಯುವಕನೊಬ್ಬನನ್ನ ರೂಮ್​ನಲ್ಲಿ ಹಾಕಿ ಹಲ್ಲೆಎಂಟತ್ತು ಜನರಿಂದ ಯುವಕನ ಮೇಲೆ ಹಲ್ಲೆ ಮಾಡಲಾಗಿತ್ತು. ಯುವಕ ಪರಿ ಪರಿಯಾಗಿ ಬೇಡಿಕೊಂಡರು ಬಿಡದೇ ಹಲ್ಲೆ ಮಾಡಿ ನೈತಿಕ ಪೊಲೀಸ್ ಗಿರಿ ಮೆರೆಯಲಾಗಿತ್ತು.

ಇದನ್ನೂ ಓದಿ: ಬೆಳಗಾವಿಯಲ್ಲಿ ಹಿಂದೂ ಕಾರ್ಯಕರ್ತರಿಂದ ನೈತಿಕ ಪೊಲೀಸ್​ಗಿರಿ: ಅಕ್ರಮವಾಗಿ ಗೋವು ಸಾಗಾಟ ಮಾಡ್ತಿದ್ದ ಚಾಲಕನಿಗೆ ಥಳಿತ

ಘಟನೆಯ ವಿಡಿಯೋಗಳು ಸಾಮಾಜಿಕ ಜಾಲ ತಾಣದಲ್ಲಿ ವೈರಲ್  ಆದ ವಿಡಿಯೋದಲ್ಲಿ ಹಲ್ಲೆ ಮಾಡಿದವರು ಹಾಗೂ ಹಲ್ಲೆಗೊಳಗಾದ ಯುವಕ ಒಂದೇ ಕೋಮಿಗೆ ಸೇರಿದವರು. ಹಲ್ಲೆ ಮಾಡಿ ನಂತರ ತಲೆ ಬೊಳಿಸಿ ಹಿಂಸೆ ನೀಡಿದ ಮತ್ತೊಂದು ವಿಡಿಯೋ ಕೂಡ ವೈರಲ್ ಆಗಿತ್ತು. ಹಲ್ಲೆಗೆ ನಿಖರ ಕಾರಣ ಮಾತ್ರ ತಿಳಿದುಬಂದಿಲ್ಲ.

ಘಟನೆ ಬಗ್ಗೆ ‌ಹಲ್ಲೆಗೊಳಗಾದ ಯುವಕ ಪೊಲೀಸರಿಗೆ ಅಧಿಕೃತ ದೂರು ನೀಡಿದ್ದ. ಹಲ್ಲೆ ಮಾಡುವಾಗ ಐದಾರು ಜನ ತಮ್ಮ ಮೊಬೈಲ್​ನಲ್ಲಿ ಯುವಕನ ವಿಡಿಯೋ ಮಾಡಿದ್ದಾರೆ. ಪ್ರಕರಣದ ಪತ್ತೆಗೆ ಹರಿಹರ ಪೊಲೀಸರು ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!