ಶಿವಮೊಗ್ಗದಲ್ಲಿ ಪ್ರೇಮಿಗಳ ಮೇಲೆ ನೈತಿಕ ಪೊಲೀಸ್​ಗಿರಿ: ಸ್ಥಳೀಯ ಯುವಕರಿಂದ ಹಲ್ಲೆ, ಅನುಚಿತ ವರ್ತನೆ ಆರೋಪ

ಪ್ರೇಮಿಗಳ ಮೇಲೆ ಸ್ಥಳೀಯ ನಾಲ್ವರು ಯುವಕರಿಂದ ಅನುಚಿತ ವರ್ತನೆ ಮತ್ತು ಇಬ್ಬರು ಯುವಕರ ಮೇಲೆ ಹಲ್ಲೆ ಮಾಡುವ ಮೂಲಕ ನೈತಿಕ ಪೊಲೀಸ್​ಗಿರಿ ಮೆರೆದಿರುವಂತಹ ಘಟನೆ ಶಿವಮೊಗ್ಗ ತಾಲೂಕಿನ ತುಂಗಾ ಜಲಾಶಯ ಬಳಿ ನಿನ್ನೆ ನಡೆದಿದೆ. ಯುವತಿ ಕಿಡ್ನ್ಯಾಪ್​ ಬಗ್ಗೆ ಪ್ರಿಯಕರ ಹಾಗೂ ಸ್ನೇಹಿತನಿಂದ ಪೊಲೀಸರಿಗೆ ದೂರು ನೀಡಲಾಗಿದೆ.

ಶಿವಮೊಗ್ಗದಲ್ಲಿ ಪ್ರೇಮಿಗಳ ಮೇಲೆ ನೈತಿಕ ಪೊಲೀಸ್​ಗಿರಿ: ಸ್ಥಳೀಯ ಯುವಕರಿಂದ ಹಲ್ಲೆ, ಅನುಚಿತ ವರ್ತನೆ ಆರೋಪ
ಶಿವಮೊಗ್ಗದಲ್ಲಿ ಪ್ರೇಮಿಗಳ ಮೇಲೆ ನೈತಿಕ ಪೊಲೀಸ್​ಗಿರಿ: ಸ್ಥಳೀಯ ಯುವಕರಿಂದ ಹಲ್ಲೆ, ಅನುಚಿತ ವರ್ತನೆ ಆರೋಪ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jul 03, 2024 | 3:06 PM

ಶಿವಮೊಗ್ಗ, ಜೂನ್​​ 03: ತುಂಗಾ ಜಲಾಶಯ ವೀಕ್ಷಣೆಗೆ ತೆರಳಿದ್ದ ಪ್ರೇಮಿಗಳ (lovers) ಮೇಲೆ ನೈತಿಕ ಪೊಲೀಸ್​ಗಿರಿ (Moral Policing) ನಡೆದಿರುವಂತಹ ಘಟನೆ ಶಿವಮೊಗ್ಗ ತಾಲೂಕಿನ ತುಂಗಾ ಜಲಾಶಯ ಬಳಿ ನಡೆದಿದೆ. ನಿನ್ನೆ ತುಂಗಾ ಜಲಾಶಯದ ವೀಕ್ಷಣೆಗೆ ಪ್ರೇಮಿಗಳು ತೆರಳಿದ್ದರು. ಜೊತೆಗೆ ಅವರೊಟ್ಟಿಗೆ ಪ್ರಿಯಕರನ ಸ್ನೇಹಿತ ತೆರಳಿದ್ದ. ಈ ವೇಳೆ ಸ್ಥಳೀಯ ನಾಲ್ವರು ಯುವಕರಿಂದ ಅನುಚಿತ ವರ್ತನೆ ಮತ್ತು ಇಬ್ಬರು ಯುವಕರ ಮೇಲೆ ಹಲ್ಲೆ ಆರೋಪ ಮಾಡಿದ್ದಾರೆ.

ಹಲ್ಲೆ ಮಾಡುತ್ತಿದ್ದಂತೆ ಪ್ರಿಯಕರ ಹಾಗೂ ಆತನ ಸ್ನೇಹಿತ ಸ್ಥಳದಿಂದ ಓಡಿಹೋಗಿದ್ದಾರೆ. ಯುವತಿಯನ್ನು ಮಾತ್ರ ಸ್ಥಳೀಯ ಯುವಕರು ಸ್ಥಳದಲ್ಲೇ ಇರಿಸಿಕೊಂಡಿದ್ದಾರೆ. ಯುವತಿ ಕಿಡ್ನ್ಯಾಪ್​ ಬಗ್ಗೆ ಪ್ರಿಯಕರ ಹಾಗೂ ಸ್ನೇಹಿತನಿಂದ ದೂರು ನೀಡಲಾಗಿದೆ.

ಇದನ್ನೂ ಓದಿ: ಬೀದರ್​: ನೈತಿಕ ಪೊಲೀಸ್​ಗಿರಿ ಪ್ರಕರಣ; ಮೂವರು ಯುವಕರ ಬಂಧನ

ದೂರು ಮೇರೆಗೆ ಸ್ಥಳಕ್ಕೆ ತೆರಳಿದ್ದ ತುಂಗಾನಗರ ಠಾಣೆ ಪೊಲೀಸರು ಯುವತಿ, ಸ್ಥಳೀಯ ಯುವಕರನ್ನು ಠಾಣೆಗೆ ಕರೆತಂದಿದ್ದು, ಯುವತಿ ಹಾಗೂ ಯುವಕರ ವಿಚಾರಣೆ ಮಾಡಿದ್ದಾರೆ.

ದಾವಣಗೆರೆಯಲ್ಲಿ ನೈತಿಕ ಪೊಲೀಸ್ ಗಿರಿ: ಯುವಕನನ್ನು ರೂಮ್​ನಲ್ಲಿ ಕೂಡಿಹಾಕಿ ಹಲ್ಲೆ

ಇನ್ನು ಇತ್ತೀಚೆಗೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿತ್ತು. ಯುವಕನೊಬ್ಬನನ್ನ ರೂಮ್​ನಲ್ಲಿ ಹಾಕಿ ಹಲ್ಲೆಎಂಟತ್ತು ಜನರಿಂದ ಯುವಕನ ಮೇಲೆ ಹಲ್ಲೆ ಮಾಡಲಾಗಿತ್ತು. ಯುವಕ ಪರಿ ಪರಿಯಾಗಿ ಬೇಡಿಕೊಂಡರು ಬಿಡದೇ ಹಲ್ಲೆ ಮಾಡಿ ನೈತಿಕ ಪೊಲೀಸ್ ಗಿರಿ ಮೆರೆಯಲಾಗಿತ್ತು.

ಇದನ್ನೂ ಓದಿ: ಬೆಳಗಾವಿಯಲ್ಲಿ ಹಿಂದೂ ಕಾರ್ಯಕರ್ತರಿಂದ ನೈತಿಕ ಪೊಲೀಸ್​ಗಿರಿ: ಅಕ್ರಮವಾಗಿ ಗೋವು ಸಾಗಾಟ ಮಾಡ್ತಿದ್ದ ಚಾಲಕನಿಗೆ ಥಳಿತ

ಘಟನೆಯ ವಿಡಿಯೋಗಳು ಸಾಮಾಜಿಕ ಜಾಲ ತಾಣದಲ್ಲಿ ವೈರಲ್  ಆದ ವಿಡಿಯೋದಲ್ಲಿ ಹಲ್ಲೆ ಮಾಡಿದವರು ಹಾಗೂ ಹಲ್ಲೆಗೊಳಗಾದ ಯುವಕ ಒಂದೇ ಕೋಮಿಗೆ ಸೇರಿದವರು. ಹಲ್ಲೆ ಮಾಡಿ ನಂತರ ತಲೆ ಬೊಳಿಸಿ ಹಿಂಸೆ ನೀಡಿದ ಮತ್ತೊಂದು ವಿಡಿಯೋ ಕೂಡ ವೈರಲ್ ಆಗಿತ್ತು. ಹಲ್ಲೆಗೆ ನಿಖರ ಕಾರಣ ಮಾತ್ರ ತಿಳಿದುಬಂದಿಲ್ಲ.

ಘಟನೆ ಬಗ್ಗೆ ‌ಹಲ್ಲೆಗೊಳಗಾದ ಯುವಕ ಪೊಲೀಸರಿಗೆ ಅಧಿಕೃತ ದೂರು ನೀಡಿದ್ದ. ಹಲ್ಲೆ ಮಾಡುವಾಗ ಐದಾರು ಜನ ತಮ್ಮ ಮೊಬೈಲ್​ನಲ್ಲಿ ಯುವಕನ ವಿಡಿಯೋ ಮಾಡಿದ್ದಾರೆ. ಪ್ರಕರಣದ ಪತ್ತೆಗೆ ಹರಿಹರ ಪೊಲೀಸರು ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?