AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳಿಗೆ ಬೆನ್ನು ಬಿಡದೆ ಕಾಡಿದ ವೈರಸ್: ಇಂದೂ ಕೊಪ್ಪಳ, ಮಣಿಪಾಲದಲ್ಲಿ ಮುಂದುವರಿದ ಕೊರೊನಾ ಅಟ್ಟಹಾಸ

ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾರ್ಭಟ ಮುಂದುವರಿದಿದೆ. ಜಿಲ್ಲೆಯ ಗಂಗಾವತಿ ಪಟ್ಟಣದ ಜಯನಗರದಲ್ಲಿರೋ ವಸತಿ ನಿಲಯವೊಂದರ ವಿದ್ಯಾರ್ಥಿಗಳಿಗೆ ವೈರಸ್​ ವಕ್ಕರಿಸಿದೆ. ವಸತಿ ನಿಲಯದ ಹತ್ತು ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ.

ವಿದ್ಯಾರ್ಥಿಗಳಿಗೆ ಬೆನ್ನು ಬಿಡದೆ ಕಾಡಿದ ವೈರಸ್: ಇಂದೂ ಕೊಪ್ಪಳ, ಮಣಿಪಾಲದಲ್ಲಿ ಮುಂದುವರಿದ ಕೊರೊನಾ ಅಟ್ಟಹಾಸ
ವಸತಿ ನಿಲಯದ ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ
KUSHAL V
|

Updated on:Mar 27, 2021 | 11:54 PM

Share

ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾರ್ಭಟ ಮುಂದುವರಿದಿದೆ. ಜಿಲ್ಲೆಯ ಗಂಗಾವತಿ ಪಟ್ಟಣದ ಜಯನಗರದಲ್ಲಿರೋ ವಸತಿ ನಿಲಯವೊಂದರ ವಿದ್ಯಾರ್ಥಿಗಳಿಗೆ ವೈರಸ್​ ವಕ್ಕರಿಸಿದೆ. ವಸತಿ ನಿಲಯದ ಹತ್ತು ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಸರ್ಕಾರಿ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಇದಾಗಿದೆ. ಸುಮಾರು 125 ವಿದ್ಯಾರ್ಥಿಗಳು ಇಲ್ಲಿ ವಾಸವಿದ್ದಾರೆ.

ಇದೀಗ, ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಲ್ಲಾ 125 ವಿದ್ಯಾರ್ಥಿಗಳಿಗೆ ಕೊವಿಡ್​ ಟೆಸ್ಟಿಂಗ್ ನಡೆಸಲಾಗಿದೆ. ಹತ್ತು ಜನರಿಗೆ ಪಾಸಿಟಿವ್ ಬಂದ ಬೆನ್ನಲ್ಲೇ ಎಲ್ಲರಿಗೂ ಟೆಸ್ಟಿಂಗ್ ಮಾಡಿಸಲಾಗಿದೆ. ಆದರೆ, ಈಗಾಗಲೇ ಸೋಂಕು ಕಾಣಿಸಿಕೊಂಡ ಮೂವರು ವಿದ್ಯಾರ್ಥಿಗಳು ಮನೆಗೆ ತೆರಳಿದ್ದಾರೆ ಎಂಬ ಮಾಹಿತಿ ಸಹ ಲಭ್ಯವಾಗಿದೆ. ಸದ್ಯ, ಉಳಿದವರನ್ನು ವಸತಿ ನಿಲಯದಲ್ಲಿ ಪ್ರತ್ಯೇಕವಾಗಿ ಕ್ವಾರಂಟೈನ್ ಮಾಡಲಾಗಿದೆ.

ಎಂಐಟಿ ಕ್ಯಾಂಪಸ್​ನಲ್ಲಿಂದು 136 ಜನರಿಗೆ ಕೊರೊನಾ ದೃಢ ಇತ್ತ, ಉಡುಪಿ ಜಿಲ್ಲೆಯಲ್ಲಿ ಇಂದು 156 ಜನರಿಗೆ ಕೊರೊನಾ ದೃಢವಾಗಿದೆ. ಅದರಲ್ಲೂ ಜಿಲ್ಲೆಯ ಪ್ರತಿಷ್ಠಿತ ಎಂಐಟಿ ಕಾಲೇಜು ಕ್ಯಾಂಪಸ್​ನಲ್ಲಿಂದು 136 ಜನರಿಗೆ ಕೊರೊನಾ ವಕ್ಕರಿಸಿದೆ. ಇದೀಗ, ಎಂಐಟಿ ಕ್ಯಾಂಪಸ್​ನಲ್ಲಿ ಸೋಂಕಿತರ ಸಂಖ್ಯೆ 842ಕ್ಕೆ ಏರಿದೆ.

ಇದನ್ನೂ ಓದಿ: ಹೆಚ್ಚುತ್ತಿರುವ ಸೋಂಕಿನ ಪ್ರಮಾಣವನ್ನು ತಗ್ಗಿಸಲು ಐದು ಹಂತದ ಕಾರ್ಯಯೋಜನೆ: ರಾಜೇಷ್ ಭೂಷಣ್

Published On - 11:52 pm, Sat, 27 March 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ