AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಗೆ ಕಂಟಕವಾದ ಕೊರೊನಾ, ಇಂದು ಮತ್ತಷ್ಟು ವಾರಿಯರ್ಸ್​ಗೆ ಸೋಂಕು

ಬೆಂಗಳೂರು: ಮಹಾಮಾರಿ ಕೊರೊನಾ ದೇಶಕ್ಕೆ ದೊಡ್ಡ ಕಂಟಕವನ್ನೇ ಸೃಷ್ಟಿಸಿದೆ. ಕೊವಿಡ್ ಹಿಮ್ಮೆಟ್ಟಿಸಲು ಪಣ ತೊಟ್ಟು ನಿಂತ ಕೊರೊನಾ ವಾರಿಯರ್ಸ್​ಗಳಲ್ಲಿ ಒಬ್ಬರಾದ ಪೊಲೀಸರಿಗೆ ಮಹಾಮಾರಿ ಬೆನ್ನು ಬಿಡದೆ ಕಾಡುತ್ತಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಪೊಲೀಸರ ದೇಹ ಹೊಕ್ಕುತ್ತಿದೆ. ಇಂದು ನಗರದಲ್ಲಿ ಮತ್ತೆ ಇಬ್ಬರು ಪೊಲೀಸರಿಗೆ ಸೋಂಕು ತಗುಲಿದೆ. ಹೆಚ್​ಎಎಲ್ ಪೊಲೀಸ್ ಠಾಣೆ ಹಾಗೂ ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್​ಗಳಿಗೆ ಕೊರೊನಾ ದೃಢಪಟ್ಟಿದೆ. ಹಾಗೂ ಬೆಳ್ಳಂದೂರು ಠಾಣೆಯ ಮಹಿಳಾ ಹೆಡ್ ಕಾನ್ಸ್‌ಟೇಬಲ್‌ಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. […]

ಪೊಲೀಸರಿಗೆ ಕಂಟಕವಾದ ಕೊರೊನಾ, ಇಂದು ಮತ್ತಷ್ಟು ವಾರಿಯರ್ಸ್​ಗೆ ಸೋಂಕು
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on:Jun 28, 2020 | 1:19 PM

Share

ಬೆಂಗಳೂರು: ಮಹಾಮಾರಿ ಕೊರೊನಾ ದೇಶಕ್ಕೆ ದೊಡ್ಡ ಕಂಟಕವನ್ನೇ ಸೃಷ್ಟಿಸಿದೆ. ಕೊವಿಡ್ ಹಿಮ್ಮೆಟ್ಟಿಸಲು ಪಣ ತೊಟ್ಟು ನಿಂತ ಕೊರೊನಾ ವಾರಿಯರ್ಸ್​ಗಳಲ್ಲಿ ಒಬ್ಬರಾದ ಪೊಲೀಸರಿಗೆ ಮಹಾಮಾರಿ ಬೆನ್ನು ಬಿಡದೆ ಕಾಡುತ್ತಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ಪೊಲೀಸರ ದೇಹ ಹೊಕ್ಕುತ್ತಿದೆ. ಇಂದು ನಗರದಲ್ಲಿ ಮತ್ತೆ ಇಬ್ಬರು ಪೊಲೀಸರಿಗೆ ಸೋಂಕು ತಗುಲಿದೆ. ಹೆಚ್​ಎಎಲ್ ಪೊಲೀಸ್ ಠಾಣೆ ಹಾಗೂ ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್​ಗಳಿಗೆ ಕೊರೊನಾ ದೃಢಪಟ್ಟಿದೆ. ಹಾಗೂ ಬೆಳ್ಳಂದೂರು ಠಾಣೆಯ ಮಹಿಳಾ ಹೆಡ್ ಕಾನ್ಸ್‌ಟೇಬಲ್‌ಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿರುವವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಪೊಲೀಸ್ ಠಾಣೆ ಸ್ಯಾನಿಟೈಸ್ ಮಾಡಲಾಗಿದೆ.

ಮೈಸೂರು, ಬೀದರ್​ನಲ್ಲೂ ಸಿಬ್ಬಂದಿಗೆ ಕೊರೊನಾ? ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ನಿವಾಸಿಯಾಗಿರುವ ಟಿ.ನರಸೀಪುರ ಪೊಲೀಸ್ ಠಾಣೆ ಸಿಬ್ಬಂದಿಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಪೊಲೀಸ್ ಠಾಣೆ ಸೀಲ್‌ಡೌನ್ ಮಾಡುವ ಸಾಧ್ಯತೆ ಇದೆ.

ಬೀದರ್‌ನ ಗಾಂಧಿಗಂಜ್ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್​ಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ಇವರು ಕಳೆದ 10 ದಿನಗಳಿಂದ ಕ್ವಾರಂಟೈನ್‌ನಲ್ಲಿದ್ದರು. ಇಂದು ವರದಿ ಪಾಸಿಟಿವ್ ಬಂದ್ರೆ ಪೊಲೀಸ್ ಠಾಣೆ ಸೀಲ್​ಡೌನ್ ಮಾಡುವ ಸಾಧ್ಯತೆ ಇದೆ.

Published On - 1:18 pm, Sun, 28 June 20

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ