AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಗೆ ಕಂಟಕವಾದ ಕೊರೊನಾ, ಇಂದು ಮತ್ತಷ್ಟು ವಾರಿಯರ್ಸ್​ಗೆ ಸೋಂಕು

ಬೆಂಗಳೂರು: ಮಹಾಮಾರಿ ಕೊರೊನಾ ದೇಶಕ್ಕೆ ದೊಡ್ಡ ಕಂಟಕವನ್ನೇ ಸೃಷ್ಟಿಸಿದೆ. ಕೊವಿಡ್ ಹಿಮ್ಮೆಟ್ಟಿಸಲು ಪಣ ತೊಟ್ಟು ನಿಂತ ಕೊರೊನಾ ವಾರಿಯರ್ಸ್​ಗಳಲ್ಲಿ ಒಬ್ಬರಾದ ಪೊಲೀಸರಿಗೆ ಮಹಾಮಾರಿ ಬೆನ್ನು ಬಿಡದೆ ಕಾಡುತ್ತಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಪೊಲೀಸರ ದೇಹ ಹೊಕ್ಕುತ್ತಿದೆ. ಇಂದು ನಗರದಲ್ಲಿ ಮತ್ತೆ ಇಬ್ಬರು ಪೊಲೀಸರಿಗೆ ಸೋಂಕು ತಗುಲಿದೆ. ಹೆಚ್​ಎಎಲ್ ಪೊಲೀಸ್ ಠಾಣೆ ಹಾಗೂ ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್​ಗಳಿಗೆ ಕೊರೊನಾ ದೃಢಪಟ್ಟಿದೆ. ಹಾಗೂ ಬೆಳ್ಳಂದೂರು ಠಾಣೆಯ ಮಹಿಳಾ ಹೆಡ್ ಕಾನ್ಸ್‌ಟೇಬಲ್‌ಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. […]

ಪೊಲೀಸರಿಗೆ ಕಂಟಕವಾದ ಕೊರೊನಾ, ಇಂದು ಮತ್ತಷ್ಟು ವಾರಿಯರ್ಸ್​ಗೆ ಸೋಂಕು
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 28, 2020 | 1:19 PM

Share

ಬೆಂಗಳೂರು: ಮಹಾಮಾರಿ ಕೊರೊನಾ ದೇಶಕ್ಕೆ ದೊಡ್ಡ ಕಂಟಕವನ್ನೇ ಸೃಷ್ಟಿಸಿದೆ. ಕೊವಿಡ್ ಹಿಮ್ಮೆಟ್ಟಿಸಲು ಪಣ ತೊಟ್ಟು ನಿಂತ ಕೊರೊನಾ ವಾರಿಯರ್ಸ್​ಗಳಲ್ಲಿ ಒಬ್ಬರಾದ ಪೊಲೀಸರಿಗೆ ಮಹಾಮಾರಿ ಬೆನ್ನು ಬಿಡದೆ ಕಾಡುತ್ತಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ಪೊಲೀಸರ ದೇಹ ಹೊಕ್ಕುತ್ತಿದೆ. ಇಂದು ನಗರದಲ್ಲಿ ಮತ್ತೆ ಇಬ್ಬರು ಪೊಲೀಸರಿಗೆ ಸೋಂಕು ತಗುಲಿದೆ. ಹೆಚ್​ಎಎಲ್ ಪೊಲೀಸ್ ಠಾಣೆ ಹಾಗೂ ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್​ಗಳಿಗೆ ಕೊರೊನಾ ದೃಢಪಟ್ಟಿದೆ. ಹಾಗೂ ಬೆಳ್ಳಂದೂರು ಠಾಣೆಯ ಮಹಿಳಾ ಹೆಡ್ ಕಾನ್ಸ್‌ಟೇಬಲ್‌ಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿರುವವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಪೊಲೀಸ್ ಠಾಣೆ ಸ್ಯಾನಿಟೈಸ್ ಮಾಡಲಾಗಿದೆ.

ಮೈಸೂರು, ಬೀದರ್​ನಲ್ಲೂ ಸಿಬ್ಬಂದಿಗೆ ಕೊರೊನಾ? ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ನಿವಾಸಿಯಾಗಿರುವ ಟಿ.ನರಸೀಪುರ ಪೊಲೀಸ್ ಠಾಣೆ ಸಿಬ್ಬಂದಿಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಪೊಲೀಸ್ ಠಾಣೆ ಸೀಲ್‌ಡೌನ್ ಮಾಡುವ ಸಾಧ್ಯತೆ ಇದೆ.

ಬೀದರ್‌ನ ಗಾಂಧಿಗಂಜ್ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್​ಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ಇವರು ಕಳೆದ 10 ದಿನಗಳಿಂದ ಕ್ವಾರಂಟೈನ್‌ನಲ್ಲಿದ್ದರು. ಇಂದು ವರದಿ ಪಾಸಿಟಿವ್ ಬಂದ್ರೆ ಪೊಲೀಸ್ ಠಾಣೆ ಸೀಲ್​ಡೌನ್ ಮಾಡುವ ಸಾಧ್ಯತೆ ಇದೆ.

Published On - 1:18 pm, Sun, 28 June 20

Follow Us
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು