AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಕ್ಕೆ ಮತ್ತೊಂದು ಟೆನ್ಷನ್: ವಿದೇಶದಿಂದ ಹಾರಿ ಬರಲಿದ್ದಾರೆ 10 ಸಾವಿರ ಮಂದಿ!

ಬೆಂಗಳೂರು: ಕೊರೊನಾಘಾತಕ್ಕೆ ನಲುಗಿರುವ ರಾಜ್ಯಕ್ಕೆ ಮತ್ತೊಂದು ಟೆನ್ಷನ್ ಶುರುವಾಗಿದೆ. ಶೀಘ್ರವೇ ಬೆಂಗಳೂರು ಮತ್ತು ಮಂಗಳೂರು ವಿಮಾನ ನಿಲ್ದಾಣಕ್ಕೆ 10 ಸಾವಿರ ಭಾರತೀಯ ಮೂಲದ ಪ್ರಯಾಣಿಕರು ವಿದೇಶಗಳಿಂದ ವಾಪಸಾಗಲಿದ್ದಾರೆ. ವಿದೇಶದಿಂದ ವಾಪಸಾಗುವ ಹಿನ್ನೆಲೆಯಲ್ಲಿ ಕ್ವಾರಂಟೈನ್​ಗೆ ವ್ಯವಸ್ಥೆ ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಡಿಸಿ ಪಿ.ಎನ್.ರವೀಂದ್ರ ಹೇಳಿದ್ದಾರೆ. ವಿದೇಶದಿಂದ ಆಗಮಿಸಲಿರುವ ಪ್ರಯಾಣಿಕರ ಕ್ವಾರಂಟೈನ್​ಗಾಗಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಭಾಗಗಳಲ್ಲಿ ರೆಸಾರ್ಟ್, ಹೋಟೆಲ್, ಕಲ್ಯಾಣ ಮಂಟಪ, ಹಾಸ್ಟೆಲ್, ಪಿಜಿಗಳನ್ನು ಬುಕ್ಕಿಂಗ್ ಮಾಡಲಾಗಿದೆ. ಬಂದ ಪ್ರಯಾಣಿಕರನ್ನ ಸ್ಕ್ರೀನಿಂಗ್ ಮಾಡಿ 14 […]

ರಾಜ್ಯಕ್ಕೆ ಮತ್ತೊಂದು ಟೆನ್ಷನ್: ವಿದೇಶದಿಂದ ಹಾರಿ ಬರಲಿದ್ದಾರೆ 10 ಸಾವಿರ ಮಂದಿ!
ಸಾಧು ಶ್ರೀನಾಥ್​
|

Updated on:May 05, 2020 | 3:47 PM

Share

ಬೆಂಗಳೂರು: ಕೊರೊನಾಘಾತಕ್ಕೆ ನಲುಗಿರುವ ರಾಜ್ಯಕ್ಕೆ ಮತ್ತೊಂದು ಟೆನ್ಷನ್ ಶುರುವಾಗಿದೆ. ಶೀಘ್ರವೇ ಬೆಂಗಳೂರು ಮತ್ತು ಮಂಗಳೂರು ವಿಮಾನ ನಿಲ್ದಾಣಕ್ಕೆ 10 ಸಾವಿರ ಭಾರತೀಯ ಮೂಲದ ಪ್ರಯಾಣಿಕರು ವಿದೇಶಗಳಿಂದ ವಾಪಸಾಗಲಿದ್ದಾರೆ. ವಿದೇಶದಿಂದ ವಾಪಸಾಗುವ ಹಿನ್ನೆಲೆಯಲ್ಲಿ ಕ್ವಾರಂಟೈನ್​ಗೆ ವ್ಯವಸ್ಥೆ ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಡಿಸಿ ಪಿ.ಎನ್.ರವೀಂದ್ರ ಹೇಳಿದ್ದಾರೆ.

ವಿದೇಶದಿಂದ ಆಗಮಿಸಲಿರುವ ಪ್ರಯಾಣಿಕರ ಕ್ವಾರಂಟೈನ್​ಗಾಗಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಭಾಗಗಳಲ್ಲಿ ರೆಸಾರ್ಟ್, ಹೋಟೆಲ್, ಕಲ್ಯಾಣ ಮಂಟಪ, ಹಾಸ್ಟೆಲ್, ಪಿಜಿಗಳನ್ನು ಬುಕ್ಕಿಂಗ್ ಮಾಡಲಾಗಿದೆ. ಬಂದ ಪ್ರಯಾಣಿಕರನ್ನ ಸ್ಕ್ರೀನಿಂಗ್ ಮಾಡಿ 14 ದಿನಗಳ ಕಾಲ ಕ್ವಾರಂಟೈನ್ ಮಾಡಲಾಗುತ್ತೆ.

ಸ್ಕ್ರೀನಿಂಗ್ ವೇಳೆ 3 ವಿಭಾಗಗಳಾಗಿ ವಿಂಗಡನೆ: ಪ್ರಯಾಣಿಕರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಮಾಡಲಾಗುತ್ತೆ. ಈ ವೇಳೆ ಎ, ಬಿ ಮತ್ತು ಸಿ ವಿಭಾಗಗಳಾಗಿ ವಿಂಗಡಿಸಲಾಗುತ್ತೆ. ಎ ಗ್ರೇಡ್ ಬಂದವರಿಗೆ ಬೆಂಗಳೂರಿನಲ್ಲಿ, ಬಿ ಮತ್ತು ಸಿ ಗ್ರೇಡ್ ಬಂದವರಿಗೆ ಗ್ರಾಮಾಂತರ ಜಿಲ್ಲೆಯಲ್ಲಿ ಕ್ವಾರಂಟೈನ್ ಮಾಡಲಾಗುತ್ತೆ.

ಈ ನಿಟ್ಟಿನಲ್ಲಿ ಈಗಾಗಲೇ ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ಸಿದ್ಧತೆ ಮಾಡಕೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 356 ಹೋಟೆಲ್, ರೆಸಾರ್ಟ್ ಮತ್ತು ಕಲ್ಯಾಣ ಮಂಟಪಗಳನ್ನ ಬುಕ್ಕಿಂಗ್ ಮಾಡಲಾಗಿದೆ ಎಂದು ಟಿವಿ9ಗೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾಹಿತಿ ನೀಡಿದ್ದಾರೆ.

Published On - 3:42 pm, Tue, 5 May 20

ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!