AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಕ್ಕೆ ಮತ್ತೊಂದು ಟೆನ್ಷನ್: ವಿದೇಶದಿಂದ ಹಾರಿ ಬರಲಿದ್ದಾರೆ 10 ಸಾವಿರ ಮಂದಿ!

ಬೆಂಗಳೂರು: ಕೊರೊನಾಘಾತಕ್ಕೆ ನಲುಗಿರುವ ರಾಜ್ಯಕ್ಕೆ ಮತ್ತೊಂದು ಟೆನ್ಷನ್ ಶುರುವಾಗಿದೆ. ಶೀಘ್ರವೇ ಬೆಂಗಳೂರು ಮತ್ತು ಮಂಗಳೂರು ವಿಮಾನ ನಿಲ್ದಾಣಕ್ಕೆ 10 ಸಾವಿರ ಭಾರತೀಯ ಮೂಲದ ಪ್ರಯಾಣಿಕರು ವಿದೇಶಗಳಿಂದ ವಾಪಸಾಗಲಿದ್ದಾರೆ. ವಿದೇಶದಿಂದ ವಾಪಸಾಗುವ ಹಿನ್ನೆಲೆಯಲ್ಲಿ ಕ್ವಾರಂಟೈನ್​ಗೆ ವ್ಯವಸ್ಥೆ ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಡಿಸಿ ಪಿ.ಎನ್.ರವೀಂದ್ರ ಹೇಳಿದ್ದಾರೆ. ವಿದೇಶದಿಂದ ಆಗಮಿಸಲಿರುವ ಪ್ರಯಾಣಿಕರ ಕ್ವಾರಂಟೈನ್​ಗಾಗಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಭಾಗಗಳಲ್ಲಿ ರೆಸಾರ್ಟ್, ಹೋಟೆಲ್, ಕಲ್ಯಾಣ ಮಂಟಪ, ಹಾಸ್ಟೆಲ್, ಪಿಜಿಗಳನ್ನು ಬುಕ್ಕಿಂಗ್ ಮಾಡಲಾಗಿದೆ. ಬಂದ ಪ್ರಯಾಣಿಕರನ್ನ ಸ್ಕ್ರೀನಿಂಗ್ ಮಾಡಿ 14 […]

ರಾಜ್ಯಕ್ಕೆ ಮತ್ತೊಂದು ಟೆನ್ಷನ್: ವಿದೇಶದಿಂದ ಹಾರಿ ಬರಲಿದ್ದಾರೆ 10 ಸಾವಿರ ಮಂದಿ!
ಸಾಧು ಶ್ರೀನಾಥ್​
|

Updated on:May 05, 2020 | 3:47 PM

Share

ಬೆಂಗಳೂರು: ಕೊರೊನಾಘಾತಕ್ಕೆ ನಲುಗಿರುವ ರಾಜ್ಯಕ್ಕೆ ಮತ್ತೊಂದು ಟೆನ್ಷನ್ ಶುರುವಾಗಿದೆ. ಶೀಘ್ರವೇ ಬೆಂಗಳೂರು ಮತ್ತು ಮಂಗಳೂರು ವಿಮಾನ ನಿಲ್ದಾಣಕ್ಕೆ 10 ಸಾವಿರ ಭಾರತೀಯ ಮೂಲದ ಪ್ರಯಾಣಿಕರು ವಿದೇಶಗಳಿಂದ ವಾಪಸಾಗಲಿದ್ದಾರೆ. ವಿದೇಶದಿಂದ ವಾಪಸಾಗುವ ಹಿನ್ನೆಲೆಯಲ್ಲಿ ಕ್ವಾರಂಟೈನ್​ಗೆ ವ್ಯವಸ್ಥೆ ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಡಿಸಿ ಪಿ.ಎನ್.ರವೀಂದ್ರ ಹೇಳಿದ್ದಾರೆ.

ವಿದೇಶದಿಂದ ಆಗಮಿಸಲಿರುವ ಪ್ರಯಾಣಿಕರ ಕ್ವಾರಂಟೈನ್​ಗಾಗಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಭಾಗಗಳಲ್ಲಿ ರೆಸಾರ್ಟ್, ಹೋಟೆಲ್, ಕಲ್ಯಾಣ ಮಂಟಪ, ಹಾಸ್ಟೆಲ್, ಪಿಜಿಗಳನ್ನು ಬುಕ್ಕಿಂಗ್ ಮಾಡಲಾಗಿದೆ. ಬಂದ ಪ್ರಯಾಣಿಕರನ್ನ ಸ್ಕ್ರೀನಿಂಗ್ ಮಾಡಿ 14 ದಿನಗಳ ಕಾಲ ಕ್ವಾರಂಟೈನ್ ಮಾಡಲಾಗುತ್ತೆ.

ಸ್ಕ್ರೀನಿಂಗ್ ವೇಳೆ 3 ವಿಭಾಗಗಳಾಗಿ ವಿಂಗಡನೆ: ಪ್ರಯಾಣಿಕರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಮಾಡಲಾಗುತ್ತೆ. ಈ ವೇಳೆ ಎ, ಬಿ ಮತ್ತು ಸಿ ವಿಭಾಗಗಳಾಗಿ ವಿಂಗಡಿಸಲಾಗುತ್ತೆ. ಎ ಗ್ರೇಡ್ ಬಂದವರಿಗೆ ಬೆಂಗಳೂರಿನಲ್ಲಿ, ಬಿ ಮತ್ತು ಸಿ ಗ್ರೇಡ್ ಬಂದವರಿಗೆ ಗ್ರಾಮಾಂತರ ಜಿಲ್ಲೆಯಲ್ಲಿ ಕ್ವಾರಂಟೈನ್ ಮಾಡಲಾಗುತ್ತೆ.

ಈ ನಿಟ್ಟಿನಲ್ಲಿ ಈಗಾಗಲೇ ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ಸಿದ್ಧತೆ ಮಾಡಕೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 356 ಹೋಟೆಲ್, ರೆಸಾರ್ಟ್ ಮತ್ತು ಕಲ್ಯಾಣ ಮಂಟಪಗಳನ್ನ ಬುಕ್ಕಿಂಗ್ ಮಾಡಲಾಗಿದೆ ಎಂದು ಟಿವಿ9ಗೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾಹಿತಿ ನೀಡಿದ್ದಾರೆ.

Published On - 3:42 pm, Tue, 5 May 20

ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?