AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿವೆ 1,695 ಕ್ಕೂ ಹೆಚ್ಚು ಅಕ್ರಮ ಶಾಲೆಗಳು; ಹಂತ ಹಂತವಾಗಿ ಮುಚ್ಚಲಾಗುವುದು ಎಂದ ಸಚಿವ ಮಧು ಬಂಗಾರಪ್ಪ

Illegal Schools in Karnataka; ರಾಜ್ಯದಲ್ಲಿ 1,695 ಅಕ್ರಮ ಶಾಲೆಗಳಿವೆ. ಈ ಶಾಲೆಗಳಲ್ಲಿ ಸಾವಿರಾರು ಮಕ್ಕಳು ಓದುತ್ತಿರುವುದರಿಂದ ಅವುಗಳನ್ನು ತಕ್ಷಣವೇ ಮುಚ್ಚಲು ಸಾಧ್ಯವಿಲ್ಲ. ಹಂತ ಹಂತವಾಗಿ ಎಲ್ಲಾ ಅಕ್ರಮ ಶಾಲೆಗಳನ್ನು ಮುಚ್ಚಲಾಗುವುದು. ಶೀಘ್ರದಲ್ಲೇ ಇಂತಹ ಅಕ್ರಮ ಶಾಲೆಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತೇವೆ ಎಂದು ಬಂಗಾರಪ್ಪ ಹೇಳಿದ್ದಾರೆ.

ಕರ್ನಾಟಕದಲ್ಲಿವೆ 1,695 ಕ್ಕೂ ಹೆಚ್ಚು ಅಕ್ರಮ ಶಾಲೆಗಳು; ಹಂತ ಹಂತವಾಗಿ ಮುಚ್ಚಲಾಗುವುದು ಎಂದ ಸಚಿವ ಮಧು ಬಂಗಾರಪ್ಪ
ಮಧು ಬಂಗಾರಪ್ಪ
TV9 Web
| Updated By: Ganapathi Sharma|

Updated on: Aug 11, 2023 | 5:05 PM

Share

ಬೆಂಗಳೂರು, ಆಗಸ್ಟ್ 11: ರಾಜ್ಯದಲ್ಲಿ 1,695 ಕ್ಕೂ ಹೆಚ್ಚು ಅಕ್ರಮ ಶಾಲೆಗಳಿದ್ದು (Illegal Schools), ಅಂತಹ ಶಾಲೆಗಳನ್ನು ಹಂತ-ಹಂತವಾಗಿ ಮುಚ್ಚಲು ಸರ್ಕಾರ ಮುಂದಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಶುಕ್ರವಾರ ಹೇಳಿದ್ದಾರೆ. ಅನುಮತಿಯಿಲ್ಲದೆ ಆರಂಭಿಸಲಾಗುವ ಹೊಸ ಶಾಲೆಗಳಿಗೆ ಬ್ಲಾಕ್ ಶಿಕ್ಷಣಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಕರ್ನಾಟಕ ಪ್ರೈವೇಟ್ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್‌ನೊಂದಿಗೆ ನಡೆದ ಸಭೆಯ ನಂತರ ಬಂಗಾರಪ್ಪ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.

ಖಾಸಗಿ ಶಾಲಾ ಸಂಘದ ಸದಸ್ಯರು ತಮ್ಮ ಕುಂದುಕೊರತೆಗಳ ಬಗ್ಗೆ ನನಗೆ ತಿಳಿಸಿದ್ದಾರೆ. ರಾಜ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ರಮ ಶಾಲೆಗಳ ಬಗ್ಗೆ ದೂರು ನೀಡಿದ್ದಾರೆ. ಸಮಸ್ಯೆಯನ್ನು ಪರಿಹರಿಸಲು ನಾವು ವಿವಿಧ ಪರಿಹಾರ ಕ್ರಮಗಳ ಬಗ್ಗೆ ಚರ್ಚಿಸಿದ್ದೇವೆ. ಶೀಘ್ರದಲ್ಲೇ ಅವುಗಳನ್ನು ಕಾರ್ಯಗತಗೊಳಿಸಲು ಪ್ರಾರಂಭಿಸುತ್ತೇವೆ ಎಂದು ಬಂಗಾರಪ್ಪ ಹೇಳಿದ್ದಾರೆ.

ಅಕ್ರಮ ಶಾಲೆಗಳನ್ನು ತಕ್ಷಣವೇ ಮುಚ್ಚಲು ಸಾಧ್ಯವಿಲ್ಲ ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ಒಂದನೇ ತರಗತಿಗೆ ಪ್ರವೇಶ ಪಡೆಯಲು 6 ವರ್ಷ ತುಂಬಿರಬೇಕು; ರಾಜ್ಯ ಸರ್ಕಾರದ ಅಧಿಸೂಚನೆ ಎತ್ತಿಹಿಡಿದ ಹೈಕೋರ್ಟ್

ರಾಜ್ಯದಲ್ಲಿ 1,695 ಅಕ್ರಮ ಶಾಲೆಗಳಿವೆ. ಈ ಶಾಲೆಗಳಲ್ಲಿ ಸಾವಿರಾರು ಮಕ್ಕಳು ಓದುತ್ತಿರುವುದರಿಂದ ಅವುಗಳನ್ನು ತಕ್ಷಣವೇ ಮುಚ್ಚಲು ಸಾಧ್ಯವಿಲ್ಲ. ಹಲವಾರು ಶಾಲೆಗಳನ್ನು ಅನುಮತಿ ಪಡೆಯದೆ ಮೇಲ್ದರ್ಜೆಗೇರಿಸಲಾಗಿದೆ. 190 ಶಾಲೆಗಳು ಸೂಕ್ತ ಅನುಮತಿ ಪಡೆಯದೆ ಸ್ಥಳ ಬದಲಾಯಿಸಿವೆ. ಹಂತ ಹಂತವಾಗಿ ಎಲ್ಲಾ ಅಕ್ರಮ ಶಾಲೆಗಳನ್ನು ಮುಚ್ಚಲಾಗುವುದು. ಶೀಘ್ರದಲ್ಲೇ ಇಂತಹ ಅಕ್ರಮ ಶಾಲೆಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತೇವೆ ಎಂದು ಬಂಗಾರಪ್ಪ ಹೇಳಿದ್ದಾರೆ.

ಆಗಸ್ಟ್ 14 ರೊಳಗೆ ಅಕ್ರಮ ಶಾಲೆಗಳನ್ನು ಮುಚ್ಚುವಂತೆ ಶಿಕ್ಷಣ ಇಲಾಖೆಯು ಆಗಸ್ಟ್ 9 ರಂದು ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?