ಕರ್ನಾಟಕದಲ್ಲಿ 20 ಸಾವಿರಕ್ಕೂ ಅಧಿಕ ಸರ್ಕಾರಿ ಹುದ್ದೆಗಳು ಖಾಲಿ-ಖಾಲಿ, ಸೇವೆಗಳಿಗೆ ಹೊಡೆತ

ಕರ್ನಾಟಕದಲ್ಲಿ ಸರ್ಕಾರ ನೀಡಬೇಕಾದ ಬಹುತೇಕ ಸೇವೆಗಳಲ್ಲಿ ವಿಳಂಬವಾಗಿದೆ, 20 ಸಾವಿರ ಉದ್ಯೋಗಗಳು ಖಾಲಿ ಇವೆ. ಕಾಂಗ್ರೆಸ್​ 2023ರ ಚುನಾವಣಾ ಪ್ರಣಾಳಿಕೆಯಲ್ಲಿ ಒಂದು ವರ್ಷದೊಳಗೆ ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಭರವಸೆ ನೀಡಿತ್ತು. ಈಗ ಒಂದು ವರ್ಷ 7 ತಿಂಗಳು ಕಳೆದಿದೆ. ಇದುವರೆಗೂ ನೇಮಕಾತಿ ಬಗ್ಗೆ ಯಾವುದೇ ಮಾಹಿತಿಯನ್ನು ಸರ್ಕಾರ ನೀಡಿಲ್ಲ.

ಕರ್ನಾಟಕದಲ್ಲಿ 20 ಸಾವಿರಕ್ಕೂ ಅಧಿಕ ಸರ್ಕಾರಿ ಹುದ್ದೆಗಳು ಖಾಲಿ-ಖಾಲಿ, ಸೇವೆಗಳಿಗೆ ಹೊಡೆತ
ಉದ್ಯೋಗImage Credit source: Business Today
Follow us
ನಯನಾ ರಾಜೀವ್
|

Updated on:Dec 26, 2024 | 9:58 AM

ಕರ್ನಾಟಕದಲ್ಲಿ 20 ಸಾವಿರ ಸರ್ಕಾರಿ ಹುದ್ದೆಗಳು ಭರ್ತಿಯಾಗದೇ ಇರುವುದರಿಂದ ನಾಗರಿಕರು ಹಲವು ಸೇವೆಗಳಲ್ಲಿ ವಿಳಂಬ ಎದುರಿಸಬೇಕಾಗಿದೆ. 20,446 ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಅಂಕಿಶಂಗಳ ಪ್ರಕಾರ, ಆಡಳಿತದಲ್ಲಿನ ಮೂರನೇ ಒಂದು ಭಾಗದಷ್ಟು ಹುದ್ದೆಗಳು ಭರ್ತಿಯಾಗದೇ ಬಾಕಿ ಉಳಿದಿದೆ.

ರಾಜ್ಯದಲ್ಲಿ 7.72 ಲಕ್ಷ ಸರ್ಕಾರಿ ಉದ್ಯೋಗಗಳು ಮಂಜೂರಾಗಿವೆ, ಅವುಗಳಲ್ಲಿ 2.76 ಲಕ್ಷ ಉದ್ಯೋಗಗಳು ಖಾಲಿ ಇವೆ. ಕಳೆದ ವರ್ಷ ಇದ್ದ ಖಾಲಿ ಹುದ್ದೆಗಳ ಸಂಖ್ಯೆ 2.55 ಲಕ್ಷ ಎಂದು ಡೆಕ್ಕನ್ ಹೆರಾಲ್ಡ್​ ವರದಿ ಮಾಡಿದೆ. ಇದೀಗ ಹೆಚ್ಚುವರಿಯಾಗಿ 20 ಸಾವಿರಕ್ಕೂ ಅದಿಕ ಹುದ್ದೆಗಳು ಸೇರ್ಪಡೆಗೊಂಡಿವೆ. ಕಾಂಗ್ರೆಸ್​ 2023ರ ಚುನಾವಣಾ ಪ್ರಣಾಳಿಕೆಯಲ್ಲಿ ಒಂದು ವರ್ಷದೊಳಗೆ ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಭರವಸೆ ನೀಡಿತ್ತು. ಈಗ ಒಂದು ವರ್ಷ 7 ತಿಂಗಳು ಕಳೆದಿದೆ.

ಹಣಕಾಸು ಇಲಾಖೆಯ ಪ್ರಕಾರ, ಕೇಸ್​ ಟು ಕೇಸ್ ಆಧಾರದ ಮೇಲೆ ನೇಮಕಾತಿಗೆ ಅನುಮತಿ ನೀಡಲಾಗುತ್ತದೆ. ಆದರೆ ಸ್ಪಷ್ಟವಾಗಿ ಸಿದ್ದರಾಮಯ್ಯ ಆಡಳಿತವು ಖಾತರಿ ಯೋಜನೆಗಳಿಗೆ 63,000 ಕೋಟಿ ರೂ.ಗಿಂತ ಹೆಚ್ಚು ಹಣ ಖರ್ಚು ಮಾಡಿದೆ. ಹಾಗಅಗಿ ನೇಮಕಾತಿಯಲ್ಲಿ ನಿಧಾನವಾಗುತ್ತಿದೆ.

ಮತ್ತಷ್ಟು ಓದಿ: ಸರ್ಕಾರಿ ಉದ್ಯೋಗಾವಕಾಶ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

ಖಾಲಿ ಹುದ್ದೆಗಳು ಕೆಲಸದ ವಿಳಂಬವನ್ನು ಸೃಷ್ಟಿಸುತ್ತಿದೆ ಮತ್ತು ಭ್ರಷ್ಟಾಚಾರವನ್ನು ಪ್ರೋತ್ಸಾಹಿಸಿದಂತಾಗುತ್ತಿದೆ ಎಂದು ಕಾರ್ಕಳ ಬಿಜೆಪಿ ಶಾಸಕ ಮಾಜಿ ಸಚಿವ ವಿ ಸುನಿಲ್ ಕುಮಾರ್ ಹೇಳಿದ್ದಾರೆ. ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಪರಿವರ್ತಿಸುವುದು ಜನರಿಗೆ ಮನೆ ನಿರ್ಮಿಸಲು ಅವಶ್ಯಕವಾಗಿದೆ. ಅವರು ನಗರಾಭಿವೃದ್ಧಿ ಇಲಾಖೆಗೆ ಅರ್ಜಿ ಸಲ್ಲಿಸಬೇಕಾಗಿದೆ. ಉಡುಪಿಯಲ್ಲಿ ಇದಕ್ಕೆ ಇಬ್ಬರು ನೌಕರರು ಮಾತ್ರ ಇದ್ದಾರೆ.

ವಿಲೇವಾರಿ ಮಾಡಲು ಸ್ಥಳ ಭೇಟಿ ಮಾಡಲು ಯಾವುದೇ ಮಾರ್ಗವಿಲ್ಲ. ಅಪ್ಲಿಕೇಷನ್​ಗಳು 2 ಸಾವಿರ ರೂ.,ಗೆ ಸಿಗುತ್ತಿದ್ದುದು ಈಗ 20 ಸಾವಿರ ರೂ. ಪಾವತಿಸುವಂತಾಗಿದೆ. ಶೇ.65ರಷ್ಟು ಸಿಬ್ಬಂದಿ ಕೊರತೆಯಿಂದ ಕೃಷಿ ಇಲಾಖೆ ಅತ್ಯಂತ ಕೆಟ್ಟಾಗಿದೆ ಎಂದು ಹೇಳಿದ್ದಾರೆ.

ಖಾಲಿ ಹುದ್ದೆಗಳು ಹೆಚ್ಚಿದ್ದು ಎಲ್ಲಾ ಹೊರಗುತ್ತಿಗೆ ನಿಡಲಾಗುತ್ತಿದೆ. 96, 000 ಸಿ ಗ್ರೂಪ್, ಡಿ ಉದ್ಯೋಗಿಗಳು, ಸೈನೋಗ್ರಾಫರ್​ಗಳು, ಟೈಪಿಸ್ಟ್​ಗಳು, ಡ್ರೈವರ್​ಗಳು ಇತ್ಯಾದಿಯನ್ನು ಹೊರಗುತ್ತಿಗೆ ನೀಡಲಾಗುತ್ತಿದೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದ್ದಾರೆ. ನವೆಂಬರ್ 2022 ರಲ್ಲಿ, ಆಗಿನ ಬಿಜೆಪಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದು ವರ್ಷದೊಳಗೆ ಒಂದು ಲಕ್ಷ ಉದ್ಯೋಗಗಳನ್ನು ಭರ್ತಿ ಮಾಡುವುದಾಗಿ ಭರವಸೆ ನೀಡಿದ್ದರು, ಅದು ಸಾಧ್ಯವಾಗಲಿಲ್ಲ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:39 am, Thu, 26 December 24

ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್:ಮೈಲಾರಲಿಂಗೇಶ್ವರ ಕಾರ್ಣಿಕ
ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್:ಮೈಲಾರಲಿಂಗೇಶ್ವರ ಕಾರ್ಣಿಕ
ವಿಮಾನ ನಿಲ್ದಾಣದಲ್ಲಿ ಮೋದಿಯನ್ನು ತಬ್ಬಿ ಬೀಳ್ಕೊಟ್ಟ ಫ್ರಾನ್ಸ್​ ಅಧ್ಯಕ್ಷ
ವಿಮಾನ ನಿಲ್ದಾಣದಲ್ಲಿ ಮೋದಿಯನ್ನು ತಬ್ಬಿ ಬೀಳ್ಕೊಟ್ಟ ಫ್ರಾನ್ಸ್​ ಅಧ್ಯಕ್ಷ
ಬಾಗಪ್ಪ ಹರಿಜನ್ ಅಂತ್ಯಕ್ರಿಯೆಯಲ್ಲಿ ನೂರಾರು ಜನ ಭಾಗಿ
ಬಾಗಪ್ಪ ಹರಿಜನ್ ಅಂತ್ಯಕ್ರಿಯೆಯಲ್ಲಿ ನೂರಾರು ಜನ ಭಾಗಿ
ಬಾಗಪ್ಪನನ್ನು ಪ್ರೀತಿಸಿ ವರಿಸಿದ ಮಹಿಳೆ ಸರ್ಕಾರೀ ವಕೀಲೆಯಾಗಿದ್ದರು: ಮಹಾಂತೇಶ
ಬಾಗಪ್ಪನನ್ನು ಪ್ರೀತಿಸಿ ವರಿಸಿದ ಮಹಿಳೆ ಸರ್ಕಾರೀ ವಕೀಲೆಯಾಗಿದ್ದರು: ಮಹಾಂತೇಶ
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ತನಿಖೆ ಪದದ ವ್ಯಾಖ್ಯಾನ ಬದಲಾದಂತಿದೆ!
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ತನಿಖೆ ಪದದ ವ್ಯಾಖ್ಯಾನ ಬದಲಾದಂತಿದೆ!
ಉಡುಪಿಗೆ ಬಂದು ದೈವಕ್ಕೆ ಕೈ ಮುಗಿದ ತಮಿಳು ನಟ ವಿಶಾಲ್
ಉಡುಪಿಗೆ ಬಂದು ದೈವಕ್ಕೆ ಕೈ ಮುಗಿದ ತಮಿಳು ನಟ ವಿಶಾಲ್
ಮಾರ್ಸಿಲ್ಲೆಯಲ್ಲಿ ಭಾರತೀಯ ಕಾನ್ಸುಲೇಟ್ ಉದ್ಘಾಟನೆ; ಮೋದಿ, ಮೋದಿ ಘೋಷಣೆ
ಮಾರ್ಸಿಲ್ಲೆಯಲ್ಲಿ ಭಾರತೀಯ ಕಾನ್ಸುಲೇಟ್ ಉದ್ಘಾಟನೆ; ಮೋದಿ, ಮೋದಿ ಘೋಷಣೆ
ಜನರಿಂದ ಬಡ್ಡಿ ಪೀಕಿ ಪೀಕಿಯೇ ಯಲ್ಲಪ್ಪ ಮಿಸ್ಕಿನ್,  ಬಡ್ಡಿ ಯಲ್ಲಪ್ಪನಾದ!
ಜನರಿಂದ ಬಡ್ಡಿ ಪೀಕಿ ಪೀಕಿಯೇ ಯಲ್ಲಪ್ಪ ಮಿಸ್ಕಿನ್,  ಬಡ್ಡಿ ಯಲ್ಲಪ್ಪನಾದ!
ಪತ್ನಿಗೆ ಸಿಲ್ಕ್​ ಸೀರೆ ಖರೀದಿಸಿದ ಡಿಕೆ ಶಿವಕುಮಾರ್: ಬೆಲೆ ಎಷ್ಟು ಗೊತ್ತಾ?
ಪತ್ನಿಗೆ ಸಿಲ್ಕ್​ ಸೀರೆ ಖರೀದಿಸಿದ ಡಿಕೆ ಶಿವಕುಮಾರ್: ಬೆಲೆ ಎಷ್ಟು ಗೊತ್ತಾ?
ಫ್ರಾನ್ಸ್​ ಮಹಾಯುದ್ಧದಲ್ಲಿ ಹುತಾತ್ಮರಾದ ಸೈನಿಕರಿಗೆ ಪ್ರಧಾನಿ ಮೋದಿ ನಮನ
ಫ್ರಾನ್ಸ್​ ಮಹಾಯುದ್ಧದಲ್ಲಿ ಹುತಾತ್ಮರಾದ ಸೈನಿಕರಿಗೆ ಪ್ರಧಾನಿ ಮೋದಿ ನಮನ