AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ACB Raid ಟಿಪಿಒ ಜಯರಾಜ್ ಮನೆಯಲ್ಲಿ ಭಾರೀ ಆಸ್ತಿ ಪತ್ತೆ, ಕೇರಳದಲ್ಲಿರುವ ಪತ್ನಿಯ ಕ್ವಾರ್ಟರ್ಸ್‌ ಮೇಲೂ ದಾಳಿ

ಮಂಗಳೂರು ಮಹಾನಗರ ಪಾಲಿಕೆ ಟಿಪಿಒ ಜಯರಾಜ್ ಮನೆ ಮೇಲೆ ಎಸಿಬಿ ದಾಳಿ ನಡೆಸಿದ್ದು ಸುಮಾರು 3ರಿಂದ 4 ಕೋಟಿಯಷ್ಟು ಆಸ್ತಿ ಪತ್ತೆಯಾಗಿದೆ. ಕೇರಳದಲ್ಲಿರುವ ಪತ್ನಿಯ ಕ್ವಾರ್ಟರ್ಸ್‌ ಮೇಲೂ ದಾಳಿ ನಡೆದಿದೆ.

ACB Raid ಟಿಪಿಒ ಜಯರಾಜ್ ಮನೆಯಲ್ಲಿ ಭಾರೀ ಆಸ್ತಿ ಪತ್ತೆ, ಕೇರಳದಲ್ಲಿರುವ ಪತ್ನಿಯ ಕ್ವಾರ್ಟರ್ಸ್‌ ಮೇಲೂ ದಾಳಿ
ಎಸಿಬಿ ದಾಳಿ ವೇಳೆ ಸಿಕ್ಕ ನಗದು
ಆಯೇಷಾ ಬಾನು
ಆಯೇಷಾ ಬಾನು|

Updated on:Feb 02, 2021 | 1:47 PM

Share

ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿಯನ್ನು ಗಳಿಸಿರುವ ಆರೋಪ ಹಿನ್ನೆಲೆಯಲ್ಲಿ ಇಂದು ರಾಜ್ಯದ 7 ಅಧಿಕಾರಿಗಳ ಮನೆಗಳ ಮೇಲೆ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಪೈಕಿ ಮಂಗಳೂರು ಮಹಾನಗರ ಪಾಲಿಕೆ ಟಿಪಿಒ ಜಯರಾಜ್ ಕೂಡ ಒಬ್ಬರು. ಇವರ ಮನೆ ಮೇಲೆ ಎಸಿಬಿ ದಾಳಿ ನಡೆಸಿದ್ದು ಸುಮಾರು 3ರಿಂದ 4 ಕೋಟಿಯಷ್ಟು ಆಸ್ತಿ ಪತ್ತೆಯಾಗಿದೆ. ಹಾಗೂ 8 ಲಕ್ಷ ರೂಪಾಯಿ ನಗದು ಸಿಕ್ಕಿದೆ.

ಮೈಸೂರಿನಲ್ಲಿ ಒಂದು, ಮಂಗಳೂರಿನಲ್ಲಿ 2 ಸೈಟ್, ಮತ್ತು ಕೇಂದ್ರಾಡಳಿತ ಪ್ರದೇಶ ಮಾಹೆಯ ಪತ್ನಿ ಮನೆಯಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ ಪತ್ತೆಯಾಗಿದೆ. ಅಲ್ಲದೆ ಕೇರಳದ ಕೊಚ್ಚಿನ್‌ನಲ್ಲಿರುವ ಬ್ಯಾಂಕ್‌ನಲ್ಲಿ 1 ಕೋಟಿ ಠೇವಣಿ ಇಟ್ಟಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ಕೊಚ್ಚಿನ್‌ನ ಬ್ಯಾಂಕ್‌ಗೆ ಎಸಿಬಿ ಅಧಿಕಾರಿಗಳ ಭೇಟಿ ನೀಡಲಿದ್ದು ಅಲ್ಲಿನ ಲಾಕರ್ ಓಪನ್ ಮಾಡಲಿದ್ದಾರೆ.

ಕೇರಳದಲ್ಲಿರುವ ಪತ್ನಿ ಕ್ವಾರ್ಟರ್ಸ್‌ ಮೇಲೂ ಎಸಿಬಿ ದಾಳಿ ನಡೆಸಿದೆ. ಜಂಟಿ ನಿರ್ದೇಶಕ ಜಯರಾಜ್ ಪತ್ನಿ ಡಾ.ಜಯಶ್ರೀ ಕೂಡ ಸರ್ಕಾರಿ ಉದ್ಯೋಗಿ. ಇವರು ಕೇರಳದಲ್ಲಿ ಸರ್ಕಾರಿ ವೈದ್ಯೆಯಾಗಿದ್ದಾರೆ. ಕಳೆದ 12 ವರ್ಷದಿಂದ ಕೇರಳದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಆರೋಪ, ರಾಜ್ಯದ 7 ಅಧಿಕಾರಿಗಳ ಮನೆಗಳ ಮೇಲೆ ACB ರೇಡ್

Published On - 11:51 am, Tue, 2 February 21

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ