AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ACB Raid ಟಿಪಿಒ ಜಯರಾಜ್ ಮನೆಯಲ್ಲಿ ಭಾರೀ ಆಸ್ತಿ ಪತ್ತೆ, ಕೇರಳದಲ್ಲಿರುವ ಪತ್ನಿಯ ಕ್ವಾರ್ಟರ್ಸ್‌ ಮೇಲೂ ದಾಳಿ

ಮಂಗಳೂರು ಮಹಾನಗರ ಪಾಲಿಕೆ ಟಿಪಿಒ ಜಯರಾಜ್ ಮನೆ ಮೇಲೆ ಎಸಿಬಿ ದಾಳಿ ನಡೆಸಿದ್ದು ಸುಮಾರು 3ರಿಂದ 4 ಕೋಟಿಯಷ್ಟು ಆಸ್ತಿ ಪತ್ತೆಯಾಗಿದೆ. ಕೇರಳದಲ್ಲಿರುವ ಪತ್ನಿಯ ಕ್ವಾರ್ಟರ್ಸ್‌ ಮೇಲೂ ದಾಳಿ ನಡೆದಿದೆ.

ACB Raid ಟಿಪಿಒ ಜಯರಾಜ್ ಮನೆಯಲ್ಲಿ ಭಾರೀ ಆಸ್ತಿ ಪತ್ತೆ, ಕೇರಳದಲ್ಲಿರುವ ಪತ್ನಿಯ ಕ್ವಾರ್ಟರ್ಸ್‌ ಮೇಲೂ ದಾಳಿ
ಎಸಿಬಿ ದಾಳಿ ವೇಳೆ ಸಿಕ್ಕ ನಗದು
Follow us
ಆಯೇಷಾ ಬಾನು
|

Updated on:Feb 02, 2021 | 1:47 PM

ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿಯನ್ನು ಗಳಿಸಿರುವ ಆರೋಪ ಹಿನ್ನೆಲೆಯಲ್ಲಿ ಇಂದು ರಾಜ್ಯದ 7 ಅಧಿಕಾರಿಗಳ ಮನೆಗಳ ಮೇಲೆ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಪೈಕಿ ಮಂಗಳೂರು ಮಹಾನಗರ ಪಾಲಿಕೆ ಟಿಪಿಒ ಜಯರಾಜ್ ಕೂಡ ಒಬ್ಬರು. ಇವರ ಮನೆ ಮೇಲೆ ಎಸಿಬಿ ದಾಳಿ ನಡೆಸಿದ್ದು ಸುಮಾರು 3ರಿಂದ 4 ಕೋಟಿಯಷ್ಟು ಆಸ್ತಿ ಪತ್ತೆಯಾಗಿದೆ. ಹಾಗೂ 8 ಲಕ್ಷ ರೂಪಾಯಿ ನಗದು ಸಿಕ್ಕಿದೆ.

ಮೈಸೂರಿನಲ್ಲಿ ಒಂದು, ಮಂಗಳೂರಿನಲ್ಲಿ 2 ಸೈಟ್, ಮತ್ತು ಕೇಂದ್ರಾಡಳಿತ ಪ್ರದೇಶ ಮಾಹೆಯ ಪತ್ನಿ ಮನೆಯಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ ಪತ್ತೆಯಾಗಿದೆ. ಅಲ್ಲದೆ ಕೇರಳದ ಕೊಚ್ಚಿನ್‌ನಲ್ಲಿರುವ ಬ್ಯಾಂಕ್‌ನಲ್ಲಿ 1 ಕೋಟಿ ಠೇವಣಿ ಇಟ್ಟಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ಕೊಚ್ಚಿನ್‌ನ ಬ್ಯಾಂಕ್‌ಗೆ ಎಸಿಬಿ ಅಧಿಕಾರಿಗಳ ಭೇಟಿ ನೀಡಲಿದ್ದು ಅಲ್ಲಿನ ಲಾಕರ್ ಓಪನ್ ಮಾಡಲಿದ್ದಾರೆ.

ಕೇರಳದಲ್ಲಿರುವ ಪತ್ನಿ ಕ್ವಾರ್ಟರ್ಸ್‌ ಮೇಲೂ ಎಸಿಬಿ ದಾಳಿ ನಡೆಸಿದೆ. ಜಂಟಿ ನಿರ್ದೇಶಕ ಜಯರಾಜ್ ಪತ್ನಿ ಡಾ.ಜಯಶ್ರೀ ಕೂಡ ಸರ್ಕಾರಿ ಉದ್ಯೋಗಿ. ಇವರು ಕೇರಳದಲ್ಲಿ ಸರ್ಕಾರಿ ವೈದ್ಯೆಯಾಗಿದ್ದಾರೆ. ಕಳೆದ 12 ವರ್ಷದಿಂದ ಕೇರಳದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಆರೋಪ, ರಾಜ್ಯದ 7 ಅಧಿಕಾರಿಗಳ ಮನೆಗಳ ಮೇಲೆ ACB ರೇಡ್

Published On - 11:51 am, Tue, 2 February 21

ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್