AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿಯಲ್ಲಿ ಕಲುಷಿತ ನೀರು ಸೇವಿಸಿ 40ಕ್ಕೂ ಹೆಚ್ಚು ಜನ ಅಸ್ವಸ್ಥ

ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸಂಪೂರ್ಣ ಹಾಳಾಗಿ ಹೋಗಿದೆ. ಈ ಕಾರಣಕ್ಕೆ ಗ್ರಾಮಸ್ಥರಿಗೆ ಬಾವಿ ನೀರೆ ಗತಿಯಾಗಿದೆ. ಬಾವಿಯ ನೀರು ನಲ್ಲಿ ಮೂಲಕ ಗ್ರಾಮಸ್ಥರ ಮನೆಗಳಿಗೆ ತಲುಪುತ್ತವೆ. ಆದರೆ ಚರಂಡಿ ನೀರು ಬಾವಿಗೆ ಸೇರುವುದರಿಂದ ಅದೆ ನೀರು ನಲ್ಲಿ ಮೂಲಕ ಗ್ರಾಮಸ್ಥರಿಗೆ ಸರಬರಾಜು ಆಗುತ್ತಿದೆ.

ಯಾದಗಿರಿಯಲ್ಲಿ ಕಲುಷಿತ ನೀರು ಸೇವಿಸಿ 40ಕ್ಕೂ ಹೆಚ್ಚು ಜನ ಅಸ್ವಸ್ಥ
ಚಿಕಿತ್ಸೆ ಪಡೆಯುತ್ತಿರುವ ಜನ
TV9 Web
| Edited By: sandhya thejappa|

Updated on: Jul 12, 2021 | 11:38 AM

Share

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಯಾಳಗಿ ಗ್ರಾಮಸ್ಥರು ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದಾರೆ. ನೀರು ಸೇವಿಸಿದ 40ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದು, ವಾಂತಿ ಭೇದಿ ಶುರುವಾಗಿದೆ. ಸದ್ಯ ಗ್ರಾಮಸ್ಥರು ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚರಂಡಿ ನೀರು ಕುಡಿಯುವ ನೀರಿನ ಬಾವಿಗೆ ಸೇರುತ್ತಿದೆ. ಅದೇ ನೀರು ಗ್ರಾಮಸ್ಥರಿಗೆ ನಲ್ಲಿ ಮೂಲಕ ಸರಬರಾಜು ಆಗುತ್ತಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ರೀತಿ ಸಮಸ್ಯೆಯಾಗಿದೆ ಅಂತ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚರಂಡಿ ನೀರು ಗ್ರಾಮಕ್ಕೆ ಸರಬರಾಜು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸಂಪೂರ್ಣ ಹಾಳಾಗಿ ಹೋಗಿದೆ. ಈ ಕಾರಣಕ್ಕೆ ಗ್ರಾಮಸ್ಥರಿಗೆ ಬಾವಿ ನೀರೆ ಗತಿಯಾಗಿದೆ. ಬಾವಿಯ ನೀರು ನಲ್ಲಿ ಮೂಲಕ ಗ್ರಾಮಸ್ಥರ ಮನೆಗಳಿಗೆ ತಲುಪುತ್ತವೆ. ಆದರೆ ಚರಂಡಿ ನೀರು ಬಾವಿಗೆ ಸೇರುವುದರಿಂದ ಅದೆ ನೀರು ನಲ್ಲಿ ಮೂಲಕ ಗ್ರಾಮಸ್ಥರಿಗೆ ಸರಬರಾಜು ಆಗುತ್ತಿದೆ. ಇದರಿಂದ ಜನ ಕೊಳಚೆ ನೀರು ಕುಡಿದು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ ಕಳೆದ ನಾಲ್ಕೈದು ದಿನಗಳಿಂದ ಗ್ರಾಮಸ್ಥರು ಅನಾರೋಗ್ಯಕ್ಕೆ ತುತ್ತಾಗಿ ಒದ್ದಾಡಿದರೂ ನೀರಿನ ವ್ಯವಸ್ಥೆ ಮಾಡುವುದ್ದಕ್ಕೆ ಅಧಿಕಾರಿಗಳು ಮುಂದಾಗಿಲ್ಲ ಅಂತ ಗ್ರಾಮದ ಚಂದಪ್ಪ ಬೆಕ್ಕಿನಾಳ್ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮಕ್ಕೆ ಡಿಎಚ್ಒ ಭೇಟಿ ಪರಿಶೀಲನೆ ಯಾದಗಿರಿ ಡಿಎಚ್ಒ ಡಾ.ಇಂದುಮತಿ ಕಾಮಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಸ್ವಸ್ಥಗೊಂಡು ಆಸ್ಪತ್ರೆಗೆ ಸೇರಿದ್ದವರ ಆರೋಗ್ಯ ವಿಚಾರಿಸಿ ಇದಕ್ಕೆ ಕಾರಣ ಕಲುಷಿತ ನೀರು ಅಂತ ಹೇಳಿದ್ದಾರೆ.

ಇದನ್ನೂ ಓದಿ

ಕುಟಂಬದ ಐದು ತಲೆಮಾರುಗಳನ್ನು ಕಂಡ ವೃದ್ಧೆ; ಯುವಕರನ್ನು ನಾಚಿಸುವಂತಿದೆ 92 ವರ್ಷದ ಅಜ್ಜಿಯ ಉತ್ಸಾಹ

ಮೆಟ್ರೋದಲ್ಲಿ ಕೊವಿಡ್ ನಿಯಮ ಉಲ್ಲಂಘಿಸಿದವರ ವಿರುದ್ದ ಬಿಎಂಆರ್ಸಿಎಲ್ ದಂಡಾಸ್ತ್ರ ಪ್ರಯೋಗ: ನಿತ್ಯ ಎಷ್ಟೆಷ್ಟು ದಂಡ ಸಂಗ್ರಹ?

(More than 40 people become ill after consuming contaminated water in yadgir)

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್