ಬಿಜೆಪಿಯಲ್ಲಿ ಬಂಡಾಯದ ಸೂಚನೆ, ರಾಮಲಿಂಗಾರೆಡ್ಡಿ ಸಂಪರ್ಕದಲ್ಲಿ ಕಾರ್ಪೋರೇಟರ್​ಗಳು

ಬೆಂಗಳೂರು: 10ಕ್ಕೂ ಹೆಚ್ಚು ಬಿಜೆಪಿ ಕಾರ್ಪೋರೇಟರ್​ಗಳು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ. ಅನರ್ಹರ ಕ್ಷೇತ್ರಗಳಲ್ಲಿರುವ 10ಕ್ಕೂ ಹೆಚ್ಚು ಕಾರ್ಪೋರೇಟರ್​ಗಳು, ಮಾಜಿ ಕಾರ್ಪೋರೇಟರ್​ಗಳು ರಾಮಲಿಂಗಾರೆಡ್ಡಿ ಅವರ ಜೊತೆ ಸಂಪರ್ಕದಲ್ಲಿದ್ದಾರೆ. ಕೆಲ ಮಾಜಿ ಕಾರ್ಪೋರೇಟರ್​ಗಳು ರಾಮಲಿಂಗಾರೆಡ್ಡಿ ಜತೆ ಚರ್ಚೆ ನಡೆಸಿದ್ದು,ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಚಿಂತನೆ ನಡೆಸಿದ್ದಾರೆ. ತಮ್ಮ ಕ್ಷೇತ್ರಗಳಲ್ಲಿ ಅನರ್ಹ ಶಾಸಕರು ಟಿಕೆಟ್ ಪಡೆದುಕೊಂಡಿದ್ದಾರೆ. ಕ್ಷೇತ್ರಗಳಲ್ಲಿ ನಾಯಕತ್ವ ಬದಲಾವಣೆಯಾಗಿದೆ. ಈ ಹಿನ್ನೆಲೆ ಮುಂದಿನ ಚುನಾವಣೆಗಳಲ್ಲಿ ಟಿಕೆಟ್ ಸಿಗುವ ಬಗ್ಗೆ […]

ಬಿಜೆಪಿಯಲ್ಲಿ ಬಂಡಾಯದ ಸೂಚನೆ, ರಾಮಲಿಂಗಾರೆಡ್ಡಿ ಸಂಪರ್ಕದಲ್ಲಿ ಕಾರ್ಪೋರೇಟರ್​ಗಳು
ಸಾಧು ಶ್ರೀನಾಥ್​

Updated on: Nov 19, 2019 | 1:00 PM

ಬೆಂಗಳೂರು: 10ಕ್ಕೂ ಹೆಚ್ಚು ಬಿಜೆಪಿ ಕಾರ್ಪೋರೇಟರ್​ಗಳು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ.

ಅನರ್ಹರ ಕ್ಷೇತ್ರಗಳಲ್ಲಿರುವ 10ಕ್ಕೂ ಹೆಚ್ಚು ಕಾರ್ಪೋರೇಟರ್​ಗಳು, ಮಾಜಿ ಕಾರ್ಪೋರೇಟರ್​ಗಳು ರಾಮಲಿಂಗಾರೆಡ್ಡಿ ಅವರ ಜೊತೆ ಸಂಪರ್ಕದಲ್ಲಿದ್ದಾರೆ. ಕೆಲ ಮಾಜಿ ಕಾರ್ಪೋರೇಟರ್​ಗಳು ರಾಮಲಿಂಗಾರೆಡ್ಡಿ ಜತೆ ಚರ್ಚೆ ನಡೆಸಿದ್ದು,ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಚಿಂತನೆ ನಡೆಸಿದ್ದಾರೆ.

ತಮ್ಮ ಕ್ಷೇತ್ರಗಳಲ್ಲಿ ಅನರ್ಹ ಶಾಸಕರು ಟಿಕೆಟ್ ಪಡೆದುಕೊಂಡಿದ್ದಾರೆ. ಕ್ಷೇತ್ರಗಳಲ್ಲಿ ನಾಯಕತ್ವ ಬದಲಾವಣೆಯಾಗಿದೆ. ಈ ಹಿನ್ನೆಲೆ ಮುಂದಿನ ಚುನಾವಣೆಗಳಲ್ಲಿ ಟಿಕೆಟ್ ಸಿಗುವ ಬಗ್ಗೆ ಅನುಮಾನ ಉಂಟಾಗಿದೆ. ಹೀಗಾಗಿ ಕಾರ್ಪೋರೇಟರ್​ಗಳು ರಾಮಲಿಂಗಾರೆಡ್ಡಿ ಜೊತೆ ಚರ್ಚೆ ನಡೆಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ರಾಮಲಿಂಗಾರೆಡ್ಡಿ. ರಾಜಕೀಯ ಅಸ್ತಿತ್ವದ ಪ್ರಶ್ನೆ ಬಂದಾಗ ಇದೆಲ್ಲಾ ಸಹಜ, ಸಮಯ ಬಂದಾಗ ಎಲ್ಲ ವಿಷಯ ಹೇಳ್ತೇನೆ ಎಂದಿದ್ದಾರೆ.

Published On - 7:22 am, Tue, 19 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us