Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಗ್ಯಾರಂಟಿಗೆ ಬಲಿಪಶುಗಳಾಗುತ್ತಿರುವ ಸರಕಾರಿ ಬಸ್ ನಿರ್ವಾಹಕರು: ಶಕ್ತಿ ಯೋಜನೆ ಜಾರಿ ಬಳಿಕ 300 ಜನ ಕಂಡಕ್ಟರ್ಸ್​​​ ಸಸ್ಪೆಂಡ್

ಶಕ್ತಿ ಯೋಜನೆ ಜಾರಿಯದ ಬಳಿಕ ರಾಜ್ಯದಲ್ಲಿ ಇದುವರೆಗೂ ನಾಲ್ಕೂ ನಿಗಮ ಸೇರಿ ಒಟ್ಟು 300 ಕ್ಕೂ ಅಧಿಕ ಮಂದಿ ನಿರ್ವಾಹಕರನ್ನು ಸಾರಿಗೆ ಇಲಾಖೆ ಸಸ್ಪೆಂಡ್ ಮಾಡಿದೆ. ಸರ್ಕಾರದ ಈ ನಡೆಯಿಂದ ಕಂಡಕ್ಟರ್ಸ್​​ ರೋಸಿ ಹೋಗಿದ್ದಾರೆ.

ಸರ್ಕಾರದ ಗ್ಯಾರಂಟಿಗೆ ಬಲಿಪಶುಗಳಾಗುತ್ತಿರುವ ಸರಕಾರಿ ಬಸ್ ನಿರ್ವಾಹಕರು: ಶಕ್ತಿ ಯೋಜನೆ ಜಾರಿ ಬಳಿಕ 300 ಜನ ಕಂಡಕ್ಟರ್ಸ್​​​ ಸಸ್ಪೆಂಡ್
ಸಾಂದರ್ಭಿಕ ಚಿತ್ರ
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ವಿವೇಕ ಬಿರಾದಾರ

Updated on:Oct 07, 2023 | 10:26 AM

ಉಡುಪಿ ಅ.07: ರಾಜ್ಯದಲ್ಲಿ ಶಕ್ತಿ ಯೋಜನೆ (Shakti Yojana) ಜಾರಿಯಾಗಿ ಮೂರು ತಿಂಗಳು ಕಳೆದಿವೆ. ಈ ಯೋಜನೆ ಅಡಿ ಮಹಿಳೆಯರು ಸರ್ಕಾರಿ ಬಸ್​​ಗಳಲ್ಲಿ (Government Bus) ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಉಚಿತ ಪ್ರಯಾಣ ಜಾರಿಯಾಗುತ್ತಿದ್ದಂತೆ ಸಭೆ, ಸಮಾರಂಭ ಮತ್ತು ಪುಣ್ಯಕ್ಷೇತ್ರಗಳಿಗೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದು, ಇದರಿಂದ ನಾಲ್ಕು ನಿಗಮಗಳಿಗೆ ಆದಾಯ ಹೆಚ್ಚಿದೆ. ಕಳೆದ ಮೂರು ತಿಂಗಳಲ್ಲಿ ಕೆಎಸ್​ಆರ್​ಟಿಸಿ (KSRTC) ಬಸ್​ಗಳಲ್ಲಿ 70,73,05,946 ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಮಹಿಳಾ ಪ್ರಯಾಣಿಕರ ಟಿಕೆಟ್​ ಮೌಲ್ಯ 1648,51,39,030 ಆಗಿದೆ. ನಿಗಮಗಳಿಗೆ ಆದಾಯವೇನೋ ಹೆಚ್ಚಿದೆ ಆದರೆ ನಿರ್ವಾಹಕರಿಗೆ (ಕಂಡಕ್ಟರ್​​)ಗಳಿಗೆ ತಲೆಬಿಸಿ ಶುರುವಾಗಿದೆ.

ಹೌದು ಶಕ್ತಿ ಯೋಜನೆ ಜಾರಿಯದ ಬಳಿಕ ಮಹಿಳಾ ಪ್ರಯಾಣಿಕರ ಎಡವಟ್ಟಿನಿಂದ ಮತ್ತು ನಿರ್ವಾಹಕರ ಸ್ವಯಂಕೃತ ತಪ್ಪಿನಿಂದ ರಾಜ್ಯದಲ್ಲಿ ಇದುವರೆಗೂ ನಾಲ್ಕೂ ನಿಗಮ ಸೇರಿ ಒಟ್ಟು 300 ಕ್ಕೂ ಅಧಿಕ ಮಂದಿ ನಿರ್ವಾಹಕರನ್ನು ಸಾರಿಗೆ ಇಲಾಖೆ ಸಸ್ಪೆಂಡ್ ಮಾಡಿದೆ ಎಂದು ಟಿವಿ9 ಡಿಜಿಟಲ್​​ಗೆ ಓರ್ವ ಕೆಎಸ್​ಆರ್​ಟಿಸಿ ಬಸ್​ ಕಂಡಕ್ಟರ್​​​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಶಕ್ತಿ ಯೋಜನೆ: 3 ತಿಂಗಳಲ್ಲಿ ವಾಯವ್ಯ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ 13.20 ಕೋಟಿ ಮಹಿಳೆಯರು ಪ್ರಯಾಣ

ನಿರ್ವಾಹಕರ ಸಸ್ಪೆಂಡ್​​ಗೆ ಕಾರಣವೇನು?

ಶಕ್ತಿ ಯೋಜನೆಯಿಂದ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದ್ದರೂ, ಮಹಿಳೆಯರು ಟಿಕೆಟ್​ ಪಡೆದೇ ಪ್ರಯಾಣಿಸಬೇಕು. ನಿರ್ವಾಹಕ ಮಹಿಳೆಯರಿಗೆ ಅವರು ಪ್ರಯಾಣಿಸುವ ಮಾರ್ಗದ ಟಿಕೆಟ್​ ನೀಡುತ್ತಾರೆ. ಆದರೆ ಮಹಿಳೆ ತಾನು ಹೋಗಬೇಕಾದ ಸ್ಥಳವನ್ನು ತಲುಪದೆ ಮಾರ್ಗ ಮಧ್ಯೆ ಇಳಿದರೆ, ನಿರ್ವಾಹಕನನ್ನು ಸಂಕಷ್ಟಕ್ಕೆ ಸಿಲುಕಿಸುತ್ತದೆ. ಉದಾ: ಒಬ್ಬ ಮಹಿಳೆ ಬೆಂಗಳೂರಿನಲ್ಲಿ ಕೆಎಸ್​ಆರ್​ಟಿಸಿ ಬಸ್​​ ಹತ್ತಿ ಹುಬ್ಬಳ್ಳಿಗೆ ಟಿಕೆಟ್​ ಪಡೆಯುತ್ತಾಳೆ. ಮಾರ್ಗ ಮಧ್ಯೆ ಮಹಿಳೆ ದಾವಣಗೆರೆಯಲ್ಲಿ ಇಳಿಯುತ್ತಾಳೆ.

ನಂತರ ಟಿಕೆಟ್​ ಕಲೆಕ್ಟರ್ ಪರಿಶೀಲನೆಗೆ ಬಂದಾಗ ಮಹಿಳಾ ಪ್ರಯಾಣಿಕ ಇರುವುದಿಲ್ಲ. ಇದರಿಂದ ಅನುಮಾನಗೊಂಡ ಕಲೆಕ್ಟರ್​​ ನಿರ್ವಾಹಕನಿಗೆ “ನೀನು ಇಲಾಖೆಗೆ ಸುಳ್ಳು ಮಾಹಿತಿ ನೀಡುತ್ತಿದ್ದೀಯಾ” ಎಂದು ಇಲಾಖೆಗೆ ವಿಷಯ ತಿಳಿಸುತ್ತಾನೆ. ಆಗ ಮೇಲಾಧಿಕಾರಿಗಳು ನಿರ್ವಾಹಕನನ್ನು ಸಸ್ಪೆಂಡ್​ ಮಾಡುತ್ತಾರೆ.

ಅಲ್ಲದೆ ಕೆಲವು ನಿರ್ವಾಹಕರು ಇನ್ಸೆಂಟಿವ್​ (ಪ್ರೋತ್ಸಾಹಧನ) ಆಸೆಗೆ ಸುಳ್ಳು ಟಿಕೆಟ್​ ಹರಿಯುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಎರಡು ಕಾರಣದಿಂದ ಹೀಗೆ ರಾಜ್ಯಾದ್ಯಂತ ಸಾರಿಗೆ ಇಲಾಖೆ 300ಕ್ಕೂ ಹೆಚ್ಚು ನಿರ್ವಾಹಕರನ್ನು ಸಸ್ಪೆಂಡ್​ ಮಾಡಿದೆ. ಇನ್ನು ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡುತ್ತಿರುವುದಾಗಿ ಆರೋಪಿಸಿ ರಾಜ್ಯ ಸರ್ಕಾರ, ಸಾರಿಗೆ ಇಲಾಖೆಗೆ ಒಂದು ತಿಂಗಳ ಹಿಂದೇ ನೋಟಿಸ್​ ನೀಡಿದೆ.

ಉಡುಪಿಯಲ್ಲಿ ಇದೇ ರೀತಿಯಾದ ಒಂದು ಘಟನೆ ನಡೆದಿದೆ. ಶಿರಸಿಯಿಂದ ಉಡುಪಿಗೆ ಟಿಕೆಟ್ ಪಡೆದು ಮಹಿಳೆ ಹೊರಟಿದ್ದಳು. ಆದರೆ ಮಹಿಳೆ ಭಟ್ಕಳದಲ್ಲೇ ಇಳಿದು ಧರ್ಮಸ್ಥಳದ ಬಸ್ ಹಿಡಿದಿದ್ದರು. ಈ ಬಗ್ಗೆ ನಿರ್ವಾಹಕನಿಗೆ ಕುಂದಾಪುರದಲ್ಲಿ ಗಮನಕ್ಕೆ ಬಂದಿದೆ. ಆಗ ನಿರ್ವಾಹಕ ಧರ್ಮಸ್ಥಳ ಬಸ್​ ನಿರ್ವಾಹಕನ ಸಂಪರ್ಕ ಸಾಧಿಸಿ ಮಹಿಳೆಯನ್ನು ಉಡುಪಿಯಲ್ಲಿ ತಡೆದಿದ್ದಾರೆ. ನಂತರ ನಿರ್ವಾಹಕರು ಮಹಿಳೆಯನ್ನು ತರಾಟೆಗೆ ತಗೆದುಕೊಂಡಿದ್ದಾರೆ. ಒಟ್ಟಾರೆಯಾಗಿ ಸರ್ಕಾರ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ನಿರ್ವಾಹಕರು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:45 am, Sat, 7 October 23

ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ