AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ತಾಯಿ, ಮಗು ಸಜೀವ ದಹನ ಪ್ರಕರಣ: ಸ್ಪೇಷನ್​ ಬೇಲ್​ ಮೇಲೆ ಬೆಸ್ಕಾಂ ಅಧಿಕಾರಿಗಳ ಬಿಡುಗಡೆ

ಬೆಂಗಳೂರು ನಗರದ ವೈಟ್​ಫೀಲ್ಡ್​​​ನ ಕಾಡುಗೋಡಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ನಿನ್ನೆ (ನವೆಂಬರ್ 19) ಬಾಣಂತಿ ಹಾಗೂ 9 ತಿಂಗಳ ಹಸುಗೂಸು ಮೃತಪಟ್ಟಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಬೆಸ್ಕಾಂ ಅಧಿಕಾರಿಗಳು 24 ಗಂಟೆಗೊಳಗೆ ಬಿಡುಗಡೆಯಾಗಿದ್ದಾರೆ.

ಬೆಂಗಳೂರು: ತಾಯಿ, ಮಗು ಸಜೀವ ದಹನ ಪ್ರಕರಣ: ಸ್ಪೇಷನ್​ ಬೇಲ್​ ಮೇಲೆ ಬೆಸ್ಕಾಂ ಅಧಿಕಾರಿಗಳ ಬಿಡುಗಡೆ
ಮೃತ ತಾಯಿ, ಮಗು
TV9 Web
| Edited By: |

Updated on:Nov 20, 2023 | 9:40 AM

Share

ಬೆಂಗಳೂರು, (ನವೆಂಬರ್ 20): ಬೆಂಗಳೂರು ನಗರದ ವೈಟ್​ಫೀಲ್ಡ್​​​ನ ಕಾಡುಗೋಡಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ನಿನ್ನೆ (ನವೆಂಬರ್ 19) ಬಾಣಂತಿ ಹಾಗೂ 9 ತಿಂಗಳ ಹಸುಗೂಸು ಮೃತಪಟ್ಟಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಬೆಸ್ಕಾಂ ಅಧಿಕಾರಿಗಳು ಜಾಮೀನಿನ ಮೇಲೆ ಹೊರಬಂದಿದ್ದಾರೆ. ನಿರ್ಲಕ್ಷ್ಯದ ಆರೋಪದ ಮೇಲೆ ಬೆಸ್ಕಾಂ  ಎಇ ಚೇತನ್‌, ಜೆಇ ರಾಜಣ್ಣ, ಸ್ಟೇಷನ್ ಆಪರೇಟರ್ ಮಂಜು ಸೇರಿದಂತೆ ಐವರನ್ನು ಕಾಡುಗೋಡಿ ಪೊಲೀಸರು ಅರೆಸ್ಟ್ ಮಾಡಿದ್ದರು. ಆದ್ರೆ, ಇದೀಗ ಸ್ಟೇಷನ್ ಬೇಲ್​ ಮೇಲೆ ಬಿಡುಗಡೆ ಮಾಡಲಾಗಿದೆ.

ಕಾಡುಗೋಡಿಯ ಎ.ಕೆ.ಗೋಪಾಲ ಕಾಲೋನಿಯ ನಿವಾಸಿ ಸಂತೋಷ್, ಪತ್ನಿ ಜೊತೆ ತಮ್ಮೂರು ಚೆನ್ನೈಗೆ ಹೋಗಿದ್ದರು. ನಿನ್ನೆ (ನವೆಂಬರ್ 19) ಬೆಳಗ್ಗೆ 5 ಘಂಟೆ ಸುಮಾರಿಗೆ ವಾಪಸ್ಸು ಸಿಲ್ಕ್ ಬೋರ್ಡ್ ಬಳಿ ಇಳಿದು, ಬಿಎಂಟಿಸಿ ಬಸ್ ಹತ್ತಿ ಹೋಫ್​ ಫಾರಂ ಸಿಗ್ನಲ್​ವರೆಗೂ ಬಂದಿದ್ರು. ಮಹಿಳೆ ಸೌಂದರ್ಯ 9 ತಿಂಗಳ ಮಗುವನ್ನ ಎತ್ತಿಕೊಂಡು ಫುಟ್ಪಾತ್​ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಪತಿ ಸಂತೋಷ್ ಫುಟ್ಪಾತ್ ಕೆಳಗೆ ಬರುತ್ತಿದ್ದರು. ಆದ್ರೆ, ಫುಟ್ಪಾತ್​ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಬೆಳಗಿನ ಜಾವ ಮಬ್ಬುಕತ್ತಲಲ್ಲಿ ವಿದ್ಯುತ್ ತಂತಿ ಕಾಣದೆ ಅದರ ಮೇಲೆ ಸೌಂದರ್ಯ ಕಾಲಿಟ್ಟಿದ್ದರು. ಅಷ್ಟೇ, ಸೌಂದರ್ಯ ಮಗು ಜೊತೆಗೆ ಅಲ್ಲೇ ಕುಸಿದು ಬಿದ್ದಿದ್ರು. ಪಕ್ಕದಲ್ಲೇ ಬರುತ್ತಿದ್ದ ಪತಿ ಸಂತೋಷ್​ಗೂ ಶಾಕ್ ಹೊಡೆದಿತ್ತು.

ಇದನ್ನೂ ಓದಿ: ಬೆಂಗಳೂರು: ತಾಯಿ, ಮಗು ಸಜೀವ ದಹನ ಪ್ರಕರಣ, ಬೆಸ್ಕಾಂನ ಐವರು ಸಿಬ್ಬಂದಿ ಅರೆಸ್ಟ್

ದುರಂತ ನಡೆದು ಒಂದು ತಾಸೂ ಕಳೆದರೂ ಸ್ಥಳಕ್ಕೆ ಯಾವೊಬ್ಬ ಅಧಿಕಾರಿಯೂ ಬಂದಿಲ್ಲ. ಹೀಗಾಗಿ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ಸ್ಫೋಟಗೊಂಡಿತು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಆಗಬೇಕು. ಮೃತರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಕಿಡಿಕಾರಿದ್ದರು.

ಕಳೆದ ವರ್ಷ ಟ್ರಾನ್ಸ್ ಫಾರ್ಮರ್ ಸ್ಫೋಟಕ್ಕೆ ಬೆಂಗಳೂರಿನಲ್ಲಿ ಯುವತಿಯೊಬ್ಬಳು ಧಗಧಗಿಸಿ ಹೊತ್ತಿ ಉರಿದಿದ್ದಳು. ಈ ಘೋರ ಘಟನೆ ಬೆಸ್ಕಾಂ ಹೊಣೆಗೇಡಿತನವನ್ನು ಬಯಲುಮಾಡಿತ್ತು. ಇದೀಗ ಮತ್ತೊಂದು ಭೀಕರ ದುರಂತವೇ ನಡೆದುಹೋಗಿದೆ. ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ, ಮಗು ಜೀವಂತವಾಗಿ ಬೆಂದುಹೋಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:34 am, Mon, 20 November 23

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?