AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ತಾಯಿ, ಮಗು ಸಜೀವ ದಹನ ಪ್ರಕರಣ: ಸ್ಪೇಷನ್​ ಬೇಲ್​ ಮೇಲೆ ಬೆಸ್ಕಾಂ ಅಧಿಕಾರಿಗಳ ಬಿಡುಗಡೆ

ಬೆಂಗಳೂರು ನಗರದ ವೈಟ್​ಫೀಲ್ಡ್​​​ನ ಕಾಡುಗೋಡಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ನಿನ್ನೆ (ನವೆಂಬರ್ 19) ಬಾಣಂತಿ ಹಾಗೂ 9 ತಿಂಗಳ ಹಸುಗೂಸು ಮೃತಪಟ್ಟಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಬೆಸ್ಕಾಂ ಅಧಿಕಾರಿಗಳು 24 ಗಂಟೆಗೊಳಗೆ ಬಿಡುಗಡೆಯಾಗಿದ್ದಾರೆ.

ಬೆಂಗಳೂರು: ತಾಯಿ, ಮಗು ಸಜೀವ ದಹನ ಪ್ರಕರಣ: ಸ್ಪೇಷನ್​ ಬೇಲ್​ ಮೇಲೆ ಬೆಸ್ಕಾಂ ಅಧಿಕಾರಿಗಳ ಬಿಡುಗಡೆ
ಮೃತ ತಾಯಿ, ಮಗು
TV9 Web
| Edited By: |

Updated on:Nov 20, 2023 | 9:40 AM

Share

ಬೆಂಗಳೂರು, (ನವೆಂಬರ್ 20): ಬೆಂಗಳೂರು ನಗರದ ವೈಟ್​ಫೀಲ್ಡ್​​​ನ ಕಾಡುಗೋಡಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ನಿನ್ನೆ (ನವೆಂಬರ್ 19) ಬಾಣಂತಿ ಹಾಗೂ 9 ತಿಂಗಳ ಹಸುಗೂಸು ಮೃತಪಟ್ಟಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಬೆಸ್ಕಾಂ ಅಧಿಕಾರಿಗಳು ಜಾಮೀನಿನ ಮೇಲೆ ಹೊರಬಂದಿದ್ದಾರೆ. ನಿರ್ಲಕ್ಷ್ಯದ ಆರೋಪದ ಮೇಲೆ ಬೆಸ್ಕಾಂ  ಎಇ ಚೇತನ್‌, ಜೆಇ ರಾಜಣ್ಣ, ಸ್ಟೇಷನ್ ಆಪರೇಟರ್ ಮಂಜು ಸೇರಿದಂತೆ ಐವರನ್ನು ಕಾಡುಗೋಡಿ ಪೊಲೀಸರು ಅರೆಸ್ಟ್ ಮಾಡಿದ್ದರು. ಆದ್ರೆ, ಇದೀಗ ಸ್ಟೇಷನ್ ಬೇಲ್​ ಮೇಲೆ ಬಿಡುಗಡೆ ಮಾಡಲಾಗಿದೆ.

ಕಾಡುಗೋಡಿಯ ಎ.ಕೆ.ಗೋಪಾಲ ಕಾಲೋನಿಯ ನಿವಾಸಿ ಸಂತೋಷ್, ಪತ್ನಿ ಜೊತೆ ತಮ್ಮೂರು ಚೆನ್ನೈಗೆ ಹೋಗಿದ್ದರು. ನಿನ್ನೆ (ನವೆಂಬರ್ 19) ಬೆಳಗ್ಗೆ 5 ಘಂಟೆ ಸುಮಾರಿಗೆ ವಾಪಸ್ಸು ಸಿಲ್ಕ್ ಬೋರ್ಡ್ ಬಳಿ ಇಳಿದು, ಬಿಎಂಟಿಸಿ ಬಸ್ ಹತ್ತಿ ಹೋಫ್​ ಫಾರಂ ಸಿಗ್ನಲ್​ವರೆಗೂ ಬಂದಿದ್ರು. ಮಹಿಳೆ ಸೌಂದರ್ಯ 9 ತಿಂಗಳ ಮಗುವನ್ನ ಎತ್ತಿಕೊಂಡು ಫುಟ್ಪಾತ್​ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಪತಿ ಸಂತೋಷ್ ಫುಟ್ಪಾತ್ ಕೆಳಗೆ ಬರುತ್ತಿದ್ದರು. ಆದ್ರೆ, ಫುಟ್ಪಾತ್​ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಬೆಳಗಿನ ಜಾವ ಮಬ್ಬುಕತ್ತಲಲ್ಲಿ ವಿದ್ಯುತ್ ತಂತಿ ಕಾಣದೆ ಅದರ ಮೇಲೆ ಸೌಂದರ್ಯ ಕಾಲಿಟ್ಟಿದ್ದರು. ಅಷ್ಟೇ, ಸೌಂದರ್ಯ ಮಗು ಜೊತೆಗೆ ಅಲ್ಲೇ ಕುಸಿದು ಬಿದ್ದಿದ್ರು. ಪಕ್ಕದಲ್ಲೇ ಬರುತ್ತಿದ್ದ ಪತಿ ಸಂತೋಷ್​ಗೂ ಶಾಕ್ ಹೊಡೆದಿತ್ತು.

ಇದನ್ನೂ ಓದಿ: ಬೆಂಗಳೂರು: ತಾಯಿ, ಮಗು ಸಜೀವ ದಹನ ಪ್ರಕರಣ, ಬೆಸ್ಕಾಂನ ಐವರು ಸಿಬ್ಬಂದಿ ಅರೆಸ್ಟ್

ದುರಂತ ನಡೆದು ಒಂದು ತಾಸೂ ಕಳೆದರೂ ಸ್ಥಳಕ್ಕೆ ಯಾವೊಬ್ಬ ಅಧಿಕಾರಿಯೂ ಬಂದಿಲ್ಲ. ಹೀಗಾಗಿ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ಸ್ಫೋಟಗೊಂಡಿತು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಆಗಬೇಕು. ಮೃತರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಕಿಡಿಕಾರಿದ್ದರು.

ಕಳೆದ ವರ್ಷ ಟ್ರಾನ್ಸ್ ಫಾರ್ಮರ್ ಸ್ಫೋಟಕ್ಕೆ ಬೆಂಗಳೂರಿನಲ್ಲಿ ಯುವತಿಯೊಬ್ಬಳು ಧಗಧಗಿಸಿ ಹೊತ್ತಿ ಉರಿದಿದ್ದಳು. ಈ ಘೋರ ಘಟನೆ ಬೆಸ್ಕಾಂ ಹೊಣೆಗೇಡಿತನವನ್ನು ಬಯಲುಮಾಡಿತ್ತು. ಇದೀಗ ಮತ್ತೊಂದು ಭೀಕರ ದುರಂತವೇ ನಡೆದುಹೋಗಿದೆ. ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ, ಮಗು ಜೀವಂತವಾಗಿ ಬೆಂದುಹೋಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:34 am, Mon, 20 November 23

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ