Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಠಾಣೆ ಮೇಟ್ಟಿಲೇರಿದ ತಾಯಿ, ಮಗಳ ಜಗಳ; ನಾ ಸತ್ರೂ ತಾಯಿಯ ಜೊತೆ ಇರಲ್ಲ ಅಂತಿರುವ ಮಗಳು

ನಾಡಿದ್ದು ಎಸ್‌ಎಸ್ಎಲ್‌ಸಿ‌ ಪರೀಕ್ಷೆ ಬರೆಯಬೇಕಿದ್ದ ಬಾಲಕಿಯೇ ತಾಯಿಯ ವಿರುದ್ಧ ಹೀಗೆ ರಂಪಾಟ ಮಾಡುತ್ತಿದ್ದಾಳೆ. ಕಳೆದ 3 ತಿಂಗಳಿಂದ ಮನೆಬಿಟ್ಟು ಚಿಕ್ಕಮ್ಮನ ಮನೆಯಲ್ಲಿದ್ದ ಬಾಲಕಿ ಈಗಲೂ ತಾಯಿಯ ವಿರುದ್ಧ ಮಾತನಾಡಿದ್ದಾಳೆ.

ಪೊಲೀಸ್ ಠಾಣೆ ಮೇಟ್ಟಿಲೇರಿದ ತಾಯಿ, ಮಗಳ ಜಗಳ; ನಾ ಸತ್ರೂ ತಾಯಿಯ ಜೊತೆ ಇರಲ್ಲ ಅಂತಿರುವ ಮಗಳು
ಪೊಲೀಸ್ ಠಾಣೆ ಮೇಟ್ಟಿಲೇರಿದ ತಾಯಿ, ಮಗಳ ಜಗಳ
Follow us
TV9 Web
| Updated By: ganapathi bhat

Updated on: Jul 17, 2021 | 5:24 PM

ಯಾದಗಿರಿ: ಇಲ್ಲಿ ಮನೆಯಲ್ಲಿ ಸಾಮಾನ್ಯವಾಗಿ ನಡೆಯಬಹುದಾದ ತಾಯಿ ಮಗಳ ಜಗಳವೊಂದು ಪೊಲೀಸ್ ಠಾಣೆ ಮೆಟ್ಟಿಲೇರಿದೆ. ನಗರದ ಶಹಾಪುರ ಪೊಲೀಸ್ ಠಾಣೆಯವರೆಗೂ ಸಾಗಿರುವ ಜಗಳ, ತಾಯಿ- ಮಗಳ ಹೈಡ್ರಾಮಾ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಮಗಳು ಈ ಮೊದಲೇ, ಹೆತ್ತ ತಾಯಿ ಕೊಲೆ ಮಾಡ್ತಾಳೆ ಎಂದು ಆರೋಪಿಸಿ ಮನೆಬಿಟ್ಟು ಬಂದಿದ್ದಳು. ಇದೀಗಲೂ ಮಗಳು ತಾನು ಸತ್ರೂ ತಾಯಿಯ ಜೊತೆ ಇರಲ್ಲ ಎಂದು ಹೇಳುತ್ತಿದ್ದಾಳೆ.

ಹಾಗಂತ ಮಗಳು ಬಹಳ ದೊಡ್ಡವಳೇನೂ ಅಲ್ಲ. ನಾಡಿದ್ದು ಎಸ್‌ಎಸ್ಎಲ್‌ಸಿ‌ ಪರೀಕ್ಷೆ ಬರೆಯಬೇಕಿದ್ದ ಬಾಲಕಿಯೇ ತಾಯಿಯ ವಿರುದ್ಧ ಹೀಗೆ ರಂಪಾಟ ಮಾಡುತ್ತಿದ್ದಾಳೆ. ಕಳೆದ 3 ತಿಂಗಳಿಂದ ಮನೆಬಿಟ್ಟು ಚಿಕ್ಕಮ್ಮನ ಮನೆಯಲ್ಲಿದ್ದ ಬಾಲಕಿ ಈಗಲೂ ತಾಯಿಯ ವಿರುದ್ಧ ಮಾತನಾಡಿದ್ದಾಳೆ. ನಾ ಸತ್ತರೂ ತಾಯಿ ಜೊತೆ ಇರಲ್ಲ ಎಂದು ಹಠ ಹಿಡಿದಿದ್ದಾಳೆ.

ತಾಯಿ, ಮಗಳ ಮಧ್ಯೆ ಜಗಳದಿಂದ‌ ಬೇಸತ್ತಿದ್ದ ಪೊಲೀಸರು, ಬಾಲಕಿಯನ್ನು ಬಾಲ ಮಂದಿರಕ್ಕೆ ಸೇರಿಸಿದ್ದರು. ಬಳಿಕ ಮಗಳನ್ನ ಮನೆಗೆ ಕರೆದುಕೊಂಡು ಹೋಗಲು ಅಧಿಕಾರಿಗಳ ಮುಂದೆ ತಾಯಿ ಕಣ್ಣೀರು ಹಾಕಿದ್ದಳು. ಪೊಲೀಸ್ ಠಾಣೆಯಲ್ಲೇ ತಾಯಿ ಸರೋಜಾ ಕಣ್ಣೀರು ಹಾಕಿ ಅಳಲು ತೋಡಿಕೊಂಡಿದ್ದಳು. ಶಹಾಪುರ ತಾಲೂಕಿನ ಬಸವಂತಪುರ ಗ್ರಾಮದ ನಿವಾಸಿ ತಾಯಿ ಮಗಳ ನಡುವೆ ಹೀಗೆ ಹೈಡ್ರಾಮಾ ಏರ್ಪಟ್ಟಿದೆ.

ನನ್ನ ಮನೆಗೆ ಕರೆದುಕೊಂಡು ಹೋಗಿ ಆಸ್ತಿ ಮಾರಾಟ ಮಾಡ್ತಾಳೆ. ಜಮೀನು ಮಾರಿ ನನಗೆ ಕೊಲೆ ಮಾಡ್ತಾಳೆ ಎಂದು ಪುತ್ರಿ ಆರೋಪ ಮಾಡಿದ್ದಾಳೆ. 12 ಎಕರೆ ಜಮೀನು ಹೊಂದಿರುವ ಬಾಲಕಿ ತಾಯಿ ಸರೋಜಾ ಬಳಿಕ ಮಗಳನ್ನು ಕೊಲೆ ಮಾಡ್ತಾಳೆ ಎಂದು ಆರೋಪಿಸಿದ್ದಾಳೆ. ಆದರೆ, ಪುತ್ರಿ, ಗಂಡು ಮಕ್ಕಳಿಬ್ಬರನ್ನು ಪೋಷಿಸ್ತಿರುವ ವಿಧವೆ ಸರೋಜಾ ಹೀಗೆ ಮಗಳನ್ನು ಕೊಲೆ ಮಾಡೋದು ಯಾಕೆ? ಮಗಳು ಆ ರೀತಿ ಹೇಳಿಕೆ ಕೊಟ್ಟಿರುವುದು ಯಾಕೆ ಎಂದು ಇನ್ನಷ್ಟೇ ತಿಳಿಯಬೇಕಿದೆ.

ಇದನ್ನೂ ಓದಿ: ಯಾದಗಿರಿಯಲ್ಲಿ ಕಲುಷಿತ ನೀರು ಸೇವಿಸಿ 40ಕ್ಕೂ ಹೆಚ್ಚು ಜನ ಅಸ್ವಸ್ಥ

ಯಾದಗಿರಿಯಲ್ಲಿ ಡಿಸೇಲ್ ಕಳವು; 30 ಮೀಟರ್ ದೂರದಿಂದಲೇ 5 ಸಾವಿರ ಲೀಟರ್ ಡಿಸೇಲ್ ಕಳ್ಳತನ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ