AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಮೃತಪಟ್ಟ ಪತಿ, ಅತ್ತೆ.. ಖಿನ್ನತೆಗೆ ಒಳಗಾಗಿ ತಾಯಿ-ಮಗ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಮೃತ ರೇಖಾ ಪತಿ ಶಿವಕುಮಾರ್ 6 ತಿಂಗಳ ಹಿಂದೆ ಕೊರೊನಾದಿಂದ ಮೃತಪಟ್ಟಿದ್ದರು. ಅದಾದ ಬಳಿಕ ರೇಖಾ ಅತ್ತೆಯೂ ಕೂಡ ಕೊರೊನಾಗೆ ಬಲಿಯಾಗಿದ್ದರು. ಮನೆಯಲ್ಲಿ ಇಬ್ಬರ ಸಾವಿನಿಂದ ಖಿನ್ನತೆಗೊಳಗಾಗಿದ್ದ ರೇಖಾ ಮತ್ತು ಮಗ ಮನೋಜ್ ಇಬ್ಬರೂ ಏಪ್ರಿಲ್ 16ರಂದು ಬೈರನಾಯಕನಹಳ್ಳಿ ವ್ಯಾಪ್ತಿಯಲ್ಲಿ ಬೆಂಗಳೂರು-ಹುಬ್ಬಳ್ಳಿ ಮಾರ್ಗದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೊರೊನಾದಿಂದ ಮೃತಪಟ್ಟ ಪತಿ, ಅತ್ತೆ.. ಖಿನ್ನತೆಗೆ ಒಳಗಾಗಿ ತಾಯಿ-ಮಗ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
ರೇಖಾ ಮತ್ತು ಶಿವಕುಮಾರ್
ಆಯೇಷಾ ಬಾನು
|

Updated on:Apr 18, 2021 | 3:54 PM

Share

ಬೆಂಗಳೂರು: ತಾಯಿ ಮತ್ತು ಮಗ ಇಬ್ಬರೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಮತ್ತಷ್ಟು ಮಾಹಿತಿ ಲಭ್ಯವಾಗಿದೆ. ಅತ್ತೆ ಹಾಗೂ ಪತಿಯ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ತಾಯಿ ಮತ್ತು ಮಗ ಇಬ್ಬರೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು ಎಂಬ ಮಾಹಿತಿ ಸಿಕ್ಕಿದೆ. ಏಪ್ರಿಲ್ 16ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೈರನಾಯಕನಹಳ್ಳಿ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ತಾಯಿ ರೇಖಾ(40), ಮನೋಜ್(22)ಮೃತ ದುರ್ದೈವಿಗಳು.

ಕಳೆದ ವರ್ಷ ಮಾರ್ಚ್ ತಿಂಗಳ‌ ಕೊನೆಯಲ್ಲಿ ಕೊರೊನಾ ಮಹಾಮಾರಿ ನಮ್ಮ ದೇಶಕ್ಕೆ ಅಪ್ಪಳಿಸಿತ್ತು, ಈ ಕೊರೊನಾದಿಂದ ಸಾಕಷ್ಟು ಸಾವು ನೋವುಗಳು ಸಂಭವಿಸಿತ್ತು. ಅದೆಷ್ಟೋ ಜನ ವಲಸೆ ಕಾರ್ಮಿಕರು ಕೊರೊನಾದಿಂದ ತಮ್ಮ ಊರುಗಳಿಗೆ ಹುಳೆ ಹೊರಟು ಹೋದ್ರು, ಇದೇ ಕೊರೊನಾ‌ದಿಂದ ಈಗ ಮತ್ತೊಂದು ಮನ ಮಿಡಿಯುವ ಘಟನೆ ನಡೆದಿದೆ.

6 ತಿಂಗಳ ಅವದಿಯಲ್ಲಿ ಕಂಟ್ರಾಕ್ಟರ್ ಹೆಂಡತಿ ಹಾಗೂ ಮಗ ಆತ್ಮಹತ್ಯೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೈರನಾಯಕನಹಳ್ಳಿ ಬಳಿ, ಎರಡು ಮೃತ ದೇಹಗಳು ಪತ್ತೆಯಾಗಿದ್ದವು. ಗುರುತು ಪತ್ತೆ ಹಚ್ಚಿದಾಗ ಇವರು ಬೆಂಗಳೂರಿನ‌ ಹೆಸರಘಟ್ಟ ರಸ್ತೆಯಲ್ಲಿನ ಸೋಮಶೆಟ್ಟಿಹಳ್ಳಿ ನಿವಾಸಿಗಳಾದ 37 ವರ್ಷದ ತಾಯಿ ರೇಖಾ ಹಾಗೂ 21 ವರ್ಷದ ಮಗ ಮನೋಜ್ ಎಂದು ತಿಳಿದು ಬಂದಿತ್ತು. ಮನೋಜ್ ನಿಟ್ಟೆ ಹೆಸರಘಟ್ಟ ರಸ್ತೆಯ ಕಾಲೇಜ್​ನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿ. ರೇಖಾ ಮನೆಯಲ್ಲಿ ಇರುತ್ತಿದ್ದರು. ಇವರಿಬ್ಬರೂ ಮನನೊಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Corona Death

ತಾಯಿ ರೇಖಾ ಮತ್ತು ಮಗ ಮನೋಜ್

ಇಡೀ ಊರಿಗೆ ಊರೆ ಕೈ ಎತ್ತಿ ಮುಗಿಯುತ್ತಿದ್ದ ವ್ಯಕ್ತಿ ಶಿವಕುಮಾರ್, ಶಿವಣ್ಣ ಎಂದೆ ಊರಿನಲ್ಲಿ ಖ್ಯಾತಿ ಪಡೆದಿದ್ದರು. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಕೊವಿಡ್ ಸೋಂಕಿಗೆ ತುತ್ತಾಗಿ ಅಕ್ಟೋಬರ್ 20 ರಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಶಿವಣ್ಣ ಸಾವನ್ನಪ್ಪಿದ 9 ದಿನದ ನಂತರ ಆತನ ತಾಯಿ ಶಿವಾಂಬಿಕೆ ಸಹ ಮಹಾಮಾರಿ ಕೊರೊನಾಗೆ ಸಾವನ್ನಪ್ಪಿದ್ದರು. ಬಿಲ್ಡಿಂಗ್ ಕಾಂಟ್ರಾಕ್ಟರ್ ಆಗಿದ್ದ ಶಿವಕುಮಾರ್ ಆರ್ಥಿಕವಾಗಿ ಸಬಲರಾಗೆ ಇದ್ರು, ಮಗ ಮನೋಜ್ ಹೆಸರಿನಲ್ಲಿ ಮನೋಜ್ ರೆಸಿಡೆನ್ಸಿ ಎಂದು ಅಪಾರ್ಟ್ಮೆಂಟ್ ಕಟ್ಟಿದ್ದು, ಕೆಲ ಉದ್ಯಮಗಳನ್ನ ಸಹ ನಡೆಸುತ್ತಿದ್ದರು. ಓಡಾಡೋಕೆ ಬುಲೆಟ್ ಬೈಕ್, ಇನ್ನೋವಾ ಕಾರು, ಒಳ್ಳೆ ಆದಾಯ ಎಲ್ಲಾ ಇತ್ತು. ಎರಡು ಕೋಟಿ ಬೆಲೆಬಾಳುವ ಮನೆಯಲ್ಲಿ ಸುಖವಾಗಿದ್ದ ಕುಟುಂಬ ತಿಂಗಳಿಗೆ 5ಲಕ್ಷ ಬಾಡಿಗೆ ಪಡೆಯುತ್ತಿತ್ತು. ಆದ್ರೆ ಸುಖಿ ಜೀವನ ಸಾಗಿಸುತ್ತಿದ್ದ ಈ ಕುಟುಂಬದ ಬಾಳಲ್ಲಿ ಕೊರೊನ ಬಿರುಗಾಳಿ ಎಬ್ಬಿಸಿ ಪತಿ ಶಿವಣ್ಣ ಹಾಗೂ ಅತ್ತೆ ಶಿವಾಂಬಿಕೆಯನ್ನು ರೇಖಾ ಕಳೆದುಕೊಂಡಿದ್ದಾರೆ. ಈ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ರೇಖಾ ಹಾಗೂ ಮಗ ಮನೋಜ್ ಮೂರು ದಿನಗಳ‌ ಹಿಂದೆ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೊರೊನಾ ಮಹಾಮಾರಿಗೆ ಒಂದು ಕುಟುಂಬದ ನಾಲ್ಕು ಜನ ಇಹಲೋಕ ತ್ಯಜಿಸಿದ್ದು ಶಿವಕುಮಾರ್ ಮಗಳು ಮಾತ್ರ ಅನಾಥರಾಗಿದ್ದಾರೆ. ಈ ಕೋವಿಡ್ ಮಾರಿಗೆ ಎಷ್ಟು ಹಣ ಆಸ್ತಿ ಇದ್ದರು ಜೀವ ಮಾತ್ರ ಉಳಿಯೋದಿಲ್ಲ ಎಂಬುದು ಈ ಹೃದಯಾ ವಿದ್ರಾವಕ ಘಟನೆಯಿಂದ ತಿಳಿದು ಬಂದಿದ್ದು, ಜೀವ ಇದ್ದರೆ ಜೀವನ ಅಂತಾ ಜನ ಮುಂಜಾಗೃತ ಕ್ರಮಗಳನ್ನ ಅನುಸರಿಬೇಕಾಗಿದೆ.

ಇದನ್ನೂ ಓದಿ: ಸುಶಾಂತ್ ರೀತಿ ಕಾರ್ತಿಕ್ ಆರ್ಯನ್​ಗೂ ಆತ್ಮಹತ್ಯೆ ಮಾಡಿಕೊಳ್ಳುವಂತೆ ಒತ್ತಾಯಿಸಬೇಡಿ; ಕರಣ್​​​ಗೆ ಕಂಗನಾ ಛೀಮಾರಿ

Published On - 3:41 pm, Sun, 18 April 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!