ಅಮ್ಮ, ಮಗನ ದೂರ ಮಾಡಿದ ಕೊರೊನಾ; ಮಗನಿಗೆ ತಾಯಿಯ ಸಾವಿನ ಸುದ್ದಿ ಹೇಳದೆ ಅಂತ್ಯಕ್ರಿಯೆ ನೆರವೇರಿಸಿದ ಕುಟುಂಬಸ್ಥರು

ತಾಯಿ ಮತ್ತು ಮಗನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಚಿಕಿತ್ಸೆಗಾಗಿ ಜಿಎಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಉಸಿರಾಟದ ಸಮಸ್ಯೆಯಿಂದ ತಾಯಿ ನಿನ್ನೆ ಕೊನೆಯುಸಿರೆಳೆದಿದ್ದಾರೆ. ತಾಯಿ ಸಾವನ್ನಪ್ಪಿರುವ ಮಾಹಿತಿಯನ್ನು ಕುಟುಂಬಸ್ಥರು ಮಗನಿಗೆ ತಿಳಿಸಿಲ್ಲ.

ಅಮ್ಮ, ಮಗನ ದೂರ ಮಾಡಿದ ಕೊರೊನಾ; ಮಗನಿಗೆ ತಾಯಿಯ ಸಾವಿನ ಸುದ್ದಿ ಹೇಳದೆ ಅಂತ್ಯಕ್ರಿಯೆ ನೆರವೇರಿಸಿದ ಕುಟುಂಬಸ್ಥರು
ಪ್ರಾತಿನಿಧಿಕ ಚಿತ್ರ
Follow us
|

Updated on: Apr 24, 2021 | 12:45 PM

ಬೆಂಗಳೂರು: ಬಾಳಿ ಬದುಕಬೇಕಾದ ಅದೆಷ್ಟೋ ಜೀವಿಗಳು ಮಹಾಮಾರಿ ಕೊರೊನಾದಿಂದ ಸಾವನ್ನಪ್ಪಿವೆ. ಜೊತೆಗೆ ಸಾವನ್ನಪ್ಪುತ್ತಲೇ ಇವೆ. ತಂದೆ, ತಾಯಿ, ಮಕ್ಕಳು, ಸಹೋದರರು, ಸ್ನೇಹಿತರ ಸಾವನ್ನು ಅರಗಿಸಿಕೊಳ್ಳದೆ ಪ್ರತಿ ಕ್ಷಣವೂ ಬದುಕಿದ್ದು, ಸತ್ತಂತಾಗಿದೆ. ಇದೇ ರೀತಿ ಮನ ಕಲಕುವ ಘಟನೆಯೊಂದು ಇದೀಗ ನಡೆದಿದೆ. ಕೊರೊನಾ ಎಂಬ ಮಹಾಮಾರಿ ಸೋಂಕು ಅಮ್ಮ ಮತ್ತು ಮಗನ ದೂರ ಮಾಡಿದೆ. ಕೊರೊನಾದಿಂದ ಸಾವನ್ನಪ್ಪಿರುವ ತಾಯಿಯ ನಿಧನದ ಸುದ್ದಿ ಬಗ್ಗೆ ಮಗನಿಗೆ ತಿಳಿಸದೆ ಕುಟುಂಬಸ್ಥರು ಅಂತ್ಯಕ್ರಿಯೆ ನೆರವೇರಿಸುತ್ತಿದ್ದಾರೆ.

ತಾಯಿ ಮತ್ತು ಮಗನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಚಿಕಿತ್ಸೆಗಾಗಿ ಜಿಎಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಉಸಿರಾಟದ ಸಮಸ್ಯೆಯಿಂದ ತಾಯಿ ನಿನ್ನೆ ಕೊನೆಯುಸಿರೆಳೆದಿದ್ದಾರೆ. ತಾಯಿ ಸಾವನ್ನಪ್ಪಿರುವ ಮಾಹಿತಿಯನ್ನು ಕುಟುಂಬಸ್ಥರು ಮಗನಿಗೆ ತಿಳಿಸಿಲ್ಲ. ಅಮ್ಮ ಹೇಗಿದ್ದಾರೆಂದು ಕರೆ ಮಾಡಿ ಕೇಳುತ್ತಿರುವ ಪುತ್ರನಿಗೆ ಏನನ್ನೂ ಹೇಳಲಾಗದೆ ಕುಟುಂಬಸ್ಥರು ಸಂಕಟ ಎದುರಾಗಿದೆ.

32 ವರ್ಷದ ಮಗನಿಗೆ ಉಸಿರಾಟದ ಸಮಸ್ಯೆ ಹಿನ್ನೆಲೆ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅಮ್ಮನ ಮೃತದೇಹ ಸುಮನಹಳ್ಳಿ ಚಿತಾಗಾರದಲ್ಲಿ ಕುಟುಂಬಸ್ಥರು ಅಂತ್ಯಕ್ರಿಯೆ ನಡೆಸುತ್ತಿರುವ ಕುಟುಂಬಸ್ಥರು ತಾಯಿ, ಮಗನ ಪರಿಸ್ಥಿತಿ ಕಂಡು ಕಣ್ಣೀರಿಡುತ್ತಿದ್ದಾರೆ.

ಇದನ್ನೂ ಓದಿ

ಅಜ್ಜ ಅಜ್ಜಿ ನೆನಪಿಗಾಗಿ ಬಸ್ ನಿಲ್ದಾಣ ನಿರ್ಮಿಸಿದ ಮೊಮ್ಮಗ; ವ್ಯಕ್ತಿಯ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ

ಗರ್ಭಾವಸ್ಥೆಯಲ್ಲೂ ರಸ್ತೆಗಿಳಿದು ಕಾರ್ಯ ನಿರ್ವಹಿಸಿದ ಡಿಎಸ್​ಪಿ ಶಿಲ್ಪಾ ಸಾಹುಗೆ ಎಲ್ಲೆಡೆ ಮೆಚ್ಚುಗೆ

(Mother died death due to Covid 19 and family has not informed son about death of mother)

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ