AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಳಿ ಮಕ್ಕಳಿಗೆ ಆ್ಯಂಬುಲೆನ್ಸ್‌ನಲ್ಲೇ ಜನ್ಮ ನೀಡಿದ ತಾಯಿ; ಚಾಲಕರ ಸಮಯಪ್ರಜ್ಞೆಯಿಂದ ಸೂಸೂತ್ರ ಹೆರಿಗೆ

ತಾಯಿ ಮಕ್ಕಳಿಬ್ರೂ ಕೂಡ ಆರೋಗ್ಯವಾಗಿದ್ದು, ಗಾದಿಗನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 108 ಚಾಲಕ ಸುರೇಶ್ ಕೆ. ತಂತ್ರಜ್ಞ ಸುರೇಶ್ ಎಸ್. ಕೆ. ಇವರ ಸಮಯಪ್ರಜ್ಞೆಯಿಂದ ಸೂಸೂತ್ರವಾಗಿ ಹೆರಿಗೆ ಮಾಡಲಾಗಿದೆ. 

ಅವಳಿ ಮಕ್ಕಳಿಗೆ ಆ್ಯಂಬುಲೆನ್ಸ್‌ನಲ್ಲೇ ಜನ್ಮ ನೀಡಿದ ತಾಯಿ; ಚಾಲಕರ ಸಮಯಪ್ರಜ್ಞೆಯಿಂದ ಸೂಸೂತ್ರ ಹೆರಿಗೆ
ಆ್ಯಂಬುಲೆನ್ಸ್‌ನಲ್ಲೇ ಅವಳಿ ಮಕ್ಕಳಿಗೆ ಜನ್ಮ.
TV9 Web
| Edited By: |

Updated on:Mar 13, 2022 | 10:37 AM

Share

ವಿಜಯನಗರ: ಆ್ಯಂಬುಲೆನ್ಸ್‌ (ambulance) ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿರುವಂತಹ ಘಟನೆ ನಡೆದಿದೆ. ಹೊಸಪೇಟೆ ತಾಲೂಕಿನ ಕೋಟಗಿನಾಳ್ ಗ್ರಾಮದ ಶಶಿಕಲಾ ಒಂದು ಗಂಡು ಮತ್ತೊಂದು ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ. ಕಮಲಾಪುರ ಆಸ್ಪತ್ರೆಯ ಆ್ಯಂಬುಲೆನ್ಸ್‌ ಸಿಬ್ಬಂದಿಯಿಂದ ಶಶಿಕಲಾಗೆ ಹೆರಿಗೆ ಮಾಡಲಾಗಿದೆ. ತಾಯಿ ಮಕ್ಕಳಿಬ್ರೂ ಕೂಡ ಆರೋಗ್ಯವಾಗಿದ್ದು, ಗಾದಿಗನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 108 ಚಾಲಕ ಸುರೇಶ್ ಕೆ. ತಂತ್ರಜ್ಞ ಸುರೇಶ್ ಎಸ್. ಕೆ. ಇವರ ಸಮಯಪ್ರಜ್ಞೆಯಿಂದ ಸೂಸೂತ್ರವಾಗಿ ಹೆರಿಗೆ ಮಾಡಲಾಗಿದೆ.

ಮಹಿಳಾ ದಿನಾಚರಣೆ ಪ್ರಯುಕ್ತ ಬೈಕ್ ರ್ಯಾಲಿ:

ವಿಶೇಷ ಸಂಪ್ರದಾಯಕ ಉಡುಪಿನೊಂದಿಗೆ ಮಹಿಳೆಯರು ಬೈಕ್ ರ್ಯಾಲಿ ಮಾಡಿದ್ದಾರೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಮಹಿಳಾ ದಿನಾಚರಣೆ ಪ್ರಯುಕ್ತ ಬೈಕ್ ರ್ಯಾಲಿ ಆಯೋಜನೆ ಮಾಡಿದ್ದು, ಚಾಮರಾಜಪೇಟೆಯ ಶೃಂಗೇರಿ ಶಂಕರ‌ ಮಠದಿಂದ ಆರಂಭವಾದ ಬೈಕ್ ರ್ಯಾಲಿ, ಬನಶಂಕರಿ 2ನೆ ಹಂತದ ಬಸವನಗುಡಿ ಮಹಿಳಾ ಪೊಲೀಸ್ ಠಾಣೆವರೆಗೆ ನಡೆಯಲಿದೆ. ಶಾಸಕ ಉದಯ್ ಗರುಡಚಾರ್ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಅಶೋಕ್ ಹಾರ್ನಳ್ಳಿ, ಡಾ.‌ವಿಜಯ್ ಲಕ್ಷ್ಮಿ ಅವರಿಂದ ಬೈಕ್ ರ್ಯಾಲಿಗೆ ಚಾಲನೆ ನೀಡಿದ್ದು, ಸುಮಾರು 100ಕ್ಕೂ ಹೆಚ್ಚು ಮಹಿಳೆಯರು ಬೈಕ್ ರ್ಯಾಲಿಯಲ್ಲಿ ಭಾಗವಹಿಸಿದ್ದಾರೆ.

ಡೀಸೆಲ್ ಕಳ್ಳನ ಮೇಲೆ ಗುಂಡು ಹಾರಿಸಿದ ಪೊಲೀಸರು: ಡೀಸೆಲ್ ಕಳ್ಳನ ಮೇಲೆ ಬೆಂಗಳೂರಿನ ಜಿಗಣಿ ಠಾಣೆ ಪೊಲೀಸರು ಗುಂಡು ಹಾರಿಸಿದ್ದಾರೆ. ಶ್ರೀನಿವಾಸ್ ಅಲಿಯಾಸ್ ರಾಜು ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಜಿಗಣಿಯ ಡಿಎಲ್‌ಎಫ್ ಬಳಿ ಘಟನೆ ನಡೆದಿದೆ. ಆರೋಪಿ ರಸ್ತೆಬದಿ ನಿಲ್ಲಿಸಿದ್ದ ವಾಹನಗಳಲ್ಲಿ ಡೀಸೆಲ್ ಕದಿಯುತಿದ್ದ. ಆರೋಪಿಗಳನ್ನ ಬಂಧಿಸುವ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿದ್ದರು. ಈ ವೇಳೆ ಒಬ್ಬ ಆರೋಪಿಗೆ ಪೊಲೀಸರು ಗುಂಡು ಹಾರಿಸಿ, ಇಬ್ಬರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ:

ಮಮತಾ ಬ್ಯಾನರ್ಜಿ ಪಕ್ಕಾ​ ಬಿಜೆಪಿಯ ಏಜೆಂಟ್​; ನಮ್ಮೊಂದಿಗೆ ವಿಲೀನವಾಗಿ ಎಂದ ದೀದಿಗೆ ಕಾಂಗ್ರೆಸ್​ ತಿರುಗೇಟು

ಮಾರಿಯುಪೋಲ್ ಹೆರಿಗೆ ಆಸ್ಪತ್ರೆಯು ಉಕ್ರೇನಲ್ಲಿ ಧ್ವಂಸಗೊಂಡಿರುವ ಮೂರನೇ ಆಸ್ಪತ್ರೆಯಾಗಿದೆ: ವಿಶ್ವಸಂಸ್ಥೆ

Published On - 10:27 am, Sun, 13 March 22

Follow Us
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು