ಪಶ್ಚಿಮ ಘಟ್ಟದ ಮೂಲಕ ಹಾದು ಹೋಗುವ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಭೀತಿ ಮತ್ತು ಆತಂಕದ ಛಾಯೆ

Updated on: May 31, 2025 | 7:28 PM

ಪಶ್ಚಿಮ ಘಟ್ಟದ ಸಾಲಿನಲ್ಲಿರುವ ಚಾರ್ಮಾಡಿ ಘಾಟ್ ಚಿಕ್ಕಮಗಳೂರು ಮತ್ತು ಮಂಗಳೂರು ನಡುವಿನ ಸಂಪರ್ಕ ರಸ್ತೆಯಾಗಿದೆ. ಪಶ್ಚಿಮ ಘಟ್ಟಗಳಲ್ಲಿ ಕಳೆದ 20 ದಿನಗಳಿಂದ ಒಂದೇ ಸಮನೆ ಮಳೆಯಾಗುತ್ತಿರುವುದರಿಂದ ಗುಡ್ಡ ಕುಸಿತದ ಆತಂಕ ದಿನೇ ದೀನೇ ಹೆಚ್ಚುತ್ತಿದೆ. ಈ ರಸ್ತೆಯಲ್ಲಿ ಓಡಾಡುವ ಜನ ಮತ್ತು ವಾಹನ ಸವಾರರು ಅಕ್ಷರಶಃ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಪಯಣಿಸುತ್ತಿದ್ದಾರೆ.

ಚಿಕ್ಕಮಗಳೂರು, ಮೇ 31: ಪ್ರತಿ ಮಳೆಗಾಲದಲ್ಲಿ ಚಾರ್ಮಾಡಿ ಘಾಟ್ ಚರ್ಚೆಯ ವಿಷಯವಾಗುತ್ತಿದೆ. ಕಳೆದ ವರ್ಷ ನಡೆದ ಘೋರ ದುರಂತ ಈಗಲೂ ಕನ್ನಡಿಗರನ್ನು ಬೆವರುವಂತೆ ಮಾಡುತ್ತದೆ. ನಮ್ಮ ಚಿಕ್ಕಮಗಳೂರು ವರದಿಗಾರ ಚಾರ್ಮಾಡಿ ಘಾಟ್ ಮೂಲಕ ಹಾದುಹೋಗುವ ರಸ್ತೆ ಯಾಕೆ ಅಪಾಯಕಾರಿಯಾಗಿ (dangerous) ಪರಿಣಮಿಸುತ್ತಿದೆ ಅನ್ನೋದನ್ನು ವಿವರಿಸಿದ್ದಾರೆ. ಇವರು ಗುಡ್ಡದ ಪೂರ್ತಿ ಮೇಲ್ಭಾಗದಲ್ಲಿ ನಿಂತಿರುವುದರಿಂದ ಘಾಟ್ ಮೂಲಕ ಹಾದು ಹೋಗುವ ರಸ್ತೆಯನ್ನು ಮತ್ತು ಗುಡ್ಡ ಕುಸಿತ ಎಲ್ಲೆಲ್ಲಿ ಉಂಟಾಗಿದೆ ಅನ್ನೋದನ್ನು ನೋಡಬಹುದಾಗಿದೆ. ಘಾಟ್ ಪ್ರದೇಶದಲ್ಲಿ ಸುಮಾರು 10 ಕಡೆ ಕುಸಿತವುಂಟಾಗಿದೆ. ಚಾರ್ಮಾಡಿ ಗುಡ್ಡಗಾಡು ಪ್ರದೇಶ ಕಣ್ಣಿಗೆ ಎಷ್ಟು ರಮಣೀಯವೋ ಅಷ್ಟೇ ಅಪಾಯಕಾರಿಯೂ ಹೌದು.

ಇದನ್ನೂ ಓದಿ:  ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಹುಚ್ಚು ಸಾಹಸಗಳನ್ನು ಮುಂದುವರಿಸಿರುವ ಅಲ್ಪಮತಿ ಪ್ರವಾಸಿಗರು!

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More