AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಕ್ಕೆ ಸುಬ್ರಹ್ಮಣ್ಯ ಸಮೀಪ ನಕ್ಸಲರ ಚಲನವಲನ ಪತ್ತೆ; ಮನೆಗೆ ಭೇಟಿ ನೀಡಿ ಮೊಬೈಲ್ ಚಾರ್ಚ್ ಮಾಡಿರುವ ತಂಡ

ದಕ್ಷಿಣ ಕನ್ನಡ ಜಿಲ್ಲೆಯ ‌ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶಂಕಿತ ನಕ್ಸಲರು ಭೇಟಿ ನೀಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮನೆಯವರ ಜೊತೆ ಸುಮಾರು ಒಂದು ತಾಸಿಗೂ ಅಧಿಕ ಕಾಲ ಮಾತುಕತೆ ನಡೆಸಿ ಮೊಬೈಲ್ ಚಾರ್ಜ್ ಮಾಡಿ ಅಲ್ಲಿಂದ ತೆರಳಿದ್ದಾರೆ ಎನ್ನಲಾಗುತ್ತಿದೆ.

ಕುಕ್ಕೆ ಸುಬ್ರಹ್ಮಣ್ಯ ಸಮೀಪ ನಕ್ಸಲರ ಚಲನವಲನ ಪತ್ತೆ; ಮನೆಗೆ ಭೇಟಿ ನೀಡಿ ಮೊಬೈಲ್ ಚಾರ್ಚ್ ಮಾಡಿರುವ ತಂಡ
ಸಾಂದರ್ಭಿಕ ಚಿತ್ರ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: ಆಯೇಷಾ ಬಾನು|

Updated on:Mar 24, 2024 | 10:00 AM

Share

ಮಂಗಳೂರು, ಮಾರ್ಚ್​.24: ಕುಕ್ಕೆ ಸುಬ್ರಹ್ಮಣ್ಯ ಸಮೀಪ ನಕ್ಸಲರ (Naxals) ಚಲನವಲನದ ಶಂಕೆ ವ್ಯಕ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ‌ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶಂಕಿತ ನಕ್ಸಲರು ಭೇಟಿ ನೀಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಶನಿವಾರ ಸಂಜೆ 6 ಗಂಟೆ ಸುಮಾರಿಗೆ ಸಣ್ಣದಾಗಿ ಮಳೆಯಾಗುತ್ತಿದ್ದ ಸಂದರ್ಭ ಮೂವರು ಶಂಕಿತರ ತಂಡ ಐನೆಕಿದು ಗ್ರಾಮದ ಅಶೋಕ್ ಎಂಬುವರ ಮನೆಗೆ ಭೇಟಿ ನೀಡಿದ್ದಾರೆ. ಮನೆಯವರ ಜೊತೆ ಸುಮಾರು ಒಂದು ತಾಸಿಗೂ ಅಧಿಕ ಕಾಲ ಮಾತುಕತೆ ನಡೆಸಿ ಮೊಬೈಲ್ ಚಾರ್ಜ್ ಮಾಡಿ ಅಲ್ಲಿಂದ ತೆರಳಿದ್ದಾರೆ ಎನ್ನಲಾಗುತ್ತಿದೆ.

ಬಂದಿದ್ದ ಮೂವರ ಬಳಿಯೂ ಶಸ್ತ್ರಾಸ್ತ್ರಗಳಿದ್ದ ಮಾಹಿತಿ ಸಿಕ್ಕಿದೆ. ವಾರದ ಹಿಂದೆ ದಕ್ಷಿಣ ಕನ್ನಡ- ಕೊಡಗು ಗಡಿ ಭಾಗದ ಕೂಜಿಮಲೆಯ ಎಸ್ಟೇಟ್‌ ಅಂಗಡಿಗೆ ಬಂದಿದ್ದ ಶಂಕಿತ ನಕ್ಸಲರು, ಇಂದು ಐನೆಕಿದುಯಲ್ಲಿ ಕಾಣಿಸಿಕೊಂಡಿದ್ದಾರೆ. ಕೂಜಿಮಲೆ ಮತ್ತು ಐನೆಕಿದು ನಡುವೆ ಸುಮಾರು 25 ಕಿ.ಮೀ. ಅಂತರವಿದೆ. ಇದೇ ಭಾಗದಲ್ಲಿ ನಕ್ಸಲ್‌ ನಿಗ್ರಹ ದಳ ನಿರಂತರ ಶೋಧ ಕಾರ್ಯ ನಡೆಸುತ್ತಿದ್ದರೂ ಎಎನ್‌ಎಫ್ ತಂಡಕ್ಕೆ ಶಂಕಿತರು ಕಾಣಿಸಿರಲಿಲ್ಲ. ನಕ್ಸಲರು ಭೇಟಿ ನೀಡಿದ ಪ್ರದೇಶ ಕುಮಾರಪರ್ವತ ಸಾಲಿನ ಪಾಟಿ ಕುಮೇರಿ ದಟ್ಟ ಕಾಡಿಗೆ ಹತ್ತಿರವಿದೆ. ಇಲ್ಲಿಂದ ಸೋಮವಾರಪೇಟೆ ಮತ್ತು ಇನ್ನೊಂದು ದಾರಿಯಾಗಿ ಗಾಳಿಬೀಡು. ಆ ಬಳಿಕ ಸಂಪಾಜೆ ಮೂಲಕ ಕೇರಳಕ್ಕೆ ಅರಣ್ಯದೊಳಗೆ ಸಂಪರ್ಕ ಸಾಧಿಸಲು ಸಾಧ್ಯವಿದೆ. ಸದ್ಯ ನಕ್ಸಲ್‌ ನಿಗ್ರಹ ದಳ ಶೋಧ ಚುರುಕುಗೊಳಿಸಿದೆ.

ಇದನ್ನೂ ಓದಿ: ಕೇರಳ: ಆರಾಟ್ಟುಪುಳ ಉತ್ಸವದ ವೇಳೆ ಎರಡು ಆನೆಗಳ ಕಾಳಗ

ಇನ್ನು ವಾರದ ಹಿಂದೆ ಶಂಕಿತ ನಕ್ಸಲರ ಚಲನವಲನದ ವರದಿಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ-ಕೊಡಗು ಗಡಿ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ಪಡೆ(ಎಎನ್‌ಎಫ್) ಸಿಬ್ಬಂದಿ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿತ್ತು.

ಮಡಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಸುಬ್ರಹ್ಮಣ್ಯ ಸಮೀಪದ ಕೂಜಮಲೈ ರಬ್ಬರ್ ಎಸ್ಟೇಟ್ ಬಳಿಯ ಅಂಗಡಿಯೊಂದರಲ್ಲಿ ಶನಿವಾರ ಸಂಜೆ 8 ಮಂದಿ ಶಂಕಿತ ನಕ್ಸಲರ ತಂಡ, ಶಸ್ತ್ರಾಸ್ತ್ರಗಳೊಂದಿಗೆ ದಿನಸಿ ವಸ್ತುಗಳನ್ನು ಖರೀದಿಸಿದರು ಎಂಬ ಮಾಹಿತಿ ಸಿಕ್ಕಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:59 am, Sun, 24 March 24

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?