ಪಕ್ಷೇತರ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುವುದಿಲ್ಲ: ಸಂಸದ ಪ್ರತಾಪ್​ ಸಿಂಹ ಸ್ಪಷ್ಟನೆ

ಈ ಬಾರಿ ಸಂಸದ ಪ್ರತಾಪ್ ಸಿಂಹಗೆ ಮೈಸೂರು ಟಿಕೆಟ್ ಮಿಸ್ ಆಗುವ ಸಾಧ್ಯತೆ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಪ್ರತಾಪ್ ಸಿಂಹ ಬದಲಿಗೆ ರಾಜ ವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರಿಗೆ ಟಿಕೆಟ್ ನೀಡಲಾಗುತ್ತೆ ಎನ್ನಲಾಗುತ್ತಿದೆ. ಮೈಸೂರಿನಲ್ಲಿ ಮಾತನಾಡಿರುವ ಪ್ರತಾಪ್ ಸಿಂಹ, ಪಕ್ಷೇತರ ಅಭ್ಯರ್ಥಿಯಾಗಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುವುದಿಲ್ಲ: ಸಂಸದ ಪ್ರತಾಪ್​ ಸಿಂಹ ಸ್ಪಷ್ಟನೆ
ಸಂಸದ ಪ್ರತಾಪ್​ ಸಿಂಹ
Edited By:

Updated on: Mar 13, 2024 | 3:04 PM

ಮೈಸೂರು, ಮಾರ್ಚ್​​ 13: ಎರಡು ಬಾರಿ ಮೈಸೂರು-ಕೊಡಗು ಸಂಸದನಾಗಿ ಕೆಲಸ ಮಾಡಿದ್ದ ಸಂಸದ ಪ್ರತಾಪ್ ಸಿಂಹ (Pratap Simha) ಗೆ ಈ ಬಾರಿ ಟಿಕೆಟ್ ಕೈತಪ್ಪುವ ಆತಂಕ ಎದುರಾಗಿದೆ. ಪ್ರತಾಪ್ ಸಿಂಹ ಬದಲಿಗೆ ರಾಜ ವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರಿಗೆ ಟಿಕೆಟ್ ನೀಡಲಾಗುತ್ತೆ ಎನ್ನಲಾಗುತ್ತಿದೆ. ಸದ್ಯ ಈ ವಿಚಾರವಾಗಿ ನಗರದಲ್ಲಿ ಮಾತನಾಡಿರುವ ಬಿಜೆಪಿ ಸಂಸದ ಪ್ರತಾಪ್​ ಸಿಂಹ, ಪಕ್ಷೇತರ ಅಭ್ಯರ್ಥಿಯಾಗಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. 1960ರಲ್ಲಿ ನಮ್ಮಪ್ಪ ಜನಸಂಘದಲ್ಲಿ ಇದ್ದರು. ಕರ್ನಾಟಕದಲ್ಲಿ ಎಷ್ಟು ಸಂಸದರ ಪರವಾಗಿ ಹೋರಾಟ ಆಗುತ್ತಿದೆ? ಟಿಕೆಟ್ ಕೊಡಬೇಕು ಅಂತಾ ಜನ ಕೇಳುತ್ತಿದ್ದಾರೆ, ನನಗೆ ಅಷ್ಟೇ ಸಾಕು ಎಂದು ಹೇಳಿದ್ದಾರೆ.

ನನ್ನ ಜೀವ ಇರುವವರೆಗೂ ನಾನು ಮೋದಿ ಭಕ್ತ: ಪ್ರತಾಪ್ ಸಿಂಹ

‘ಪ್ರತಾಪ್ ಸಿಂಹ ಹೆಸರು ಕೆಡಿಸಿಕೊಂಡಿದ್ದಕ್ಕೆ ಟಿಕೆಟ್ ತಪ್ಪುತ್ತಿದೆ’ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಹೆಸರು ಕೆಡಿಸಿಕೊಂಡಿದ್ದಕ್ಕೆ ಇಲ್ಲಿ ಸೋತು, ಬಾದಾಮಿಗೆ ಹೋದ್ರಾ? ನಂತರ ಬಾದಾಮಿಯಲ್ಲಿ ಹೆಸರು ಕೆಡಿಸಿಕೊಂಡಿದ್ದಕ್ಕೆ ಇಲ್ಲಿಗೆ ಬಂದ್ರಾ? ಸಿದ್ದರಾಮಯ್ಯ ಹಿರಿಯ ನಾಯಕ, ಈ ರೀತಿ ಮಾತನಾಡಬಾರದು. ಅವರು ಎಷ್ಟು ಚುನಾವಣೆಯಲ್ಲಿ ಸೋತಿಲ್ಲ ಹೇಳಿ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಮಹಾರಾಜರನ್ನೇ ರಾಜಕೀಯಕ್ಕೆ ತಂದ ಪಕ್ಷದ ಮುಖಂಡರಿಗೆ ನಮೋ! ಯದುವೀರ್​​ ರಾಜಕೀಯ ಪ್ರವೇಶ ಬಗ್ಗೆ ಪ್ರತಾಪ್​ ಸಿಂಹ ಟಾಂಗ್

ನನ್ನ ಜೀವ ಇರುವವರೆಗೂ ನಾನು ಮೋದಿ ಭಕ್ತ. ಯಾರು ಏನೇ ಕೊಡುತ್ತೇನೆ ಎಂದರೂ ನಾನು ಎಲ್ಲೂ ಹೋಗುವುದಿಲ್ಲ. ಸಾಯುವವರೆಗೂ ನಾನು ಬಿಜೆಪಿ ಕಾರ್ಯಕರ್ತ ಎಂದಿದ್ದಾರೆ.

ಕರ್ನಾಟಕಕ್ಕೆ ಯಡಿಯೂರಪ್ಪ ಮೋದಿ ಇದ್ದ ಹಾಗೆ

ಟಿಕೆಟ್ ವಿಚಾರದಲ್ಲಿ ಬಿಎಸ್​​ ಯಡಿಯೂರಪ್ಪರನ್ನು ಎಳೆದು ತರಬೇಡಿ. ಬಿಎಸ್​ವೈ ಪಕ್ಷ ಕಟ್ಟದಿದ್ರೆ ರಾಜ್ಯದಲ್ಲಿ ಬಿಜೆಪಿ ಎಲ್ಲಿ ಇರುತ್ತಿತ್ತು? BSY ಬಿಜೆಪಿಯನ್ನು ಕಟ್ಟದಿದ್ರೆ ನಮ್ಮಂಥವರು ಎಂಪಿ ಆಗ್ತಿದ್ವಾ ಎಂದಿದ್ದಾರೆ. ಕರ್ನಾಟಕಕ್ಕೆ ಯಡಿಯೂರಪ್ಪ ಒಂದು ರೀತಿ ಮೋದಿ ಇದ್ದ ಹಾಗೆ. ಪ್ರಧಾನಿ ಮೋದಿ ನನಗೆ ಸದಾ ಪ್ರೇರಣೆ ಎಂದರು.

ಇದನ್ನೂ ಓದಿ: “ಯುವರಾಜರೇ ನಿಮಗೆ ನಿಮ್ಮದೇ ಘನತೆ ಇದೆ, ದಯವಿಟ್ಟು ರಾಜಕೀಯಕ್ಕೆ ಬರಬೇಡಿ” ಯದುವೀರ್‌ ಚುನಾವಣೆಗೆ ಸ್ಪರ್ಧಿಸದಂತೆ ಪೋಸ್ಟರ್‌ ಅಭಿಯಾನ

ಮೋದಿ ಏನೇ ನಿರ್ಧಾರ ತೆಗೆದುಕೊಂಡರೂ ನಾನು ಸ್ವೀಕರಿಸುತ್ತೇನೆ. ಮೋದಿಗಿಂತ ದೊಡ್ಡದು ಯಾವುದೂ ಇಲ್ಲ. ಅವಕಾಶ ಮಾಡಿಕೊಟ್ಟರೂ ತೃಪ್ತಿ ಇದೆ, ಕೊಡದಿದ್ದರೂ ತೃಪ್ತಿ ಇದೆ ಎಂದು ಹೇಳಿದ್ದಾರೆ.

ಪ್ರತಿಭಟನೆ ಮಾಡದಂತೆ ಪ್ರತಾಪ್​ ಸಿಂಹ ಮನವಿ

ಟಿಕೆಟ್​ ಕೈತಪ್ಪುವ ಸಾಧ್ಯತೆ ಹಿನ್ನೆಲೆ ಬೆಂಬಲಿಗರು ಪ್ರತಿಭಟನೆ ಮಾಡದಂತೆ ಮನವಿ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಲ್ಲದೇ ನಾನು ಏನೂ ಅಲ್ಲ. ಇಲ್ಲಿರುವ ಎರಡು ಫೋಟೋ ನೋಡಿ ಅರ್ಥ ಮಾಡಿಕೊಳ್ಳಿ. ನನ್ನ ರಾಜಕೀಯ ಅಸ್ತಿತ್ವ ಪ್ರಧಾನಿ ಮೋದಿ ಅವರಿಂದಲೇ. ಈ‌ ಹಿನ್ನೆಲೆಯಲ್ಲಿ ಯಾರು ಪ್ರತಿಭಟನೆ ಮಾಡಬೇಡಿ. ನಾವೆಲ್ಲ ಒಂದೇ ಕುಟುಂಬದವರು ಮೋದಿಗಾಗಿ ಕೆಲಸ ಮಾಡೋಣ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us