AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರ ಸಮಸ್ಯೆ ಕೇಳಲು ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ, ಮೇಡಂ: DC ಸಿಂಧೂರಿ ಪರ ಪ್ರತಾಪ್ ಸಿಂಹ ಭರ್ಜರಿ ಬ್ಯಾಟಿಂಗ್

ಡಿಸಿ ಜನರ ಬಳಿಗೆ ಹೋಗಿ ಅವರ ಸಮಸ್ಯೆ ಕೇಳುತ್ತಿದ್ದಾರೆ. ಇದನ್ನು ಎಲ್ಲರೂ ಬೆಂಬಲಿಸಬೇಕು. ನೀವು ಮಾಡಲು ಆಗದ ಕೆಲಸವನ್ನ ಡಿಸಿ‌ ಮಾಡುತ್ತಿದ್ದಾರೆ, ಮಾಡಲು ಬಿಡಿ.

ಜನರ ಸಮಸ್ಯೆ ಕೇಳಲು ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ, ಮೇಡಂ: DC ಸಿಂಧೂರಿ ಪರ ಪ್ರತಾಪ್ ಸಿಂಹ ಭರ್ಜರಿ ಬ್ಯಾಟಿಂಗ್
MP ಪ್ರತಾಪ್ ಸಿಂಹ ಮತ್ತು DC ರೋಹಿಣಿ ಸಿಂಧೂರಿ
TV9 Web
| Edited By: |

Updated on:Apr 07, 2022 | 5:42 PM

Share

ಮೈಸೂರು: ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮತ್ತು ಶಾಸಕರ ನಡುವಿನ ಜಟಾಪಟಿ ವಿಚಾರಕ್ಕೆ ಸಂಸದ ಪ್ರತಾಪ್ ಸಿಂಹ ಪ್ರತಿಕಿಯಿಸಿದ್ದಾರೆ. ಜಿಲ್ಲಾಧಿಕಾರಿ ಪರವಾಗಿ ಪ್ರತಾಪ್ ಸಿಂಹ ಭರ್ಜರಿಯಾಗಿ ಮಾತನಾಡಿದ್ದಾರೆ.

ಕ್ಷೇತ್ರದ ಜನರ ಸಮಸ್ಯೆ ಕೇಳಲು ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ. ಕ್ಷೇತ್ರವನ್ನು ಯಾವ ಶಾಸಕರು ಹಾಗೂ ಎಂಪಿಗೂ ಬರೆದುಕೊಟ್ಟಿರುವುದಿಲ್ಲ ಎಂದು ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಗ್ರಾಮ ಪಂಚಾಯತಿ ಚುನಾವಣೆ ಮುಗಿದ ಮೇಲೆ ನಾನು ಕೂಡ ಜನರ ಬಳಿ ಹೋಗುತ್ತೇನೆ. ಯಾರು ತಡೆಯುತ್ತಾರೆ ನೋಡೋಣ ಎಂದು ಗುಡುಗಿದ್ದಾರೆ.

ನಾಲ್ಕು ಜನ ಶಾಸಕರು ಒಟ್ಟಾಗಿ ಡಿಸಿ ವಿರುದ್ಧ ಸುದ್ದಿಗೋಷ್ಠಿ ನಡೆಸಿ‌ ಹೆದರಿಸುತ್ತಿದ್ದೀರಾ? ನೀವೂ ಹೆದರಿಸಿದರೆ ನಾವು ಹೆದರಬೇಕಾ? ನೀವು ಜನರ ಸಮಸ್ಯೆ ಬಗೆಹರಿಸಿದ್ದರೆ, ಜನ ಯಾಕೆ ಡಿಸಿ ಬಳಿ ಕಷ್ಟ ಹೇಳಿಕೊಂಡು ಹೋಗುತ್ತಿದ್ದರು? ಎಂದು ಶಾಸಕರನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: DC ಸಿಂಧೂರಿಗೆ ‘ಸಾಮ್ರಾಟ್’ ಅಶೋಕ್​ ಕ್ಲಾಸ್​.. ಜನಪ್ರತಿನಿಧಿಗಳ ಜೊತೆ ಹೇಗೆ ನಡೆದುಕೊಳ್ಳಬೇಕು ಎಂದು ತಿಳಿಸಿಕೊಟ್ಟಿದ್ದೇನೆ

ಶಾಸಕರು, ಸಂಸದರು ಎಂಬುದು ಜನರ ಕೆಲಸ ಮಾಡಲು ಇರುವ ಹುದ್ದೆ ಅಷ್ಟೇ. ಡಿಸಿ ಜನರ ಬಳಿಗೆ ಹೋಗಿ ಅವರ ಸಮಸ್ಯೆ ಕೇಳುತ್ತಿದ್ದಾರೆ. ಇದನ್ನು ಎಲ್ಲರೂ ಬೆಂಬಲಿಸಬೇಕು. ನೀವು ಮಾಡಲು ಆಗದ ಕೆಲಸವನ್ನ ಡಿಸಿ‌ ಮಾಡುತ್ತಿದ್ದಾರೆ, ಮಾಡಲು ಬಿಡಿ ಎಂದು ಕಟುವಾಗಿ ಹೇಳಿದ್ದಾರೆ.

ಮೊದಲು ಶಾಸಕರ ಹಕ್ಕು ಚ್ಯುತಿ ಕುರಿತು ಪುಸ್ತಕ ಓದಿಕೊಳ್ಳಿ ಎಂದು ಶಾಸಕರಿಗೆ ಸಲಹೆ ನೀಡಿದ ಸಂಸದ, ಮೂರು ನಾಲ್ಕು ಬಾರಿ ಶಾಸಕರಾದವರು ನೀವು, ಯಾವುದು ಹಕ್ಕು ಚ್ಯುತಿ ಎಂಬುದು ನಿಮಗೆ ಗೊತ್ತಿಲ್ಲವೇ? ಜನರ ಸಮಸ್ಯೆ ಕೇಳುವ ಸಭೆಯಲ್ಲಿ ನಿಮ್ಮನ್ನು ಗದ್ದುಗೆ ಮೇಲೆ‌ ಕೂರಿಸದಿದ್ದರೆ ಅದು ಹಕ್ಕು ಚ್ಯುತಿಯಾ? ಎಂದು ವ್ಯಂಗ್ಯವಾಗಿ ಮಾತನಾಡಿದ್ದಾರೆ.

ಇದನ್ನೂ ಓದಿ: ಮೈಸೂರು ಜಿಲ್ಲಾಧಿಕಾರಿಗೆ ಕೊಲೆಸ್ಟ್ರಾಲ್ ತಲೆಗೆ ಹತ್ತಿದೆ, ರೋಹಿಣಿ ಸಿಂಧೂರಿ ವಿರುದ್ಧ MLA, MLC ಆಕ್ರೋಶ

Published On - 2:05 pm, Wed, 2 December 20

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು