AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಯತ್ನಾಳ್​ ಒಬ್ಬ ದುರಹಂಕಾರಿ ನಾಯಕ: ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ

ಶಾಸಕ ಬಸನಗೌಡ ಯತ್ನಾಳ್ ದುರಂತ, ದುರಹಂಕಾರಿ ನಾಯಕ. ಅವರನ್ನು ಪಕ್ಷದಿಂದ ಉಚ್ಛಾಟನೆಗೊಳಿಸಲು 65 ಶಾಸಕರು ಸಹಿ ಮಾಡಿದ್ದಾರೆ.

ಶಾಸಕ ಯತ್ನಾಳ್​ ಒಬ್ಬ ದುರಹಂಕಾರಿ ನಾಯಕ: ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ
ಎಂ.ಪಿ.ರೇಣುಕಾಚಾರ್ಯ
shruti hegde
| Edited By: |

Updated on: Apr 04, 2021 | 6:49 PM

Share

ದಾವಣಗೆರೆ: ಶಾಸಕ ಬಸನಗೌಡ ಯತ್ನಾಳ್ ದುರಂತ, ದುರಹಂಕಾರಿ ನಾಯಕ. ಅವರನ್ನು ಪಕ್ಷದಿಂದ ಉಚ್ಛಾಟನೆಗೊಳಿಸಲು 65 ಶಾಸಕರು ಸಹಿ ಮಾಡಿದ್ದಾರೆ. ಅವರನ್ನು ಪಕ್ಷಕ್ಕೆ ವಾಪಸ್ಸು ಕರೆತಂದ ತಪ್ಪಿಗೆ ಯಡಿಯೂರಪ್ಪನವರಿಗೆ ಇಂಥ ಗಿಫ್ಟ್ ಕೊಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹರಿಹರದಲ್ಲಿ ಯತ್ನಾಳ್ ವಿರುದ್ಧ ಹರಿಹಾಯ್ದಿದ್ದಾರೆ.

ಪದೇ ಪದೇ ಸಿಎಂ ಸ್ಥಾನಕ್ಕೆ ಸವಾಲು ಹಾಕುತ್ತಾರೆ. ಪ್ರತಿ ತಿಂಗಳು ಒಂದೊಂದು ಡೇಟ್ ಕೊಡುತ್ತಾರೆ. ಅವರು ದಿನನಿತ್ಯ ಅರಿವೆ ಹಾವು ಬಿಡ್ತಾರೆ ಅಷ್ಟೇ. ಮುಖ್ಯಮಂತ್ರಿ‌ ಬದಲಾವಣೆ ಆಗುತ್ತೆ ಅಂತಾರೆ. ಎಲ್ಲವೂ ಸುಳ್ಳು ಆಗಲಿದೆ. ಯತ್ನಾಳ್ ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಯತ್ನಾಳ್‌ ಹೇಳಿಕೆಗಳನ್ನು ಲೇವಡಿ ಮಾಡಿದ್ದಾರೆ.

ವಿಜಯೇಂದ್ರ, ಡಿ.ಕೆ. ಶಿವಕುಮಾರ್ ಸೇರಿ ಹೊಸ ಪಕ್ಷ ಕಟ್ಟುತ್ತಾರೆ ಎಂಬ ಮಾತಿಗೆ ಪ್ರತಿಕ್ರಿಯೆ ನೀಡಿದ ರೇಣುಕಾಚಾರ್ಯ, ವಿಜಯೇಂದ್ರ ಪಕ್ಷದ ರಾಜ್ಯ ಉಪಾಧ್ಯಕ್ಷರು. ರಾಜ್ಯಾದ್ಯಂತ ಓಡಾಡಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ವಿನಾಕಾರಣ ಅವರ ಮೇಲೆ ಆರೋಪಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಈಶ್ವರಪ್ಪ ಹಾಗೂ ಯಡಿಯೂರಪ್ಪ ಮಧ್ಯೆ ವೈಮನಸ್ಸಿನ ಶಮನದ ಬಗ್ಗೆ ಮಾತನಾಡಿ, ಪಕ್ಷದ ಆರಂಭ ಹಂತದಿಂದ ಯಡಿಯೂರಪ್ಪ ಮತ್ತು ಅನಂತಕುಮಾರ್ ಪಕ್ಷ ಕಟ್ಟಿ ಬೆಳೆಸಿದ್ದಾರೆ. ಈಶ್ವರಪ್ಪನವರು‌ ಹಿರಿಯರು ಜೊತೆಗೆ ಅನುಭವಿಗಳು ಕೂಡಾ. ನಾಲ್ಕು ಗೋಡೆ ಮಧ್ಯೆ ಮಾತನಾಡಬೇಕಾದ ವಿಷಯವನ್ನು‌ ರಾಜ್ಯಪಾಲರ ಬಳಿ ಒಯ್ದಿದ್ದು‌ ತಪ್ಪು. ಅನಗತ್ಯವಾಗಿ ಕಾಂಗ್ರೆಸ್‌ನವರ ಕೈಗೆ ಅಸ್ತ್ರ ಕೊಟ್ಟಂತಾಗಿದೆ ಎಂದು ಹೇಳಿದ್ದಾರೆ.

ಉಪಚುನಾವಣೆ ಹೊತ್ತಲ್ಲಿ ಇದು ಸರಿಯಲ್ಲ. ವಿಶೇಷ ಅನುದಾನ ನೀಡುವ ಪರಮಾಧಿಕಾರ ಸಿಎಂ ಅವರಿಗಿದೆ. ಈ ವಿಷಯವನ್ನು ಚರ್ಚಿಸಿ ಪರಿಹರಿಸಿಕೊಳ್ಳಬಹುದು. ಈಶ್ವರ ಮತ್ತು ಯಡಿಯೂರಪ್ಪ ಮಧ್ಯೆ ಯಾವುದೇ ಮನಸ್ಥಾಪವಿಲ್ಲ. ವರಿಷ್ಠರಿಗೆ ಈ ಬಗ್ಗೆ ಮಾಹಿತಿ ನೀಡಿದ್ದೇವೆ ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ: ಹಾರೆ ಹಿಡಿದು ಮಣ್ಣು ಅಗೆದ ಶಾಸಕ ಎಂ.ಪಿ. ರೇಣುಕಾಚಾರ್ಯಗೆ ಕೂಲಿ ಕಾರ್ಮಿಕರಿಂದ ಹೂ ಹಾರ -ಹೂ ಮಳೆ

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!