AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಬಗಟ್ಟೆ ಕೊವಿಡ್ ಕೇರ್ ಸೆಂಟರ್​ನಲ್ಲಿ ಕೆಲಸ ಮಾಡಿದ್ದ ಪ್ರತಿಯೊಬ್ಬರಿಗೂ 1 ಸಾವಿರ ರೂ. ಹಂಚಿದ ಎಂ ಪಿ ರೇಣುಕಾಚಾರ್ಯ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮದ ಕೊವಿಡ್ ಕೇರ್​ ಸೆಂಟರ್​ನಲ್ಲಿ ಹಲವರು ಕೆಲಸ ಮಾಡಿದ್ದರು. ಈ ಕೊರೊನಾ ಚಿಕಿತ್ಸಾ ಕೇಂದ್ರದಲ್ಲಿ ಕಳೆದ 2 ತಿಂಗಳಿಂದ 500ಕ್ಕೂ ಹೆಚ್ಚು ಸೋಂಕಿತರಿಗೆ ಚಿಕಿತ್ಸೆ ನೀಡಲಾಗಿತ್ತು.

ಅರಬಗಟ್ಟೆ ಕೊವಿಡ್ ಕೇರ್ ಸೆಂಟರ್​ನಲ್ಲಿ ಕೆಲಸ ಮಾಡಿದ್ದ ಪ್ರತಿಯೊಬ್ಬರಿಗೂ 1 ಸಾವಿರ ರೂ. ಹಂಚಿದ ಎಂ ಪಿ ರೇಣುಕಾಚಾರ್ಯ
ರೇಣುಕಾಚಾರ್ಯ ಸಹಾಯ
TV9 Web
| Edited By: |

Updated on:Jul 19, 2021 | 5:09 PM

Share

ದಾವಣಗೆರೆ: ಕೊವಿಡ್ ಕೇರ್ ಸೆಂಟರ್​ನಲ್ಲಿ ಕೆಲಸ ಮಾಡಿದ ಪ್ರತಿಯೊಬ್ಬರಿಗೂ ತಲಾ 1 ಸಾವಿರ ರೂಪಾಯಿಯನ್ನು ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹಂಚಿದ್ದಾರೆ. ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ಹಲವು ಸತ್ಕಾರ್ಯಗಳಿಂದ ಜನರ ಮನಗೆದ್ದಿದ್ದ ಶಾಸಕರು ಈಗ ಕೊವಿಡ್ ಕೇರ್ ಸೆಂಟರ್​ನಲ್ಲಿ ಶ್ರಮಿಸಿದ ಪ್ರತಿಯೊಬ್ಬರಿಗೂ 1 ಸಾವಿರ ರೂಪಾಯಿ ಹಣ ನೀಡಿದ್ದಾರೆ.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮದ ಕೊವಿಡ್ ಕೇರ್​ ಸೆಂಟರ್​ನಲ್ಲಿ ಹಲವರು ಕೆಲಸ ಮಾಡಿದ್ದರು. ಈ ಕೊರೊನಾ ಚಿಕಿತ್ಸಾ ಕೇಂದ್ರದಲ್ಲಿ ಕಳೆದ 2 ತಿಂಗಳಿಂದ 500ಕ್ಕೂ ಹೆಚ್ಚು ಸೋಂಕಿತರಿಗೆ ಚಿಕಿತ್ಸೆ ನೀಡಲಾಗಿತ್ತು. ಕೊವಿಡ್ ಕೇರ್ ಸೆಂಟರ್​ನಲ್ಲಿ ಸೇವೆ ಸಲ್ಲಿಸಿದ ನರ್ಸ್​ಗಳು, ಅಡುಗೆ ಸಹಾಯಕಿಯರು, ಪೌರಕಾರ್ಮಿಕರಿಗೆ ರೇಣುಕಾಚಾರ್ಯ ಹಣ ಹಂಚಿಕೆ ಮಾಡಿದ್ದಾರೆ. ಕಳೆದ 1 ತಿಂಗಳಿಂದ ಕೊವಿಡ್ ಕೇರ್ ಸೆಂಟರ್​ನಲ್ಲೇ ಉಳಿದಿದ್ದ ಎಂ.ಪಿ. ರೇಣುಕಾಚಾರ್ಯ ಎಲ್ಲರಿಗೂ ಹಣ ಹಂಚಿ ತೆರಳಿದ್ದಾರೆ.

ಕೊವಿಡ್ ಕೇರ್ ಸೆಂಟರ್ ವಾಸ್ತವ್ಯದಿಂದ ಹೊರಬಂದು ಮೃತ್ಯುಂಜಯ ಹೋಮ ಕೊವಿಡ್ ಕೇರ್ ಸೆಂಟರ್ ವಾಸ್ತವ್ಯದಿಂದ ಹೊರ ಬಂದ ರೇಣುಕಾಚಾರ್ಯ ಹೊನ್ನಾಳಿ ಹಿರೇಕಲ್ಮಠದಲ್ಲಿ ಮೃತ್ಯುಂಜಯ ಹೋಮ ಮಾಡಿಸಿಕೊಂಡಿದ್ದಾರೆ. ಕಳೆದ ಒಂದು ತಿಂಗಳಿನಿಂದ ಕೊವಿಡ್ ಕೇರ್ ಸೆಂಟರ್​ನಲ್ಲಿ ಸೋಂಕಿತರೊಂದಿಗೆ ವಾಸ್ತವ್ಯ ಇದ್ದ ರೇಣುಕಾಚಾರ್ಯ ಕೊವಿಡ್ ಕೇರ್ ಸೆಂಟರ್ ಬಂದ್ ಮಾಡಿದ ಹಿನ್ನೆಲೆ ಇಂದು ಮನೆಗೆ ಮರಳಿದ್ದಾರೆ. ಕೊವಿಡ್ ಕೇರ್ ಸೆಂಟರ್​ನಿಂದ ಹೊರ ಬಂದ ಹಿನ್ನೆಲೆ ಮಠದಲ್ಲಿ ಪತ್ನಿ ಸುಮಾ ಜೊತೆ ಸೇರಿ ಮೃತ್ಯುಂಜಯ ಹೋಮದಲ್ಲಿ ಪಾಲ್ಗೊಂಡಿದ್ದಾರೆ.

ನೀವು ಇರುವವರೆಗೂ ಕೊರೊನಾ ಸೋಂಕಿನ ಐದಾರು ಅಲೆ ಬಂದರೂ ನಮಗೆ ಏನೂ ಆಗುವುದಿಲ್ಲ ಎಂದು ಜನರು ರೇಣುಕಾಚಾರ್ಯಗೆ ಶ್ಲಾಘನೆ ವ್ಯಕ್ತಪಡಿಸಿದ್ದರು. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ತಿಮ್ಲಾಪುರ ಗ್ರಾಮಸ್ಥರು ಶಾಸಕ ರೇಣುಕಾಚಾರ್ಯ ಅವರಿಗೆ ಈ ಮೊದಲು ವಂದನಾ ಕಾರ್ಯಕ್ರಮ ಏರ್ಪಡಿಸಿದ್ದರು. ಶಾಸಕ ರೇಣುಕಾಚಾರ್ಯ ಗ್ರಾಮದಲ್ಲಿ ಲಸಿಕೆ ಅಭಿಯಾನವನ್ನು ಆರಂಭಿಸಿದ ಕಾರಣಕ್ಕೆ ಶಾಸಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಗ್ರಾಮಸ್ಥರು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ನಿಮ್ಮಂತಹ ಆತ್ಮಸ್ಥೈರ್ಯ ತುಂಬುವ ಶಾಸಕರಿದ್ದರೇ ಸಾಕು. ಯಾವ ಅಲೆ ಬಂದರೂ ನಮಗೆ ಏನೂ ಆಗುವುದಿಲ್ಲ ಎಂದು ಶಾಸಕ ರೇಣುಕಾಚಾರ್ಯಗೆ ಧನ್ಯವಾದ ಅರ್ಪಿಸಿದ ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿದ್ದರು. ಇದೇ ವೇಳೆ ಮಾತನಾಡಿದ ಶಾಸಕ ರೇಣುಕಾಚಾರ್ಯ, ನಾನು ರಾತ್ರಿ ‌ಒಂದು ಗಂಟೆಗೆ ಮಲಗಿ ಬೆಳಗ್ಗೆ ಐದು ಗಂಟೆಗೆ ಎದ್ದು ಸೋಂಕಿತರಿಗೆ ಯೋಗ ಮಾಡಿಸುವೆ. ಮೂರನೇ ಅಲೆ ಎದುರಿಸಲು ಹೊನ್ನಾಳಿ ಮತ್ತು ನ್ಯಾಮತಿ‌ ತಾಲೂಕುಗಳಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ಎಷ್ಟೇ ಕೊರೊನಾ ಅಲೆ ಬರಲಿ..ನೀವಿರುವವರೆಗೂ ನಮಗೆ ಏನೂ ಆಗಲ್ಲ; ಶಾಸಕ ರೇಣುಕಾಚಾರ್ಯಗೆ ಗ್ರಾಮಸ್ಥರಿಂದ ಶ್ಲಾಘನೆ

ಕೊರೊನಾದಿಂದ ಅನಾಥಳಾದ ಬಾಲಕಿಯನ್ನು ದತ್ತು ಪಡೆಯಲು ನಿರ್ಧರಿಸಿದ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ

Published On - 4:58 pm, Mon, 19 July 21

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ