AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸ್ಕಿ ಉಪಚುನಾವಣಾ ಪ್ರಚಾರದ ವೇಳೆ ಮಿರ್ಚಿ ಕರಿದ ಶಾಸಕ ರೇಣುಕಾಚಾರ್ಯ

ಇಂದು ಪ್ರತಾಪ್​ ಗೌಡ ಪಾಟೀಲ್​ ಪರವಾಗಿ ಮಸ್ಕಿ ಕ್ಷೇತ್ರದ ರಂಗಾಪುರ ಗ್ರಾಮ ಸೇರಿ ಸಾಕಷ್ಟು ಕಡೆಗಳಲ್ಲಿ ರೇಣುಕಾಚಾರ್ಯ ಪ್ರಚಾರ ಮಾಡಿದ್ದಾರೆ.

ಮಸ್ಕಿ ಉಪಚುನಾವಣಾ ಪ್ರಚಾರದ ವೇಳೆ ಮಿರ್ಚಿ ಕರಿದ ಶಾಸಕ ರೇಣುಕಾಚಾರ್ಯ
ಮಿರ್ಚಿ ಕರಿದ ರೇಣುಕಾಚಾರ್ಯ
ರಾಜೇಶ್ ದುಗ್ಗುಮನೆ
|

Updated on:Apr 07, 2021 | 8:18 PM

Share

ರಾಯಚೂರು: ಕೈಯಲ್ಲಿ ಸೌಟು. ಬಂಡಿಯಲ್ಲಿ ಬೇಯುತ್ತಿರುವ ಮಿರ್ಚಿ. ಪಕ್ಕದಲ್ಲಿ ಮಂಡಕ್ಕಿ. ಇದನ್ನು ನೋಡೋಕೆ ನೆರೆದಿದ್ದು ನೂರಾರು ಜನ. ಬಿಸಿಬಿಸಿ ಮಿರ್ಚಿ ಬಾಂಡೆಲಿಯಿಂದ ಹೊರ ಬರುತ್ತಿದ್ದಂತೆ ಪಾರ್ಸಲ್​ ಮಾಡೋಕೆ ಪ್ಯಾಕ್​ ಮಾಡಲಾಯಿತು. ಎಲ್ಲರೂ ಇದನ್ನು ಕೌತುಕದಿಂದ ನೋಡುತ್ತಿದ್ದರು.  ಅಷ್ಟಕ್ಕೂ ಇಲ್ಲಿ ಮಿರ್ಚಿ ಕರಿದವರು ಬೇರಾರೂ ಅಲ್ಲ, ಶಾಸಕ ಎಂ.ಪಿ.ರೇಣುಕಾಚಾರ್ಯ.

ಏಪ್ರಿಲ್ 17ರಂದು ಮಸ್ಕಿ ವಿಧಾನಸಭೆ ಉಪಚುನಾವಣೆ ನಡೆಯುತ್ತಿದ್ದು, ರಾಜಕಾರಣಿಗಳು ಇಲ್ಲಿಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ಎಲ್ಲಾ ಪಕ್ಷದವರಿಗೂ ಇದು ಪ್ರತಿಷ್ಠೆಯ ಕಣವಾಗಿದ್ದು, ಗೆಲ್ಲಲೇಬೇಕು ಎನ್ನುವ ಹಠಕ್ಕೆ ಬಿದ್ದಿದ್ದಾರೆ. ಈಗ ಶಾಸಕ ರೇಣುಕಾಚಾರ್ಯ ಅವರು ಬಿಜೆಪಿ ಪರ ಪ್ರಚಾರ ನಡೆಸಿದ್ದಾರೆ. ಇದೇ ವೇಳೆ ಅವರು ಮಿರ್ಚಿ ಕರಿದು ಎಲ್ಲರ ಗಮನ ಸೆಳೆದಿದ್ದಾರೆ.

ಬಿಜೆಪಿಯಿಂದ ಪ್ರತಾಪ್​ ಗೌಡ ಪಾಟೀಲ್​ ಹಾಗೂ ಕಾಂಗ್ರೆಸ್​​ನಿಂದ ಬಸನಗೌಡ ತುರವಿಹಾಳ ಉಪಚುನಾವಣಾ ಸಮರದ ಕಣದಲ್ಲಿದ್ದಾರೆ. ಇಂದು ಪ್ರತಾಪ್​ ಗೌಡ ಪಾಟೀಲ್​ ಪರವಾಗಿ ಮಸ್ಕಿ ಕ್ಷೇತ್ರದ ರಂಗಾಪುರ ಗ್ರಾಮ ಸೇರಿ ಸಾಕಷ್ಟು ಕಡೆಗಳಲ್ಲಿ ರೇಣುಕಾಚಾರ್ಯ ಪ್ರಚಾರ ಮಾಡಿದ್ದಾರೆ. ರಂಗಾಪುರ ಗ್ರಾಮದ ಸಿದ್ದಾಂತಿ ಮಠದ ಜಾತ್ರೆಯ ಟೆಂಟ್​ಗೆ ತೆರಳಿದ ರೇಣುಕಾಚಾರ್ಯ, ಅಲ್ಲಿಯೂ ಮತಯಾಚನೆ ಮಾಡಿದ್ದಾರೆ.

ಈ ವೇಳೆ ರೇಣುಕಾಚಾರ್ಯ ಅಲ್ಲಿನ ಅಂಗಡಿ ಒಂದಕ್ಕೆ ತೆರಳಿ ಮಂಡಕ್ಕಿ-ಚುರುಮುರಿ ಖರೀದಿ ಮಾಡಿದ್ದಾರೆ. ನಂತರ ಅಂಗಡಿಯಾತ ಮಿರ್ಚಿ-ಬೋಂಡಾ ಕರಿಯುತ್ತಿದ್ದರು. ಈ ವೇಳೆ ಸೌಟನ್ನು ತಾವೇ ತೆಗೆದುಕೊಂಡು ರೇಣುಕಾಚಾರ್ಯ ತಾವೇ ಮಿರ್ಚಿ ಕರಿದಿದ್ದಾರೆ.

ರೇಣುಕಾಚಾರ್ಯ ಈ ರೀತಿಯ ವಿಡಿಯೋಗಳ ಮೂಲಕ ಈ ಮೊದಲಿನಿಂದಲೂ ಗಮನ ಸೆಳೆಯುತ್ತಲೇ ಬಂದಿದ್ದಾರೆ. ಈ ಮೊದಲು ಅವರು ಬಸ್​ ಓಡಿಸಿ ಸುದ್ದಿಯಾಗಿದ್ದರು. ನೆರೆ ಉಂಟಾದ ಸ್ಥಳಕ್ಕೆ ತೆರಳಿ ಕ್ಯಾಮೆರಾಗೆ ಪೋಸ್​​​ ಕೊಡಲು ಹೋಗಿ ಅವರು ನಡೆದುಕೊಂಡಿದ್ದ ರೀತಿ ಕೂಡ ಭಾರೀ ಚರ್ಚೆ ಆಗಿತ್ತು.

ಇದನ್ನೂ ಓದಿ: ಪ್ರತಾಪಗೌಡ ಪಾಟೀಲ್ ಮಾರಾಟವಾಗಿಲ್ಲ, ಸ್ವಾಭಿಮಾನಕ್ಕೆ ಧಕ್ಕೆಯಾಗಿ ಕಾಂಗ್ರೆಸ್ ತೊರೆದಿದ್ದಾರೆ: ರೇಣುಕಾಚಾರ್ಯ

Karnataka ByElection 2021: ಮಸ್ಕಿ ಕ್ಷೇತ್ರದಲ್ಲಿ ಜನರಿಂದ ಅಭೂತ ಪೂರ್ವ ಬೆಂಬಲ ಸಿಗುತ್ತಿದೆ – ಸಿದ್ದರಾಮಯ್ಯ

Published On - 8:15 pm, Wed, 7 April 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ