AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋತಿ ದಾಳಿಯಿಂದ ರೇಣುಕಾಚಾರ್ಯ ಬಚಾವ್

ಜನರನ್ನು ಕಂಡ ತಕ್ಷಣ ಸಿಟ್ಟಿಗೆದ್ದು ದಾಳಿಗೆ ಮುಂದಾಗುವ ಸ್ವಭಾವವನ್ನು ಈ ಕೋತಿ ರೂಢಿಸಿಕೊಂಡಿದೆ. ಮಕ್ಕಳನ್ನು ರಸ್ತೆಗೆ ಬಿಡಲೂ ಜನರು ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕೋತಿ ದಾಳಿಯಿಂದ ರೇಣುಕಾಚಾರ್ಯ ಬಚಾವ್
ಕೋತಿಯನ್ನು ಸೆರೆ ಹಿಡಿಯಲು ವಿಶೇಷ ತಂಡ ಕರೆಸಲು ವಲಯ ಅರಣ್ಯಾಧಿಕಾರಿ ಮುಂದಾಗಿದ್ದಾರೆ
Ghanashyam D M | ಡಿ.ಎಂ.ಘನಶ್ಯಾಮ
| Edited By: |

Updated on:Dec 16, 2020 | 7:24 PM

Share

ದಾವಣಗೆರೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಕೋತಿ ದಾಳಿಯಿಂದ ಮಂಗಳವಾರ ಸ್ವಲ್ಪದರಲ್ಲಿ ಪಾರಾದರು.

ಪಟ್ಟಣದ ತಾಲೂಕು ಕಚೇರಿ ಎದುರು ಕೋತಿಯೊಂದು ಶಾಸಕರ ಮೇಲೆ ಎರಗುವುದರಲ್ಲಿತ್ತು. ಅಷ್ಟರಲ್ಲಿ ಎಚ್ಚೆತ್ತುಕೊಂಡ ಶಾಸಕರ ಪಟಾಲಂ, ರೇಣುಕಾಚಾರ್ಯರನ್ನು ದಾಳಿಯಿಂದ ರಕ್ಷಿಸಿತು. ಕಳೆದ ಒಂದು ತಿಂಗಳಿಂದ ಹೊನ್ನಾಳಿ ಜನರನ್ನು ಕಾಡುತ್ತಿರುವ ಕೋತಿ, ಈವರೆಗೆ 20ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿದೆ.

ಜನರನ್ನು ಕಂಡ ತಕ್ಷಣ ಸಿಟ್ಟಿಗೆದ್ದು ದಾಳಿಗೆ ಮುಂದಾಗುವ ಸ್ವಭಾವವನ್ನು ಈ ಕೋತಿ ರೂಢಿಸಿಕೊಂಡಿದೆ. ಮಕ್ಕಳನ್ನು ರಸ್ತೆಗೆ ಬಿಡಲೂ ಜನರು ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್ ನಿಲ್ದಾಣ, ಪುರಸಭೆ, ದುರ್ಗಿಗುಡಿ, ಟಿ.ಬಿ.ಸರ್ಕಲ್ ಪ್ರದೇಶದಲ್ಲಿ ಈ ಕೋತಿ ನಿತ್ಯ ಸಂಚರಿಸುತ್ತದೆ. ಕೋತಿಯನ್ನು ಕಂಡರೆ ಜನರು ಭೀತಿಯಿಂದ ಓಡಿ ಹೋಗ್ತಾರೆ. ಬಾಳೆಹಣ್ಣು ಕೊಡಲು ಹೋದರೂ ಕೋತಿ ದಾಳಿ ಮಾಡುವುದು ಬಿಡುವುದಿಲ್ಲ.

‘ಅರಣ್ಯ ಇಲಾಖೆಯವರು ಬಲೆ ತೆಗೆದುಕೊಂಡು ಬಂದು ಕೋತಿಯನ್ನು ಹಿಡಿಯಲು ಯತ್ನಿಸುತ್ತಾರೆ. ಆದರೆ ಕೋತಿ ಅವರಿಂದ ತಪ್ಪಿಸಿಕೊಳ್ಳುತ್ತಿದೆ. ಈ ಕೋತಿಗೆ ಅರವಳಿಕೆ ಮದ್ದು ನೀಡಿ ಹಿಡಿಯಬೇಕು’ ಎಂದು ಸ್ಥಳೀಯರಾದ ಸತೀಶ್​ ಒತ್ತಾಯಿಸಿದರು. ಕೋತಿಯನ್ನು ಸೆರೆ ಹಿಡಿಯಲು ವಿಶೇಷ ತಂಡ ಕರೆಸಲು ವಲಯ ಅರಣ್ಯಾಧಿಕಾರಿ ಮುಂದಾಗಿದ್ದಾರೆ ಎಂದು ತಹಶೀಲ್ದಾರ್ ತುಷಾರ ಟಿವಿ9ಗೆ ಪ್ರತಿಕ್ರಿಯಿಸಿದರು.

ಸಚಿವ ಸ್ಥಾನದ ಕನಸು ಕಾಣುತ್ತಿರುವ ರೇಣುಕಾಚಾರ್ಯ ಕ್ಷೇತ್ರದ ಜನಕ್ಕೆ ಈಗ ಕೋತಿ ಕಾಟ

Published On - 9:55 am, Wed, 16 December 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?